ಮಡಿಕೇರಿ ಜೂ.9 : ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.
ದೀಕ್ಷಿತ (21) ಎಂಬಾಕೆಯೇ ಮೃತ ಯುವತಿಯಾಗಿದ್ದು, ವಿರಾಜಪೇಟೆ ತಾಲ್ಲೂಕಿನ ಕುಟ್ಟಂದಿ ಗ್ರಾಮದ ಪ್ರಸ್ತುತ ವಿರಾಜಪೇಟೆ ಪಟ್ಟಣದಲ್ಲಿ ವಾಸವಿರುವ ದಿ.ನಾಣಯ್ಯ ಹಾಗೂ ಸರಸ್ವತಿ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಾಳೆ. ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ದೀಕ್ಷಿತಾಳ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









