Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡುಮಂಗಳೂರು ಗ್ರಾ‌.ಪಂ ಸಾಮಾನ್ಯ ಸಭೆ: ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಕ್ರಮವಹಿಸಲು ತೀರ್ಮಾನ*
ಇತ್ತೀಚಿನ ಸುದ್ದಿಗಳು

*ಕೂಡುಮಂಗಳೂರು ಗ್ರಾ‌.ಪಂ ಸಾಮಾನ್ಯ ಸಭೆ: ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಕ್ರಮವಹಿಸಲು ತೀರ್ಮಾನ*

June 22, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜೂ.22: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜನರಲ್ಲಿ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಕ್ರಮಗಳನ್ನು ವಹಿಸುವ ಬಗ್ಗೆ ಕೂಡುಮಂಗಳೂರು ಗ್ರಾ.ಪಂ ನ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಾದ ಇಂದಿರಾ ರಮೇಶ್  ಅಧ್ಯಕ್ಷತೆಯಲ್ಲಿ ನಡೆದ ಸಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಈಗಾಗಲೇ ಶುಂಠಿಕೊಪ್ಪ ಹಾಗೂ ಇನ್ನಿತರ ಕಡೆಗಳಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಆದ್ದರಿಂದ ಡೆಂಗ್ಯೂ ಬಗ್ಗೆ ಸಾರ್ವಜನಿಕರಿಗೆ ಅರವು ಮೂಡಿಸುವುದರ ಜೊತೆಗೆ ಗ್ರಾ.ಪಂ ನ ಎಲ್ಲಾ ವಾರ್ಡ್ ನಲ್ಲಿಯೂ ರಾಸಾಯನಿಕ ಹೊಗೆಯನ್ನು ಸಿಂಪಡಿಸುವ ಬಗ್ಗೆ ನಿರ್ಧರಿಸಲಾಯಿತು. ಅಲ್ಲದೇ ಚರಂಡಿಗಳಲ್ಲಿ ಬ್ಲೀಚಿಂಗ್ ಹಾಕುವುದರ ಜೊತೆಗೆ ಸ್ಬಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಒತ್ತಾಯಿಸಲಾಯಿತು. ಚರಂಡಿ ಸ್ವಚ್ಚತೆಗೊಳಿಸಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಹಾಕಲಾಗುತ್ತಿದೆ. ತ್ಯಾಜ್ಯವನ್ನು ದಿನಗಟ್ಟಲೇ ರಸ್ತೆಯಲ್ಲಿಯೇ ಬಿಡದೇ ಆದಷ್ಟು ಬೇಗನೇ ಅದನ್ನು ವಿಲೇವಾರಿ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ಕೋಳಿ, ನಾಯಿಗಳು ತ್ಯಾಜ್ಯವನ್ನು ಕೆರೆದು ಚರಂಡಿ ಹಾಕುತ್ತವೆ. ಇದರಿಂದ ಚರಂಡಿ ಸ್ವಚ್ಚಗೊಳಿಸಿದ ಕೆಲಸ ವ್ಯರ್ಥವಾಗಲಿದೆ.‌ ಆದ್ದರಿಂದ ಈ ಬಗ್ಗೆ ಗಮನಹರಿಸುವಂತೆ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಆಗ್ರಹಿಸಿದರು. ಇದಕ್ಕೆ ಸದಸ್ಯರಾದ ಗಿರೀಶ್, ದಿನೇಶ್ ಆಶಾರವರು ಧ್ವನಿಗೂಡಿಸಿದರು.
ಪಂಚಾಯಿತಿಯ ಕಸದ ವಾಹನ ಸಮಯಕ್ಕೆ ಸರಿಯಾಗಿ ವಾರ್ಡ್ ಗೆ ಬರುತ್ತಿಲ್ಲ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸದಸ್ಯರಾದ ಗಿರೀಶ್ ಒತ್ತಾಯಿಸಿದರು. ಕಸದ ವಾಹನಗಳನ್ನು ಸಮಯಕ್ಕೆ ಸರಿಯಾಗಿ ಕಳುಹಿಸಿಕೊಡಬೇಕು. ಅದು ಬಿಟ್ಟು ಕಾಟಾಚಾರಕ್ಕೆ ಕೆಲಸ ಮಾಡಬೇಡಿ ಎಂದು‌ ಕೆ.ಬಿ.ಶಂಶುದ್ಧೀನ್ ಅಸಮಾಧಾನ ವ್ಯಕ್ತಪಡಿಸಿದರು.
ಪ.ಜಾತಿ ಹಾಗೂ ಪ.ಪಂ ಜನಾಂಗದವರಿಗೆ ಶೇ.೨೫ ರ ನಿಧಿಯಲ್ಲಿ ನೀಡುವ ಅಂತ್ಯ ಸಂಸ್ಕಾರದ ಹಣವನ್ನು, ಒಂದು ತಿಂಗಳ ಒಳಗಾಗಿ ಅರ್ಜಿ ನೀಡುವವರಿಗೆ ಮಾತ್ರ ಹಣ ನೀಡುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸ್ವಚ್ಚತಾ ಸಿಬ್ಬಂದಿಗಳನ್ನು ಆಯಾ ದಿನದಂದು ನಿಗಧಿಪಡಿಸಿದ ವಾರ್ಡ್ ನಲ್ಲಿ ಕೆಲಸ ನಿರ್ವಹಿಸಲು ಬಿಡಬೇಕು.‌ ಅವರನ್ನು ಬೇರೆ ಕೆಲಸಗಳಿಗೆ ಬಳಸದಂತೆ ಸದಸ್ಯೆ ಫಿಲೋಮಿನಾ ಒತ್ತಾಯಿಸಿದರು. ಇದಕ್ಕೆ ಇನ್ನಿತರ ಸದಸ್ಯರು ಧ್ವನಿಗೂಡಿಸಿದರು.
ಕೋಳಿ ಮಾಂಸದ ತ್ಯಾಜ್ಯಗಳನ್ನು ಆನೆಕೆರೆ ಬಳಿ ಎಸೆಯಲಾಗುತ್ತಿದ್ದು, ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸದಸ್ಯ ದಿನೇಶ್ ಆಗ್ರಹಿಸಿದರು. ಕಸ ಎಸೆದವರಿಗೆ ದಂಡ ವಿಧಿಸುವುದಾಗಿ ಪಿಡಿಓ ಸಂತೋಷ್ ಸಭೆಗೆ ತಿಳಿಸಿದರು.
ಮುಂಗಾರು ಮಳೆ ಬೀಳದೇ ನದಿಯಲ್ಲಿ ನೀರಿಲ್ಲ. ಬರದ ಆತಂಕ ಜನರಲ್ಲಿದೆ. ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಇನ್ನೂ ಕೂಡ ಸಂಪರ್ಕಕೊಡಲಾಗಿಲ್ಲ. ನೀರಿನ ಸಮಸ್ಯೆ ಉಲ್ಭವವಾಗುವುದಕ್ಕೂ ಮುನ್ನ ಅಗತ್ಯ ಕ್ರಮ ಕೈಗೊಳ್ಳಬೇಕು ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪಿಡಿಓ ಬಳಿ ಮನವಿ ಮಾಡಿದರು. ಈಗಾಗಲೇ ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿದೆ. ಯೋಜನೆ ವಿದ್ಯುತ್ ಸಂಪರ್ಕ ನೀಡಲು ಎರಡು ಟಿ.ಸಿ ನೀಡುತ್ತೇವೆ ಎಂದು ಸಂಬಂಧಿಸಿದ ಇಂಜಿನಿಯರ್ ತಿಳಿಸಿದ್ದಾರೆ. ಆದಷ್ಟು ಬೇಗನೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಯೋಜನೆಯನ್ನು ಜನಬಳಕೆಗೆ ಉಪಯೋಗಿಸಲಾಗುವುದು ಎಂದರು.
ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಜಾಗ ನಿಗಧಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ‌ಈ ಬಗ್ಗೆ ಶಾಸಕರಿಗೆ ಪತ್ರ ಬರೆಯುವಂತೆ ನಿರ್ಧರಿಸಲಾಯಿತು. ಕುಶಾಲನಗರ ತಾಲ್ಲೂಕು ಘೋಷಣೆಯಾಗಿ ವರ್ಷ ಕಳೆದರೂ ಪಂಚಾಯಿತಿ ಕಟ್ಟಡದಲ್ಲಿ ಹಳೆಯ ತಾಲ್ಲೂಕಿನ ಹೆಸರಿದೆ.‌ ಕೂಡಲೇ ಕುಶಾಲನಗರ ತಾಲ್ಲೂಕು ಎಂದು ಬದಲಾಯಿಸಿ ಎಂದು ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಮನವಿ ಮಾಡಿದರು. ದೂರದೃಷ್ಟಿ ಯೋಜನೆಗೆ ಕಾಮಗಾರಿಗಳ ಪಟ್ಟಿಯನ್ನು ನೀಡುವಂತೆ ಪಿಡಿಓ ಸಂತೋಷ್ ಸಭೆಗೆ ತಿಳಿಸಿದರು. ನಂತರ ಸಾರ್ವಜನಿಕರ ಅರ್ಜಿ ವಿಲೇವಾರಿ ಮಾಡಲಾಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರೆ ವಿಷಯಗಳ ಬಗ್ಗೆ ಚರ್ಚೆ‌ ನಡೆಯಿತು.
ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ ಉಪಾಧ್ಯಕ್ಷರಾದ ಬಾಸ್ಕರ್‌ ನಾಯಕ್, ಗ್ರಾ.ಪಂ ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದಿಂದ ಶಾಸಕ ಎ.ಎಸ್.ಪೊನ್ನಣ್ಣ ಗೆ ಸನ್ಮಾನ*
Next Article *ಆರೋಪಿ ನಾಪತ್ತೆ : ಮಾಹಿತಿ ನೀಡಲು ಮನವಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.