ಮಡಿಕೇರಿ ಮೇ.27 : ಮೂರ್ನಾಡು 33/11ಕೆವಿ ಎಂಯುಎಸ್ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ, ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗೆಯೇ ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್ 1 ನಲ್ಲೂರು, ಎಫ್ 2 ಬಾಳೆಲೆ, ಎಫ್2 ರಾಜಾಪುರ ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬಾಳೆಲೆ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









