Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ*

ಜುಲೈ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.19 : ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಲಯನ್ ಡಿ.ಮಧುಕರ್ ಶೇಟ್, ಕಾರ್ಯದರ್ಶಿಯಾಗಿ ಲಯನ್ ನಟರಾಜ್ ಕೆಸ್ತೂರು, ಜಂಟಿ ಕಾರ್ಯದರ್ಶಿಯಾಗಿ ಎಂ.ಪಿ.ನಾಗೇಂದ್ರ, ಖಜಾಂಚಿಯಾಗಿ ಲಯನ್ ಎನ್.ಬಿ.ರವಿ, ಉಪಾಧ್ಯಕ್ಷರಾಗಿ ಲಯನ್ ದಿನೇಶ್ ರಾವ್, ಲಯನ್ ಜೆ.ವಿ.ಕೋಟಿ, ಟೇಮರ್ ಆಗಿ ಲಯನ್ ಹೆಚ್.ಟಿ.ಚಾಮ, ಟೈಲ್ ಟ್ವಿಸ್ಟರ್ ಆಗಿ ಲಯನ್ ಕಮಲಾ ಮುರುಗೇಶ್, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಲಯನ್ ಮೋಹನ್ ಕುಮಾರ್, ಸದಸ್ಯತ್ವ ಸಮಿತಿಯ ಅಧ್ಯಕ್ಷರಾಗಿ ಲಯನ್ ಎಂ.ಎ.ನಿರಂಜನ್, ಕ್ಲಬ್ ಮೆಲ್ವಿಚರಕಾಗಿ ಲಯನ್ ಬಿ.ವಿ.ಮೋಹನ್ ದಾಸ್, ಎಲ್‍ಸಿಐಎಫ್ ಅಧ್ಯಕ್ಷರಾಗಿ ಲಯನ್ ಕವಿತಾ ಕಾವೇರಮ್ಮ, ನಿರ್ದೇಶಕರುಗಳಾಗಿ ಲಯನ್ ಕೆ.ಮಧುಕರ್, ಲಯನ್ ಪಿ.ಪಿ.ಸೋಮಣ್ಣ, ಲಯನ್ ಎಸ್.ಬಿ.ಮುರುಗೇಶ್, ಲಯನ್ ಸಂಗೀತಾ ಮೋಹನ್‍ದಾಸ್, ಲಯನ್ ಕೆ.ಕೆ.ದಾಮೋದರ್, ಲಯನ್ ಕೆ.ಟಿ.ಬೇಬಿ ಮ್ಯಾಥ್ಯು, ಲಯನ್ ಡಿ.ಜಿ.ಕಿಶೋರ್, ಲಯನ್ ಅಗಸ್ಟಿನ್ ಜಯರಾಜ್ ಪ್ರಮಾಣ ವಚನ ಸ್ವೀಕರಿಸಿದರು.

ಲಯನ್ಸ್ ಸಂಸ್ಥೆ 317 ಡಿ ಯ 2ನೇ ಉಪ ರಾಜ್ಯಪಾಲ ಲಯನ್ ಕುಡುಪಿ ಅರವಿಂದ್ ಶೆಣೈ ಅವರು ಪದಗ್ರಹಣ ಸಮಾರಂಭ ನಡೆಸಿಕೊಟ್ಟರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಸದಸ್ಯರಿಗೆ ಕರೆ ನೀಡಿದರು.

ನೂತನ ಅಧ್ಯಕ್ಷ ಮಧುಕರ್ ಶೇಟ್ ಮಾತನಾಡಿ ಹಿಂದಿನ ಅಧ್ಯಕ್ಷರುಗಳ ಸೇವೆಯನ್ನು ಸ್ಮರಿಸಿದರು. 10 ಸೆಂಟ್ ಜಾಗವನ್ನು ಉಚಿತವಾಗಿ ಕುಪ್ಪಂಡ ಚಿಮ್ಮಿ ಕುಟ್ಟಯ್ಯ ಅವರು (CRAIGMORT ESTATE) ತಮ್ಮ ತಂದೆ ಪಾಂಡಂಡ ನಂಜಪ್ಪ ಅವರ ಜ್ಞಾಪಕಾರ್ಥ ನೀಡಿದ ಫಲವಾಗಿ ಸಂಸ್ಥೆಗೆ ಸ್ವಂತ ಕಟ್ಟಡದ ಭಾಗ್ಯ ಲಭಿಸಿತು ಎಂದರು.

2023-24ನೇ ಸಾಲಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿ, ಮುಂಬರುವ ದಿನಗಳಲ್ಲಿ ಸಂಸ್ಥೆಯ ಸದಸ್ಯರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ನಿರ್ಗಮಿತ ಅಧ್ಯಕ್ಷರಾದ ಲಯನ್ ಕವಿತಾ ಕಾವೇರಮ್ಮ ಮಾತನಾಡಿ, 2022-23ನೇ ಸಾಲಿನ ಎಲ್ಲಾ ಸೇವಾ ಕಾರ್ಯಗಳಲ್ಲಿ ಸಹಕಾರ ನೀಡಿದ ಸರ್ವ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿ, ನೂತನ ಸಮಿತಿಗೆ ಶುಭಕೋರಿದರು.

ಮಡಿಕೇರಿ ವಕೀಲರ ಸಂಘದ ಆಡಳಿತ ಮಂಡಳಿಗೆ ಸಂಸ್ಥೆಯ ಸದಸ್ಯ ಲಯನ್ ಎಂ.ಎ.ನಿರಂಜನ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಂತೀಯ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ರಾಯಭಾರಿ ಲಯನ್ ಧನು ಉತ್ತಯ್ಯ, ಸಂಯೋಜಕ ಪಂಚಂ ತಿಮ್ಮಯ್ಯ, ಲಯನ್ ಮಮತಾ ಶೆಣೈ, ವಲಯಧ್ಯಕ್ಷರುಗಳಾದ ಲಯನ್ ರೋಹಿತ್, ಬಾಲಕೃಷ್ಣ ಹಾಗೂ ಸತೀಶ್ ಉಪಸ್ಥಿತರಿದ್ದರು.

ಮಾಸ್ಟರ್ ಸ್ಕಂದ ಮಧುಕರ್ ಶೇಟ್ ಪ್ರಾರ್ಥಿಸಿ, 22-23ನೇ ಸಾಲಿನ ಅಧ್ಯಕ್ಷ ಲಯನ್ ಕವಿತಾ ಕಾವೇರಮ್ಮ ಸ್ವಾಗತಿಸಿ, ಲಯನ್ ಸತೀಶ್ ರೈ ಧ್ವಜ ವಂದನೆ ನೆರವೇರಿಸಿದರು. ಲಯನ್ ಮೋಹನ್ ಕುಮಾರ್ ಲಯನ್ಸ್ ನ ನೀತಿ ಸಂಹಿತೆಯನ್ನು ವಾಚಿಸಿದರು. ನೂತನ ಅಧ್ಯಕ್ಷ ಲಯನ್ ಮಧುಕರ್ ಶೇಟ್ ಹಾಗೂ ಪ್ರತಿಭಾ ಮಧುಕರ್ ಶೇಟ್ ಇತರ ಸದಸ್ಯರೊಂದಿಗೆ ದೀಪ ಬೆಳಗಿದರು.

ಲಯನ್ ಕವಿತಾ ಕಾವೇರಮ್ಮ, ಲಯನ್ ಬೊಳ್ಳಪ್ಪ, ಲಯನ್ ಕಿಶೋರ್ ಹಾಗೂ ಲಯನ್ ನಿರಂಜನ್ 23-24ನೇ ಸಾಲಿನ ಸಮಿತಿ ಸದಸ್ಯರನ್ನು ಹಾಗೂ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಲಯನ್ ನಟರಾಜ್ ಕೆಸ್ತೂರು ಸರ್ವ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.