Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ*

ಜೂನ್ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24  : ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಗೆ ಜಿಲ್ಲಾಡಳಿತ ವತಿಯಿಂದ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ನಗರದಲ್ಲಿ ನಡೆದ ಸರಳ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ.ಬಿ.ಸಿ.ಸತೀಶ ಅವರಿಗೆ ಫಲಪುಷ್ಪ, ತಾಂಬೂಲ, ಶಾಲೂ ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ಒಂದು ಅವಕಾಶ, ಆ ನಿಟ್ಟಿನಲ್ಲಿ ಎಲ್ಲರ ಸಹಕಾರದಿಂದ ಹೆಚ್ಚಿನ‌ ಕೆಲಸ ನಿರ್ವಹಿಸಲು ಸಾಧ್ಯವಾಯಿತು ಎಂದು ತಿಳಿಸಿದರು. ಕೊಡಗು ವಿಶೇಷ ಜಿಲ್ಲೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವುದು ವಿಶೇಷ ಅನುಭವ ಪಡೆದಂತೆ ಎಂದರು.
ವಿಧಾನಸಭಾ ಮತ್ತು ವಿಧಾನ ಪರಿಷತ್ ಚುನಾವಣೆ ಜೊತೆಗೆ ಹಲವು ಅಭಿವೃದ್ಧಿ ಕಾರ್ಯದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಲು ಪ್ರಯತ್ನಿಸಿದ್ದೇನೆ.
ಎಲ್ಲರ ಸಹಕಾರದಿಂದ ಸಾರ್ವಜನಿಕ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯ ಎಂದು ಡಾ.ಬಿ.ಸಿ.ಸತೀಶ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾತನಾಡಿ ಜಿಲ್ಲಾಧಿಕಾರಿ ಅವರು ತಂಡದ ನಾಯಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆಗಳನ್ನು ಸುಲಭವಾಗಿ ಬಗೆ ಹರಿಸುತ್ತಿದ್ದರು ಎಂದು ಅವರು ಹೇಳಿದರು.
ನಿರ್ಗಮಿತ ಜಿಲ್ಲಾಧಿಕಾರಿ ಅವರ ಜೊತೆ ಕರ್ತವ್ಯ ನಿರ್ವಹಿಸಿರುವುದು ಒಂದು ಅನುಭವ. ಆ ನಿಟ್ಟಿನಲ್ಲಿ ಎಲ್ಲರ ಜೊತೆ ಉತ್ತಮ ಬಾಂಧವ್ಯ ಹೊಂದಿ ಕೆಲಸ ಮಾಡಿಸುತ್ತಿದ್ದರು ಎಂದು ಡಾ.ಎಸ್.ಆಕಾಶ್ ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಚುನಾವಣೆ ಸೇರಿದಂತೆ ಕಂದಾಯ ಇಲಾಖೆ ಕೆಲಸದಲ್ಲಿ ಜಾಗರುಕತೆಯಿಂದ ಕರ್ತವ್ಯ ನಿರ್ವಹಿಸುವುದನ್ನು ತಿಳಿಸಿದ್ದಾರೆ ಎಂದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ ರಾಜ್ ಅವರು ಮಾತನಾಡಿ ಡಾ.ಬಿ.ಸಿ.ಸತೀಶ ಅವರು ಸದಾ ಚಟುವಟಿಕೆಯಿಂದ ಕ್ರೀಯಾಶೀಲರಾಗಿ ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸುತ್ತಿದ್ದರು. ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ಜಿಲ್ಲಾಧಿಕಾರಿ ಕಚೇರಿಯ ಕಾನೂನು ಸಲಹೆಗಾರರಾದ ಲೋಕೇಶ ಕುಮಾರ್ ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಶ್ರದ್ದೆ, ಪರಿಶ್ರಮ ಮೆಚ್ಚುವಂತದ್ದು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಪ್ರತಿಯೊಬ್ಬರ ಹೆಸರು ಹೇಳಿ ಹೆಚ್ಚಿನ ವಿಶ್ವಾಸ ಪಡೆದು ಕಾರ್ಯ ನಿರ್ವಹಿಸುತ್ತಿದ್ದರು ಎಂದರು. ಐಟಿಡಿಪಿ ಅಧಿಕಾರಿ ಎಸ್.ಹೊನ್ನೆಗೌಡ ಅವರು ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರು ಆದಿವಾಸಿ ಜನರ ನಿವೇಶನಕ್ಕೆ ೮ ಸ್ಥಳಗಳಲ್ಲಿ ಜಾಗ ಒದಗಿಸಿದ್ದಾರೆ ಎಂದರು. ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ ಅವರು ಮಾತನಾಡಿ ಸರ್ಕಾರಿ ನೌಕರರ ಸಂಘಕ್ಕೆ ಜಾಗ ಒದಗಿಸಿದ್ದಾರೆ. ಜನಸಾಮಾನ್ಯರೊಂದಿಗೆ ಬೆರೆಯುತ್ತಿದ್ದ ಗುಣ ದೊಡ್ಡದು ಎಂದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಎಇಇ ಹೇಮಂತ್ ಕುಮಾರ್ ಅವರು ಪೌರಾಡಳಿತ ಇಲಾಖೆಯಲ್ಲಿನ ಸಿಬ್ಬಂದಿಗಳ ವೇತನ ಬಡ್ತಿಗೆ ಅವಕಾಶ ಮಾಡಿದ್ದಾರೆ ಎಂದು ಶ್ಲಾಘಿಸಿದರು. ತಹಶಿಲ್ದಾರರಾದ ಪ್ರಕಾಶ್ ಅವರು ಮಾತನಾಡಿ ಕುಶಾಲನಗರದಲ್ಲಿ ನೂತನ ತಾಲ್ಲೂಕು ಕಚೇರಿ ನಿರ್ಮಾಣಕ್ಕೆ ಜಾಗ ಒದಗಿಸಿದ್ದಾರೆ ಎಂದರು. ಪೌರಾಯುಕ್ತರಾದ ವಿಜಯ್ ಅವರು ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರು ಜನಾನುರಾಗಿಯಾಗಿದ್ದರು. ಸರಳತೆ ಹೊಂದಿದ್ದರು, ಸಾರ್ವಜನಿಕರಿಗೆ ಸ್ಪಂದಿಸುತ್ತಿದ್ದರು. ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸುತ್ತಿದ್ದರು ಎಂದು ಮೆಚ್ವುಗೆ ವ್ಯಕ್ತಪಡಿಸಿದರು. ಪ್ರಾದೇಶಿಕ‌ ಸಾರಿಗೆ ಅಧಿಕಾರಿ ಮಧುರ ಅವರು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದ್ದಾರೆ ಎಂದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರ ಅವಧಿಯಲ್ಲಿ ಕಾಫಿ ಮೇಳ, ಮಾವು ಮೇಳ, ಜೇನು ಮೇಳ ಆಯೋಜಿಸಿ ಗಮನ ಸೆಳೆದಿದ್ದರು ಎಂದರು. ಸಾರ್ವಜನಿಕರ ಕುಂದು ಕೊರತೆಗಳನ್ನು ಜಿಲ್ಲಾಡಳಿತ ಭವನದ ಕಾರಿಡಾರ್‍ನಲ್ಲಿಯೇ ಆಲಿಸಿ ಸಲಹೆ, ಮಾರ್ಗದರ್ಶನ ಮಾಡುತ್ತಿದ್ದರು ಎಂದರು.
ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ ಅವರು ಎಲ್ಲರೊಂದಿಗೆ ಸಹಕಾರ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವು ಬಾದಾಮಿ ಅವರು ಮಾತನಾಡಿ ನಿರ್ಗಮಿತ ಜಿಲ್ಲಾಧಿಕಾರಿ ಅವರು ಕಡಿಮೆ ಅವಧಿಯಲ್ಲಿ ಹೆಚ್ಚಿನ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ಕೆಪಿಟಿಸಿಎಲ್ ಎಂಜಿನಿಯರ್ ಮಾದೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತಹಶೀಲ್ದಾರರಾದ ಪ್ರಶಾಂತ್, ಶಿರಸ್ತೆದಾರರಾದ ಪ್ರಕಾಶ್, ಸತೀಶ್ ಇತರರು ಮಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.