ಸಿದ್ದಾಪುರ, ಮೆ 29: ಸಮಾಜದ ಬಗ್ಗೆ ಸದಾ ಕಾರ್ಯನಿರತರಾಗಿರುವ ಪತ್ರಕರ್ತರು ಕೆಲಸದ ಒತ್ತಡಗಳ ಮಧ್ಯೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕೆಂದು ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಡಾ. ಕಿರಣ್ ಎಸ್. ರಾಜ್ ಕರೆ ನೀಡಿದರು.
ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕಿನ ಪತ್ರಕರ್ತರ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸಮಾಜದ ಬಗ್ಗೆ ಇರುವ ಕಾಳಜಿಯಿಂದ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ತಮ್ಮ ಆರೋಗ್ಯ ಹಾಗೂ ಮನೆಯವರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದರ ಜತೆಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದರ ಮೂಲಕ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.
ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಿದ್ದಾಪುರ ಹಾಗೂ ವಿರಾಜಪೇಟೆಯಲ್ಲಿ ಹೃದಯಾ ತಪಾಸಣೆ ಸೇರಿದಂತೆ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಉಪಾಧ್ಯಕ್ಷ ಪುತ್ತಂ ಪ್ರದೀಪ್, ನಿರ್ದೇಶಕರಾದ ಮಂಜುನಾಥ್, ಕಿಶೋರ್ ಶೆಟ್ಟಿ, ರವಿಕುಮಾರ್, ಹಿಲ್ ಬ್ಲೂಮ್ಸ್ ಆಸ್ಪತ್ರೆಯ ವ್ಯವಸ್ಥಾಪಕರಾದ ಸಿರಾಜುದ್ದೀನ್, ಸಿಬ್ಬಂದಿಗಳಾದ ಸುಂದರಿ, ಮಲರ್, ಕಾವೇರಿ, ಮಾಲತಿ ಹಾಗೂ ಉಷಾ ಸೇರಿದಂತೆ ಇನ್ನಿತರರು ಇದ್ದರು.








