ಮಡಿಕೇರಿ ಜೂ.20 : ಮೂರ್ನಾಡು 33/11ಕೆವಿ ಎಂಯುಎಸ್ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









