Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ವನಮಹೋತ್ಸವ : ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿ : ಮೇರಿಯಂಡ ಸಂಕೇತ್ ಪೂವಯ್ಯ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ವನಮಹೋತ್ಸವ : ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿ : ಮೇರಿಯಂಡ ಸಂಕೇತ್ ಪೂವಯ್ಯ ಸಲಹೆ*

ಜೂನ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.28 : ಪ್ರಕೃತಿಯ ಬಗ್ಗೆ ಮಕ್ಕಳಿಗೆ ಕಾಳಜಿ ಮತ್ತು ಪ್ರೀತಿ ಹೆಚ್ಚಾಗಬೇಕಾದರೆ ವರ್ಷಕ್ಕೊಮ್ಮೆಯಾದರೂ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಕಾಡು ಪರಿಚಯಿಸುವ ಕೆಲಸವಾಗಬೇಕು ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.
ವಿರಾಜಪೇಟೆ ತಾಲ್ಲೋಕು ಪತ್ರಕರ್ತರ ಸಂಘದ ವತಿಯಿಂದ ನಗರದ ಕಾವೇರಿ ಕಾಲೇಜಿನಲ್ಲಿ ಏರ್ಡಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತವಾದ ಶಕ್ತಿ. ಇಂದಿನ ಯುವಜನತೆ ಪ್ರಕೃತಿಯ ಮಹತ್ವವನ್ನು ಚೆನ್ನಾಗಿ ಅರಿಯಬೇಕು. 1950 ರ ಸುಮಾರಿಗೆ ಮುನ್ಷಿಯವರು ವನಮಹೋತ್ಸವ ಕಾರ್ಯಕ್ರಮವನ್ನು ಆರಂಭ ಮಾಡಿದರು. ಮಳೆಗಾಲದ ಆರಂಭದಲ್ಲಿ ಗಿಡಗಳನ್ನು ನೆಡುವುದರಿಂದ ಚೆನ್ನಾಗಿ ಬೆಳೆದು ಪ್ರಕೃತಿಯ ಶಕ್ತಿಯನ್ನು ಹೆಚ್ಚಿಸುತ್ತವೆ. ಕಾಡು ಇಂದು ಅಲ್ಪಪ್ರಮಾಣದಲ್ಲಿ ನಮ್ಮ ನಡುವೆ ಇದೆ. ಮಕ್ಕಳಿಗೆ ಕಾಡಿನ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಭವಿಷ್ಯದಲ್ಲಿ ನಾವು ಪ್ರಕೃತಿಯ ರಕ್ಷಣೆಯ ಹೊಣೆಗಾರಿಕೆಯನ್ನು ಅವರಿಗೆ ಕಲಿಸಬಹುದು ಎಂದು ಅಭಿಪ್ರಾಯಪಟ್ಟರು.
ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವನಮಹೋತ್ಸವವನ್ನು ಹಮ್ಮಿಕೊಳ್ಳುವುದರ ಹಿಂದೆ ಪ್ರಕೃತಿಗೆ ವರದಾನವಾಗಬಲ್ಲ ಸಾಕಷ್ಟು ವಿಚಾರಗಳಿವೆ. ಪ್ರಕೃತಿಗೆ ಎಂದಿಗೂ ಮೋನೋಕಲ್ಚರ್ ಕಾಡುಗಳಿಂದ ಯಾವ ಉಪಯೋಗವೂ ಆಗುವುದಿಲ್ಲ. ವೈವಿಧ್ಯತೆಯಿಂದ ಕೂಡಿದ ಮರಗಿಡಗಳು ಆಹಾರ ಸರಪಳಿಯ ಪ್ರತಿಯೊಂದು ಜೀವಿಗೂ ಒಂದಿಲ್ಲ ಒಂದು ಬಗೆಯಲ್ಲಿ ಸಹಾಯ ಮಾಡುತ್ತವೆ. ನಾವೂ ಮನೆಯ ಪಕ್ಕ ನೆಟ್ಟು ಪೋಷಣೆ ಮಾಡುವ ಒಂದು ಗಿಡ ಪ್ರಕೃತಿಗೆ ಅನೇಕ ರೀತಿಯಲ್ಲಿ ಸಹಾಯಕ್ಕೆ ಬರುತ್ತದೆ ಎಂದರು.
ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಮಾತನಾಡಿ, ಪ್ರಕೃತಿ ಸಂರಕ್ಷಣೆಯಲ್ಲಿ ಎಲ್ಲರೂ ಕೈಜೋಡಿಸಬೇಕು. ಪ್ರಕೃತಿಯನ್ನು ಬಳಸಿಕೊಳ್ಳುವಿಕೆಯಲ್ಲಿ ಮತ್ತು ಉಳಿಸುವಿಕೆಯಲ್ಲಿ ನಮ್ಮ ಜವಾಬ್ದಾರಿತನದ ಪ್ರದರ್ಶನವಾಗಬೇಕು ಎಂದು ಅಭಿಪ್ರಾಯಪಟ್ಟರು.
ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಧೋಶ್ ಪೂವಯ್ಯ ಮಾತನಾಡಿ, ಪರಿಸರ ಚೆನ್ನಾಗಿ ಇರಬೇಕಾದರೆ ನಾವೂ ಇರುವ ಭೂಮಿಯ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು. ಅದಕ್ಕಾಗಿ ನಾವೂ ಗಿಡ-ಮರ ಬೆಳೆಸುವ ಮೂಲಕ ಭೂಮಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ಬಳಿಕ ಅತಿಥಿ ಗಣ್ಯರು ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ವಿದ್ಯಾರ್ಥಿಗಳ ಜೊತೆ ಸೇರಿ ನೆಟ್ಟರು. ಕಾರ್ಯಕ್ರಮದ ವೇದಿಕೆಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲ ಆನಂದ್ ಕಾರ್ಲ ಉಪಸ್ಥಿತರಿದ್ದರು. ಉಪನ್ಯಾಸಕಿ ವೀಣಾ ರವೀಂದ್ರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಉಷಾ ಪ್ರೀತಮ್, ನಿರ್ದೇಶಕರುಗಳಾದ ಯುವರಾಜ್ ಕೃಷ್ಣ, ಹೇಮಂತ್ ತೊರೇರ ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.