ಮಡಿಕೇರಿ ಜೂ.6 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯಂತೆ ಜೂ.7 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11 ಕೆವಿ ಆಲೂರು ಸಿದ್ದಾಪುರ, 66/11 ಕೆವಿ ಸುಂಟಿಕೊಪ್ಪ, 66/11 ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು, ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕರ ಎಂಜಿನಿಯರ್ ಕೋರಿದ್ದಾರೆ.









