ಮಡಿಕೇರಿ ಜೂ.30 : ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡ ಕ್ಷೇತ್ರದ ನೂತನ ಶಾಸಕ ಡಾ.ಮಂತರ್ ಗೌಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಪೇಟ ತೊಡಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಪೌರಾಯುಕ್ತ ವಿಜಯ ಅವರುಗಳು ನಗರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿದ್ದ ಸದಸ್ಯರುಗಳು ಕೂಡ ಹೂಗುಚ್ಚ ನೀಡಿ ಅಭಿನಂದಿಸಿದರು.









