Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದಿಂದ 4 ಪುಸ್ತಕಗಳು ಬಿಡುಗಡೆ : ಜಮ್ಮಾಭೂಮಿ ಎನ್ನುವುದು ಕೊಡವರ ಉಸಿರು ಮತ್ತು ಜನ್ಮಸಿದ್ಧ ಹಕ್ಕು : ಬಾಚರಣಿಯಂಡ ಅಪ್ಪಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದಿಂದ 4 ಪುಸ್ತಕಗಳು ಬಿಡುಗಡೆ : ಜಮ್ಮಾಭೂಮಿ ಎನ್ನುವುದು ಕೊಡವರ ಉಸಿರು ಮತ್ತು ಜನ್ಮಸಿದ್ಧ ಹಕ್ಕು : ಬಾಚರಣಿಯಂಡ ಅಪ್ಪಣ್ಣ*

ಜುಲೈ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.15 : ಜಮ್ಮಾಭೂಮಿ ಎನ್ನುವುದು ಯಾರೂ ಬಳುವಳಿಯಾಗಿ ನೀಡಿದ ಭೂಮಿಯಲ್ಲ, ಇದು ಕೊಡವರ ಉಸಿರು ಮಾತ್ರವಲ್ಲ ಜನ್ಮಸಿದ್ಧ ಹಕ್ಕಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕೊಡವ ಎಂ.ಎ.ವಿಭಾಗದ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ ತಿಳಿಸಿದ್ದಾರೆ.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ನಡೆದ ಲೇಖಕಿ ಐಚಂಡ ರಶ್ಮಿ ಮೇದಪ್ಪ (ತಾಮನೆ-ಕೈಪಟ್ಟಿರ) ಬರೆದಿರುವ ಕೊಡವ ಮಕ್ಕಡ ಕೂಟದ 67ನೇ ಪುಸ್ತಕ “ಚೆರ್ ಕತೆ ಮತ್ತು ಚೆರ್ ನಾಟಕ”, ಲೇಖಕಿ ಕರವಂಡ ಸೀಮಾ ಗಣಪತಿ (ತಾಮನೆ-ಮಡೆಯಂಡ) ಬರೆದಿರುವ ಕೊಡವ ಮಕ್ಕಡ ಕೂಟದ 68ನೇ ಪುಸ್ತಕ “ಕವನ ಪೊಟ್ಟಿ”, ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ (ಬಲ್ಯಡಿಚಂಡ), ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ (ತಾಮನೆ-ಮನೆಯಪಂಡ), ಆಪಾಡಂಡ ಎನ್.ಹೇಮಾವತಿ(ಜಾನ್ಸಿ-ತಾಮನೆ-ಬೊಳ್ಳಾರ್‍ಪಂಡ), ಬೊಳ್ಳಜಿರ ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ (ತಾಮನೆ-ಚಿಕ್ಕಂಡ), ಬೊಳ್ಳಜಿರ ಯಮುನ ಅಯ್ಯಪ್ಪ (ತಾಮನೆ-ಮನ್ನೆರ) ಕರವಂಡ ಸೀಮಾ ಗಣಪತಿ ಬರೆದ ಕೊಡವ ಮಕ್ಕಡ ಕೂಟದ 69ನೇ ಪುಸ್ತಕ “ದೇವತೆಯಡ ಮತ್ತು ಕೇಳಿಪೋನಯಿಂಗಡ ಪಾಟ್ ಕಥಾ ರೂಪ” ಹಾಗೂ 70ನೇ ಪುಸ್ತಕ “ಜಾನಪದ ಕತೆ ಜೊಪ್ಪೆ” ನಾಲ್ಕು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಜಮ್ಮಾಜಾಗ ಮತ್ತು ತೋಕ್ ಹಕ್ಕು” ಕುರಿತು ವಿಚಾರ ಮಂಡನೆ ಮಾಡಿ ಮಾತನಾಡಿದ ಅಪ್ಪಣ್ಣ, ಕೊಡವ ಎಂಬ ಶಬ್ದದಲ್ಲಿ 19 ಕೊಡವ ಭಾಷಿಕ ಮೂಲನಿವಾಸಿಗಳು ಅಡಗಿದ್ದಾರೆ. ಜಮ್ಮಾ ಎನ್ನುವುದು ಜನ್ಮ ಭೂಮಿ, ಇದು ಯಾವ ರಾಜರು ಅಥವಾ ಬ್ರಿಟಿಷರು ಬಳುವಳಿಯಾಗಿ ನೀಡಿದ ಭೂಮಿಯಲ್ಲ. ಹಿಂದಿನ ಕಾಲದಲ್ಲಿ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಲಾಯಿತು. ಈ ಭೂಮಿ ಕೊಡಗಿವರ ಉಸಿರು, ಕೊಡವರ ಜನ್ಮಸಿದ್ದ ಹಕ್ಕಾಗಿದೆ ಎಂದರು.
ಜಮ್ಮಾ ಇಲ್ಲದಿದ್ದರೆ 19 ಮೂಲನಿವಾಸಿಗಳಿಗೆ ನೆಲೆ ಇಲ್ಲದಂತಾಗುತ್ತದೆ. ಜಮ್ಮಾಮಣ್ಣು ಕೊಡವರನ್ನು ಸಾಕಿ, ಬೆಳೆಸುತ್ತಿದೆ. ಇದನ್ನು ಎಂದಿಗೂ ಮಾರುವಂತಿಲ್ಲ ಎಂದು ಪ್ರತಿಪಾದಿಸಿದರು. ಕೊಡವರು ಪೂರ್ವಜರ ಕಾಲದಿಂದಲೂ ಆಯುಧಗಳನ್ನು ಪೂಜಿಸುತ್ತಾರೆ. ಕತ್ತಿಗಳು, ಬಿಲ್ಲು ಬಾಣಗಳು, ಈಗ ಬಂದೂಕು ಪೂಜಿಸಲ್ಪಡುತ್ತಿದೆ. ಕೋವಿ ಕೊಡವರ ಮನೆಯ ಪೂಜಾರ್ಹ ಸಾಧನವಾಗಿದ್ದು, ಕೊಡವ ಜನಾಂಗದ ಅವಿಭಾಜ್ಯ ಅಂಗವಾಗಿದೆ ಎಂದು ತಿಳಿಸಿದರು.
ಸಾಹಿತಿ ಹಾಗೂ ಎಂ.ಎ.ಕೊಡವ ವಿಭಾಗದ ಉಪನ್ಯಾಸಕಿ ಬಾಚರಣಿಯಂಡ ರಾಣು ಅಪ್ಪಣ್ಣ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪೋಷಕರು ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಭರದಲ್ಲಿ ಮಾತೃ ಭಾಷೆಯನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಕ್ಕಳಲ್ಲಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಆಸಕ್ತಿ ಹೆಚ್ಚಾಗಬೇಕು. ಕಾರ್ಯಪ್ಪ ಕಾಲೇಜ್ ನಲ್ಲಿ ಎಂ.ಎ ಕೊಡವ ಪದವಿ ಈಗಾಗಲೇ ಆರಂಭವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಪುಸ್ತಕ ರಚಿಸಿ ಬಿಡುಗಡೆ ಮಾಡುವ ಮೂಲಕ ಯುವಕ, ಯುವತಿಯರಿಗೆ ಮಾದರಿಯಾಗಿದ್ದಾರೆ. ಕೊಡವ ಎಂ.ಎ ತರಗತಿಯ ಅಧ್ಯಯನವನ್ನು ಸದುಪಯೋಗಪಡಿಸಿಕೊಂಡು ಕೊಡವ ಸಾಹಿತ್ಯ, ಭಾಷೆ ಹಾಗೂ ಬರಹವನ್ನು ಬೆಳೆಸುವಂತಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ.ಮೇಜರ್ ರಾಘವ, ಬುಡಕಟ್ಟು ಸಮುದಾಯದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಭಾಷೆ ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು.
ಕಾಲೇಜ್ ನಲ್ಲಿ ಎಂ.ಎ ಕೊಡವ ಪ್ರಾರಂಭವಾದ ನಂತರ ಗಮನಾರ್ಹ ಬದಲಾವಣೆಯಾಗುತ್ತಿದೆ. ಹಿರಿಯರ ಮಾರ್ಗದರ್ಶನ ಹಾಗೂ ಕಿರಿಯರ ಉತ್ಸಾಹದಿಂದ ಪುಸ್ತಕಗಳನ್ನು ಅನಾವರಣಗೊಳಿಸಲಾಗುತ್ತಿದೆ ಎಂದರು. ಪುಸ್ತಕದಲ್ಲಿ ಯುವ ಸಮೂಹಕ್ಕೆ ಹಲವು ಸಂದೇಶಗಳಿದ್ದು, ಮುಂದಿನ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಕೃತಿ ಪ್ರಕಟವಾಗಲಿ ಎಂದು ಹಾರೈಸಿದರು.
ಎಂ.ಎ ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, ಮಾತನಾಡಿ, ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡುವ ಮೂಲಕ ಕೊಡಗಿನ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಲಾಗಿದೆ ಎಂದು ಅಭಿಪ್ರಾಯಪಟ್ಟರು.
ಕೊಡವ ಸಂಸ್ಕೃತಿ, ಭಾಷೆ, ಕೊಡವ ಪರವಾದ ಶೈಕ್ಷಣಿಕ ಕಾರ್ಯ ನಿಲ್ಲಬಾರದು, ವಿಮರ್ಶೆ ಸಾಹಿತ್ಯ ಕೊಡಗಿನಲ್ಲಿ ಕಡಿಮೆ ಇದ್ದು ಅದರ ಬಗ್ಗೆ ಸಮಾಜಕ್ಕೆ ತೋರಿಸುವ ಕೆಲಸ ಆಗಬೇಕು, ತುರ್ಜುಮೆ ಸಾಹಿತ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅದನ್ನು ಕೊಡವ ಸಾಹಿತ್ಯದಲ್ಲಿ ತರುವ ಕೆಲಸ ಆಗಬೇಕು. ಮೂಲ ಸಂಶೋಧನೆ ಕಾರ್ಯ ಆಗಬೇಕು. ಸಂಶೋಧನಾ ಲೇಖನದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸಲಹೆ ನೀಡಿದರು.
ಎಂ.ಎ ವಿದ್ಯಾರ್ಥಿ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡವ ಮಕ್ಕಡ ಕೂಟದ ವತಿಯಿಂದ ಹಲವು ಸಾಹಿತಿಗಳ ಪುಸ್ತಕವನ್ನು ಹೊರತಂದಿದ್ದು, ಕೂಟವು ಎಲೆಮರೆಯ ಕಾಯಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಂ.ಎ.ಕೊಡವ ವಿಭಾಗದ ಉಪನ್ಯಾಸಕಿ ಅಣ್ಣಳಪಂಡ ಧರ್ಮಶೀಲ ಅಜಿತ್ ಮಾತನಾಡಿ, ಎಂ.ಎ.ಕೊಡವ ಅಧ್ಯಯನದ ಕುರಿತು ಮಾಹಿತಿ ನೀಡಿದರು.
ಕೊಡವ ಎಂ.ಎ ವಿದ್ಯಾರ್ಥಿ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕೇವಲ ಲಾಭಕ್ಕಾಗಿ ಶಿಕ್ಷಣ ಪಡೆಯದೆ ಅದನ್ನು ಜೀವನದ ಭಾಗವಾಗಿ ಸ್ವೀಕರಿಸಬೇಕು. ಭಾಷೆ, ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿರುವವರು ಸದಾ ಕಲಿಕೆಯಲ್ಲಿ ತೊಡಗಿಕೊಂಡಿರುತ್ತಾರೆ ಎಂದರು.
ಸಾಮಾಜಿಕ ಜಾಲತಾಣವನ್ನು ಮತ್ತೊಬ್ಬರ ತೇಜೋವಧೆಗೆ ಬಳಕೆ ಮಾಡದೆ ಉತ್ತಮ ಕಾರ್ಯಕ್ಕೆ ಬಳಕೆ ಮಾಡುವಂತೆ ಕರೆ ನೀಡಿದರು.
“ಚೆರ್ ಕತೆ ಮತ್ತು ಚೆರ್ ನಾಟಕ” ಪುಸ್ತಕ ಬರಹಗಾರ್ತಿ ಹಾಗೂ ಕೊಡವ ಎಂ.ಎ ವಿದ್ಯಾರ್ಥಿನಿ ಐಚಂಡ ರಶ್ಮಿ ಮೇದಪ್ಪ, “ಕವನ ಪೊಟ್ಟಿ” ಪುಸ್ತಕ ಬರಹಗಾರ್ತಿ ಹಾಗೂ ಕೊಡವ ಎಂ.ಎ.ವಿದ್ಯಾರ್ಥಿನಿ ಕರವಂಡ ಸೀಮಾ ಗಣಪತಿ ಹಾಗೂ ಎಂ.ಎ.ವಿದ್ಯಾರ್ಥಿ ಬೊಪ್ಪಂಡ ಶ್ಯಾಮ್ ಪೂಣಚ್ಚ ತಮ್ಮ ಶೈಕ್ಷಣಿಕ ಜೀವನ ಹಾಗೂ ಪುಸ್ತಕದ ಬಗ್ಗೆ ಮಾತನಾಡಿದರು. ಜನಾಂಗ ಬಾಂಧವರು ಕೊಡವ ಎಂ.ಎ ಗೆ ಸೇರ್ಪಡೆಗೊಂಡು ಕೊಡವ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಲು ಕೈಜೊಡಿಸುವಂತೆ ತಿಳಿಸಿದರು.
ಕೊಡವ ಎಂ.ಎ ವಿದ್ಯಾರ್ಥಿನಿಯರಾದ ಬೊಳ್ಳಾರ್‍ಪಂಡ ಎನ್.ಹೇಮಾವತಿ, ಐಚಂಡ ರಶ್ಮಿ ಮೇದಪ್ಪ ಪ್ರಾರ್ಥಿಸಿ, ಕರವಂಡ ಸೀಮಾ ಗಣಪತಿ ಸ್ವಾಗತಿಸಿ, ಬೊಳ್ಳಜಿರ ಯಮುನಾ ಅಯ್ಯಪ್ಪ ನಿರೂಪಿಸಿ, ಪುತ್ತರಿರ ವನಿತ ಮುತ್ತಪ್ಪ ವಂದಿಸಿದರು. ಚೌಂಡಿರ ಶಿಲ್ಪ ಪೊನ್ನಪ್ಪ ಪುಸ್ತಕ ಪರಿಚಯ ಮಾಡಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.