Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಕಂದಾಯ ಇಲಾಖೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಕಂದಾಯ ಇಲಾಖೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ*

ಜುಲೈ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.11 : ತಾಲ್ಲೂಕು ಕಚೇರಿಯಲ್ಲಿ ಕೆಲ ಅಧಿಕಾರಿಗಳು ಸಿಬ್ಬಂದಿಗಳಿಂದ ರೈತರ ಶೋಷಣೆ ಆಗುತ್ತಿದೆ ಎಂದು ಆರೋಪಿಸಿರುವ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ರೈತರು ತಕ್ಷಣವೇ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಬಿ.ಪಿ.ಅನಿಲ್ ಕುಮಾರ್, ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್, ಕರವೇ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ಸೋಮವಾರಪೇಟೆ ತಾಲ್ಲೂಕು ಆಡಳಿತ ಸೌಧ ಜಮಾಯಿಸಿದ ಪ್ರತಿಭಟನಕಾರರು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಅರ್ಧ ಗಂಟೆಗಳ ಕಾಲ ತಹಶೀಲ್ದಾರ್ ಸ್ಥಳಕ್ಕೆ ಬರದೆ ಇದ್ದಾಗ, ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದರು.
ಇನ್ಸ್‍ಪೆಕ್ಟರ್ ರಾಮಚಂದ್ರನಾಯಕ್ ತಹಸೀಲ್ದಾರ್‍ರನ್ನು ಕರೆತಂದರು. ಪೊಲೀಸ್ ಬಂದೋಬಸ್ತ್‍ನಲ್ಲಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು.
ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಬ್ರೋಕರ್‍ಗಳ ಹಾವಳಿ, ಬಡ ರೈತರ ಪೋಡಿ ದುರಸ್ತಿ ಫೈಲ್‍ಗಳು ವಿಲೇವಾರಿ ಆಗದಿರುವ ಬಗ್ಗೆ ಸಮಾಜಾಯಿಷಿಕೆ ನೀಡಿದರು.
ಮಧ್ಯಾಹ್ನದ ನಂತರ ಉಪವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.
ಈ ಸಂದರ್ಭ ಬ್ರೋಕರ್‍ಗಳ ಮೂಲಕ ದುರಸ್ತಿಗೆ ಬಂದ ಅರ್ಜಿಗಳು ವಿಲೇವಾರಿಯಾಗುತ್ತವೆ. ಬೆಂಗಳೂರು, ಮೈಸೂರು ಸೇರಿದಂತೆ ನಗರ ಪ್ರದೇಶದ ಮಾಲೀಕರ ಜಾಗದ ದುರಸ್ತಿ ಫೈಲ್‍ಗಳು ಒಂದೆರಡು ತಿಂಗಳಿಗೆ ದುರಸ್ತಿಯಾಗಿ ಮಾಲೀಕತ್ವದ ಹಕ್ಕು ಸಿಗುತ್ತಿವೆ. ಆದರೆ ಎರಡು ದಶಕಗಳ ಬಡವರ ಅರ್ಜಿಗಳು ತಾಲ್ಲೂಕು ಕಚೇರಿಯಲ್ಲೇ ಕೊಳೆಯುತ್ತಿವೆ. ಅನೇಕರ ಅರ್ಜಿಗಳು ನಾಪತ್ತೆಯಾಗಿವೆ ಎಂದು ಅನಿಲ್ ಕುಮಾರ್ ಆರೋಪಿಸಿದರು.
ಒಂದು ಎಕರೆ ದುರಸ್ತಿಗೆ ಒಂದರಿಂದ ಒಂದೂವರೆ ಲಕ್ಷ ರೂ.ಗಳನ್ನು ಫಿಕ್ಸ್ ಮಾಡಿಕೊಂಡಿದ್ದಾರೆ. ಬ್ರೋಕರ್‍ಗಳ ಮೂಲಕ ಹೋದ ಫೈಲ್‍ಗಳಿಗೆ ಮುಕ್ತಿ ಸಿಗುತ್ತದೆ. ಬಡವರಿಂದಲೂ ಹಣ ಕೀಳುತ್ತಾರೆ. ಅನೇಕ ಸಿಬ್ಬಂದಿಗಳಿಗೆ ಕರುಣೆಯೇ ಇಲ್ಲ. ವರ್ಷವಿಡಿ ಕಚೇರಿಗೆ ಅಲೆದರೂ ಮಾನವೀಯ ದೃಷ್ಟಿಯಿಂದಲೂ ಕೆಲಸ ಮಾಡಿಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಅನೇಕ ವರ್ಷಗಳಿಂದ ಇಲ್ಲಿ ಗೂಟ ಹೊಡೆದುಕೊಂಡು ಇದ್ದವರಿಂದ ಸಮಸ್ಯೆಯಾಗುತ್ತಿದೆ. ಅರ್ಜಿಗಳನ್ನು ವರ್ಷಗಟ್ಟಲೇ ಇಟ್ಟುಕೊಂಡಿರುವ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರನ್ನು ಅಮಾನತು ಮಾಡಬೇಕು. ಕಂದಾಯ ಇಲಾಖೆ ಪ್ರತಿಯೊಬ್ಬರನ್ನು ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಯನ್ನು ಒತ್ತಾಯಿಸಿದರು.
ಪ್ರತಿಭಟನಾಕಾರರ ಆರೋಪಗಳನ್ನು ಎರಡು ಗಂಟೆಗಳ ಕಾಲ ಆಲಿಸಿದ ಉಪವಿಭಾಗಧಿಕಾರಿ, ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ನನ್ನ ಹುದ್ದೆಗೆ ಗೌರವ ಸಿಗುವುದಿಲ್ಲ ಎಂದು ಹೇಳಿದರು.
ಕರ್ತವ್ಯ ಲೋಪವೆಸಗಿದ ನೌಕರರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಹ ನೌಕರರನ್ನು ವರ್ಗಾವಣೆ ಮಾಡಲು ಕ್ರಮಕೈಗೊಳ್ಳಲಾಗುವುದು. ಕಚೇರಿಯಲ್ಲಿರುವ ದುರಸ್ತಿ ಕಡತಗಳನ್ನು ನಾಲ್ಕು ವಾರದೊಳಗೆ ವಿಲೇವಾರಿ ಮಾಡಿಕೊಡಲಾಗುವುದು. ಅರ್ಜಿ ಸಲ್ಲಿಕೆಯ ವಿವರಗಳನ್ನು ನಾಳೆಯೇ ನೋಟೀಸ್ ಬೋರ್ಡ್‍ನಲ್ಲಿ ಹಾಕಿಸುತ್ತೇನೆ. ಪೋಡಿ ಮುಕ್ತ ಹೋಬಳಿ ಮಾಡುವ ಬಗ್ಗೆ ರೈತ ಮುಖಂಡರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಪ್ರತಿ ಗುರುವಾರ ಇಲ್ಲಿನ ಕಚೇರಿಯಲ್ಲೇ ಇರುತ್ತೇನೆ. ಸಮಸ್ಯೆಗಳಿದ್ದರೆ ದೂರು ನೀಡಬಹುದು ಎಂದು ಹೇಳಿದರು. ಉಪವಿಭಾಗಧಿಕಾರಿಗಳ ಭರವಸೆಯ ಮೇರೆಗೆ ಇಂದಿನ ಪ್ರತಿಭಟನೆಯನ್ನು ಮುಕ್ತಾಯಗೊಳಿಸುತ್ತೇವೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಅನಿಲ್‍ಕುಮಾರ್ ಹೇಳಿದರು.
ತಹಸೀಲ್ದಾರ್ ಎಸ್.ವಿ.ನರಗುಂದ್, ಡಿಡಿಎಲ್‍ಆರ್ ಶ್ರೀನಿವಾಸ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.