Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ವನಮಹೋತ್ಸವ : ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿ : ಮೇರಿಯಂಡ ಸಂಕೇತ್ ಪೂವಯ್ಯ ಸಲಹೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ವನಮಹೋತ್ಸವ : ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿ : ಮೇರಿಯಂಡ ಸಂಕೇತ್ ಪೂವಯ್ಯ ಸಲಹೆ*

June 28, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.28 : ಪ್ರಕೃತಿಯ ಬಗ್ಗೆ ಮಕ್ಕಳಿಗೆ ಕಾಳಜಿ ಮತ್ತು ಪ್ರೀತಿ ಹೆಚ್ಚಾಗಬೇಕಾದರೆ ವರ್ಷಕ್ಕೊಮ್ಮೆಯಾದರೂ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಕಾಡು ಪರಿಚಯಿಸುವ ಕೆಲಸವಾಗಬೇಕು ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.
ವಿರಾಜಪೇಟೆ ತಾಲ್ಲೋಕು ಪತ್ರಕರ್ತರ ಸಂಘದ ವತಿಯಿಂದ ನಗರದ ಕಾವೇರಿ ಕಾಲೇಜಿನಲ್ಲಿ ಏರ್ಡಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತವಾದ ಶಕ್ತಿ. ಇಂದಿನ ಯುವಜನತೆ ಪ್ರಕೃತಿಯ ಮಹತ್ವವನ್ನು ಚೆನ್ನಾಗಿ ಅರಿಯಬೇಕು. 1950 ರ ಸುಮಾರಿಗೆ ಮುನ್ಷಿಯವರು ವನಮಹೋತ್ಸವ ಕಾರ್ಯಕ್ರಮವನ್ನು ಆರಂಭ ಮಾಡಿದರು. ಮಳೆಗಾಲದ ಆರಂಭದಲ್ಲಿ ಗಿಡಗಳನ್ನು ನೆಡುವುದರಿಂದ ಚೆನ್ನಾಗಿ ಬೆಳೆದು ಪ್ರಕೃತಿಯ ಶಕ್ತಿಯನ್ನು ಹೆಚ್ಚಿಸುತ್ತವೆ. ಕಾಡು ಇಂದು ಅಲ್ಪಪ್ರಮಾಣದಲ್ಲಿ ನಮ್ಮ ನಡುವೆ ಇದೆ. ಮಕ್ಕಳಿಗೆ ಕಾಡಿನ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಭವಿಷ್ಯದಲ್ಲಿ ನಾವು ಪ್ರಕೃತಿಯ ರಕ್ಷಣೆಯ ಹೊಣೆಗಾರಿಕೆಯನ್ನು ಅವರಿಗೆ ಕಲಿಸಬಹುದು ಎಂದು ಅಭಿಪ್ರಾಯಪಟ್ಟರು.
ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವನಮಹೋತ್ಸವವನ್ನು ಹಮ್ಮಿಕೊಳ್ಳುವುದರ ಹಿಂದೆ ಪ್ರಕೃತಿಗೆ ವರದಾನವಾಗಬಲ್ಲ ಸಾಕಷ್ಟು ವಿಚಾರಗಳಿವೆ. ಪ್ರಕೃತಿಗೆ ಎಂದಿಗೂ ಮೋನೋಕಲ್ಚರ್ ಕಾಡುಗಳಿಂದ ಯಾವ ಉಪಯೋಗವೂ ಆಗುವುದಿಲ್ಲ. ವೈವಿಧ್ಯತೆಯಿಂದ ಕೂಡಿದ ಮರಗಿಡಗಳು ಆಹಾರ ಸರಪಳಿಯ ಪ್ರತಿಯೊಂದು ಜೀವಿಗೂ ಒಂದಿಲ್ಲ ಒಂದು ಬಗೆಯಲ್ಲಿ ಸಹಾಯ ಮಾಡುತ್ತವೆ. ನಾವೂ ಮನೆಯ ಪಕ್ಕ ನೆಟ್ಟು ಪೋಷಣೆ ಮಾಡುವ ಒಂದು ಗಿಡ ಪ್ರಕೃತಿಗೆ ಅನೇಕ ರೀತಿಯಲ್ಲಿ ಸಹಾಯಕ್ಕೆ ಬರುತ್ತದೆ ಎಂದರು.
ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಮಾತನಾಡಿ, ಪ್ರಕೃತಿ ಸಂರಕ್ಷಣೆಯಲ್ಲಿ ಎಲ್ಲರೂ ಕೈಜೋಡಿಸಬೇಕು. ಪ್ರಕೃತಿಯನ್ನು ಬಳಸಿಕೊಳ್ಳುವಿಕೆಯಲ್ಲಿ ಮತ್ತು ಉಳಿಸುವಿಕೆಯಲ್ಲಿ ನಮ್ಮ ಜವಾಬ್ದಾರಿತನದ ಪ್ರದರ್ಶನವಾಗಬೇಕು ಎಂದು ಅಭಿಪ್ರಾಯಪಟ್ಟರು.
ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಧೋಶ್ ಪೂವಯ್ಯ ಮಾತನಾಡಿ, ಪರಿಸರ ಚೆನ್ನಾಗಿ ಇರಬೇಕಾದರೆ ನಾವೂ ಇರುವ ಭೂಮಿಯ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು. ಅದಕ್ಕಾಗಿ ನಾವೂ ಗಿಡ-ಮರ ಬೆಳೆಸುವ ಮೂಲಕ ಭೂಮಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ಬಳಿಕ ಅತಿಥಿ ಗಣ್ಯರು ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ವಿದ್ಯಾರ್ಥಿಗಳ ಜೊತೆ ಸೇರಿ ನೆಟ್ಟರು. ಕಾರ್ಯಕ್ರಮದ ವೇದಿಕೆಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲ ಆನಂದ್ ಕಾರ್ಲ ಉಪಸ್ಥಿತರಿದ್ದರು. ಉಪನ್ಯಾಸಕಿ ವೀಣಾ ರವೀಂದ್ರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಉಷಾ ಪ್ರೀತಮ್, ನಿರ್ದೇಶಕರುಗಳಾದ ಯುವರಾಜ್ ಕೃಷ್ಣ, ಹೇಮಂತ್ ತೊರೇರ ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ರಿಷಬ್ ಶೆಟ್ಟಿಗೆ “ವಿಶ್ವ ಶ್ರೇಷ್ಠ ಕನ್ನಡಿಗ” ಪ್ರಶಸ್ತಿ ಪ್ರದಾನ*
Next Article *ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ : ಅರ್ಜಿ ಸಲ್ಲಿಸಲು ಮನವಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.