Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*
  • *ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*
  • *ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*
  • *ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*
  • *ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*
  • *ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಬಿ.ಎ.ಷಂಶುದ್ದೀನ್ ಮಡಿಕೇರಿ ಆಯ್ಕೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.26 ರಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ಗೆಲುವು ಸಾಧಿಸಿದ ತಂಡಗಳು*
  • *ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಹೆಸರು ನೋಂದಾಯಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಹೆಸರು ನೋಂದಾಯಿಸಿ*

ಜುಲೈ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.20 : ಕರ್ನಾಟಕ ಸರ್ಕಾರವು 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕೊಡಗು ಜಿಲ್ಲೆಗೆ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕವನ್ನು ಅಧಿಸೂಚಿಸಲಾಗಿದೆ.
ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ.47 ಸಾವಿರ ಹಾಗೂ ಅಡಿಕೆ ಬೆಳೆಗೆ ರೂ.1,28,000 ಆಗಿದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5 ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಿದೆ. ವಿಮಾ ನೋಂದಣಿಗೆ ಜುಲೈ, 31 ಕೊನೆ ದಿನವಾಗಿದೆ.
ತೋಟಗಾರಿಕೆ ಬೆಳೆಗಳ ವಿಮಾ, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ಹಾಗೂ ಅನ್ವಯಿಸುವ ಅವಧಿಯ ವಿವರ ಇಂತಿದೆ: ಕಾಳು ಮೆಣಸು ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ 47 ಸಾವಿರ, ರೈತರು ಪಾವತಿಸಬೇಕಾಗಿರುವ ಪ್ರೀಮಿಯಂ ಮೊತ್ತ(ಶೇ.5) 2,350, ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.1,28,000, ರೈತರು ಪಾವತಿಸಬೇಕಾಗಿರುವ ಪ್ರೀಮಿಯಂ ಮೊತ್ತ(ಶೇ.5) ರೂ.6,400 ಆಗಿದೆ. ವಿಮಾ ಅನ್ವಯಿಸುವ ಅವಧಿ 2023 ರ ಆಗಸ್ಟ್, 1 ರಿಂದ 2024 ರ ಜುಲೈ, 31 ರವರೆಗೆ ಅನ್ವಯಿಸುತ್ತದೆ. ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಮೊತ್ತವು ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿದೆ.
ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗಧಿತ ಅರ್ಜಿಯೊಂದಿಗೆ ಪಹಣಿ ಪತ್ರ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ಹತ್ತಿರದ ಬ್ಯಾಂಕ್‍ನಲ್ಲಿ ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಬಹುದು.
ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಗೆ ಕ್ಷೇಮಾ ಜನರಲ್ ವಿಮಾ ಸಂಸ್ಥೆಯು ಹಂಚಿಕೆಯಾಗಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ, ಕ್ಷೇಮಾ ಜನರಲ್ ವಿಮಾ ಸಂಸ್ಥೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಮಡಿಕೇರಿ ಮೊ.ನಂ.9945303149, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಸೋಮವಾರಪೇಟೆ ಮೊ.ನಂ.8762622424, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪೊನ್ನಂಪೇಟೆ ಮೊ.ನಂ.9448049020, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸಾಮಾನ್ಯ ಸೇವಾ ಕೇಂದ್ರ ಹಾಗೂ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಮಡಿಕೇರಿ, ಕೊಡಗು ಮೊ.ನಂ. 9448999227 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಎಚ್.ಆರ್.ನಾಯಕ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*

ಏಪ್ರಿಲ್ 25, 2026

*ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*

ಏಪ್ರಿಲ್ 25, 2026

*ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*

ಏಪ್ರಿಲ್ 25, 2026

*ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*

ಏಪ್ರಿಲ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿದ್ದಾಪುರ ಏ.25 NEWS DESK : ಕಾಡು ಪ್ರಾಣಿಗಳ ಹಾವಳಿಯಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವರ್ಷವಿಡಿ…

*ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*

ಏಪ್ರಿಲ್ 25, 2026

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 2026

*ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಬಿ.ಎ.ಷಂಶುದ್ದೀನ್ ಮಡಿಕೇರಿ ಆಯ್ಕೆ*

ಏಪ್ರಿಲ್ 25, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.26 ರಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*

ಏಪ್ರಿಲ್ 25, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 25, 2026

*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಏಪ್ರಿಲ್ 24, 2026

*ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*

ಏಪ್ರಿಲ್ 24, 2026

*ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*

ಏಪ್ರಿಲ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.