Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಿದ್ಧತೆ : ಹೆಬ್ಬೆಟ್ಟಗೇರಿಯಲ್ಲಿ ಗಮನ ಸೆಳೆದ ‘ಅಣಕು ಪ್ರದರ್ಶನ’*
ಇತ್ತೀಚಿನ ಸುದ್ದಿಗಳು

*ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಿದ್ಧತೆ : ಹೆಬ್ಬೆಟ್ಟಗೇರಿಯಲ್ಲಿ ಗಮನ ಸೆಳೆದ ‘ಅಣಕು ಪ್ರದರ್ಶನ’*

July 1, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.1 : ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲ್ಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ನಡೆಯಿತು.

ಜಿಲ್ಲಾಡಳಿತ, ಎನ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹ ರಕ್ಷಕ ದಳ ಹೀಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆ ನಡೆಯಿತು.
ಭೂಕುಸಿತ, ಪ್ರವಾಹ ಮತ್ತಿತರ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಂತಹ ಸ್ಥಳದಲ್ಲಿ ವಿದ್ಯುತ್ ಕಡಿತಗೊಳಿಸುವುದು, ಘಟನಾ ಸ್ಥಳವನ್ನು ಸೀಲು ಮಾಡುವುದು, ಬಳಿಕ ರಕ್ಷಣಾ ಕಾರ್ಯ ಕೈಗೊಂಡು ಪ್ರಥಮ ಚಿಕಿತ್ಸೆ ನೀಡುವುದು, ಗಂಭೀರ ಗಾಯವಾಗಿದ್ದಲ್ಲಿ ಆಸ್ಪತ್ರೆಗೆ ಕರೆದೊಯ್ಯುವುದು… ಹೀಗೆ 9 ಕ್ಕೂ ಹೆಚ್ಚು ರೀತಿಯ ಅಣಕು ಪ್ರದರ್ಶನ ಜರುಗಿತು.
ಅಣಕು ಪ್ರದರ್ಶನದಲ್ಲಿ ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ದಳ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಯವರು ಕೈಜೋಡಿಸಿದರು.
ಹೆಚ್ಚಿನ ಮಳೆಯಿಂದ ಪ್ರವಾಹ, ಭೂಕುಸಿತ ಹೀಗೆ ವಿವಿಧ ರೀತಿಯ ಅತೀವೃಷ್ಟಿ ಉಂಟಾದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು.
ಅಣಕು ಕಾರ್ಯಾಚರಣೆಯಲ್ಲಿ ಎನ್‍ಡಿಆರ್‍ಎಫ್ ತಂಡದ ಇನ್ಸ್‍ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದಲ್ಲಿ 23 ಮಂದಿ, ಪೊಲೀಸ್ ಇಲಾಖೆಯಿಂದ ಡಿಎಆರ್ ತಂಡದ ಆರ್‍ಪಿಐ ಚೆನ್ನನಾಯಕ ನೇತೃತ್ವದಲ್ಲಿ 15 ಜನ ಪೊಲೀಸರು, ಅಗ್ನಿಶಾಮಕ ಇಲಾಖೆಯಿಂದ ನಾಗರಾಜು ನೇತೃತ್ವದಲ್ಲಿ 8 ಮಂದಿ, ಗೃಹ ರಕ್ಷಕ ದಳ ವಿಭಾಗದಿಂದ ಅಕ್ಷಯ್ ಅವರ ನೇತೃತ್ವದ 8 ಮಂದಿ ಸಿಬ್ಬಂದಿಗಳು, ಒಟ್ಟು 54 ಸಿಬ್ಬಂದಿಗಳು ಅಣಕು ಪ್ರದರ್ಶನದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಜಿಲ್ಲಾಡಳಿತದ ಸಹಯೋಗದಲ್ಲಿ ಎನ್‍ಡಿಆರ್‍ಎಫ್, ಪೊಲೀಸ್, ಗೃಹರಕ್ಷಕ ದಳ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ತುಂಬಾ ತೊಂದರೆ ಆಗಿತ್ತು. ಆ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅಣಕು ಪ್ರದರ್ಶನದಿಂದ ಮಾಹಿತಿ ನೀಡಲಾಗಿದೆ ಎಂದರು.
‘ಪ್ರವಾಹ, ಭೂಕುಸಿತ ಮತ್ತಿತರ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ಕಾರ್ಯಾಚರಣೆ ಕೈಗೊಂಡು ರಕ್ಷಣೆ ಮಾಡಲಾಗುತ್ತದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ವೆಂಕಟ್ ರಾಜಾ ಅವರು ತಿಳಿಸಿದರು.’
ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸರಾಸರಿಯಷ್ಟು ಮಳೆಯಾಗುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವಿವರಿಸಿದರು.
ಎನ್‍ಡಿಆರ್‍ಎಫ್ ತಂಡದ ಪ್ರಮುಖರಾದ ಅರ್ಜುನ್ ಅವರು ಮಾತನಾಡಿ ಪ್ರಾಕೃತಿಕ ವಿಕೋಪದಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವಿವರಿಸಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ರಕ್ಷಣಾ ಚಟುವಟಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಅವರು ಪ್ರಾಕೃತಿಕ ವಿಕೋಪ ಉಂಟಾದ ಸಂದರ್ಭದಲ್ಲಿ ಕಾರ್ಯಾಚರಣೆ ಕೈಗೊಳ್ಳುವ ಬಗ್ಗೆ ಹಲವು ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ತಹಶೀಲ್ದಾರ್ ಕಿರಣ್ ಗೌರಯ್ಯ, ಗಣಿ ಮತ್ತು ಭೂ ವಿಜ್ಞಾನಿಗಳಾದ ರಾಹುಲ್, ರೋಜಾ, ಪಿಡಿಒ ಸೆಲ್ವಿನ್, ಕಂದಾಯ ನಿರೀಕ್ಷಕರಾದ ರುದ್ರೇಶ್, ಪ್ರಸಾದ್, ಕಾರ್ಮಿಕ ಇಲಾಖೆ ಅಧಿಕಾರಿ ಹರ್ಷವರ್ಧನ್, ಪ್ರಮುಖರಾದ ಡೀನ್ ಬೋಪಣ್ಣ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬಸ್, ಕಾರು ಡಿಕ್ಕಿ : ಹಿರಿಕರ ಗ್ರಾಮದ ದಂಪತಿ ಸಾವು*
Next Article *ಮಡಿಕೇರಿಯಲ್ಲಿ ವನ ಮಹೋತ್ಸವ ಸಪ್ತಾಹಕ್ಕೆ ಚಾಲನೆ : ಜಲ ಮೂಲ ಸಂರಕ್ಷಣೆಗೆ ಹೆಚ್ಚಿನ ಅರಣ್ಯ ಬೆಳೆಸುವುದು ಅತ್ಯಗತ್ಯ : ಅರಣ್ಯ ಸಂರಕ್ಷಣಾಧಿಕಾರಿ ಮೂರ್ತಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.