Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಾಪೋಕ್ಲು : ದುಶ್ಚಟಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಪಿ ಎಸ್ಐ ಮಂಜುನಾಥ್ ಸಲಹೆ 
ಇತ್ತೀಚಿನ ಸುದ್ದಿಗಳು

*ನಾಪೋಕ್ಲು : ದುಶ್ಚಟಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಪಿ ಎಸ್ಐ ಮಂಜುನಾಥ್ ಸಲಹೆ 

July 23, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ನಾಪೋಕ್ಲು ಜು.23 : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
 ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಪೋಕ್ಲು ಠಾಣಾಧಿಕಾರಿ  ಮಂಜುನಾಥ್ ವಿದ್ಯಾರ್ಥಿಗಳಿಗೆ ಕಾನೂನು ಅಂದರೆ ಏನು? ಕಾನೂನು ಉಲ್ಲಂಘಿಸಿದವರಿಗೆ ಆಗುವ ಶಿಕ್ಷೆಯ ಬಗ್ಗೆ ಮಾಹಿತಿನೀಡಿದರು.ಶಿಕ್ಷಣದ ಮಹತ್ವದ ಮೂಲಕ ಗಳಿಸಿಕೊಳ್ಳುವ ಜ್ಞಾನ, ಕಟ್ಟಿಕೊಳ್ಳುವ ಬದುಕು, ರೂಡಿಸಿಕೊಳ್ಳಬೇಕಾದ ಮೌಲ್ಯಗಳು, ಮಾನವೀಯತೆಯ ಮನೋಭಾವದ ಬಗ್ಗೆ ತಿಳಿಸಿದರು. ಮಾದಕ ವಸ್ತುಗಳ ಬಳಕೆಯಿಂದ  ಹಾಗುವ ದುಷ್ಪರಿಣಾಮ ಮತ್ತು ಅದನ್ನು ಬಳಸುವ, ಸರಬರಾಜು ಮಾಡುವವರಿಗೆ ಶಿಕ್ಷೆ ಮತ್ತು ದಂಡಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು ಮೊಬೈಲ್ ಬಳಸುವುದರಿಂದ ಆಗುವ ಸಾಧಕ ಬಾದಕಗಳ ಬಗ್ಗೆ ಕೂಡ ಮಾಹಿತಿ ನೀಡಿ ಎಲ್ಲಾ ವಿದ್ಯಾರ್ಥಿಗಳು ಕಾನೂನನ್ನು ಪರಿಪಾಲಿಸಿ ಉಲ್ಲಂಘನೆ ಮಾಡದೆ ಶಿಸ್ತಿನಿಂದ ಶಿಕ್ಷಣವನ್ನು ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಬೇಕೆಂದು ಕರೆ ನೀಡಿದರು.
ಪೊಲೀಸ್ ಸಿಬ್ಬಂದಿ  ಲವಕುಮಾರ್ ಮಾತನಾಡಿ ವಿದ್ಯಾರ್ಥಿಗಳು ರಸ್ತೆಯ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಲೇಜಿನ  ನೀತಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಸುಸಂಸ್ಕೃತರಾಗಿ ಬಾಳಿ ಎಂದು ಕಿವಿಮಾತು ಹೇಳಿದ ಅವರು  ಕಾನೂನನ್ನು ಉಲ್ಲಂಘನೆ ಮಾಡಿದಲ್ಲಿ ಶಿಕ್ಷೆಗೆ ಗುರಿಯಾಗುತ್ತೀರಿ ಶಿಕ್ಷಕರ ಬೆತ್ತದೇಟಿಗೆ ಸುಧಾರಿಸದಿದ್ದಲ್ಲಿ ಮುಂದೊಂದು ದಿನ ಪೊಲೀಸರ ಲಾಠಿ ಏಟು ತಿನ್ನಬೇಕಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ. ಹಾರಿಸ್ ಗಿಡವಾಗಿ ಬಗ್ಗದು ಮರವಾಗಿ ಬಗ್ಗಲು ಅಸಾಧ್ಯ,ಆದ್ದರಿಂದ  ವಿದ್ಯಾರ್ಥಿಗಳು ಅಮಲು ಪದಾರ್ಥವೆಸನಿಗಳ ಕೆಟ್ಟ ವ್ಯಕ್ತಿಗಳ ಸಹವಾಸ ಮಾಡದೆ  ಶಿಸ್ತು, ಸಹನೆ, ಸುಚಿತ್ವ ಮೈಗೂಡಿಸಿಕೊಂಡು ಶಿಕ್ಷಕರಿಗೆ ಹಿರಿಯರಿಗೆ ಗೌರವ ನೀಡಿ ಶ್ರದ್ಧೆಯಿಂದ ವಿದ್ಯಭ್ಯಾಸ ಮಾಡಿದರೆ ಮಾತ್ರ ತಮ್ಮ ಭವಿಷ್ಯ ಉಜ್ಜಲವಾಗಲು ಸಾದ್ಯ,
ಎಲ್ಲವನ್ನು ಮರಳಿ ಪಡೆಯಬಹುದು ಆದರೆ ಕಳೆದು ಹೋದ ಈ ಅಮೂಲ್ಯವಾದ ಸಮಯವನ್ನು ಮಾತ್ರ ಮರಳಿ ಪಡೆಯಲು  ಸಾಧ್ಯವಿಲ್ಲ ಎಂದರು. ಸತ್ಯವನ್ನು ಮನಗೊಂಡು ಈಗಾಗಲೇ ನಿಮ್ಮಲ್ಲಿ ಕಂಡುಬರುವ ಕೆಟ್ಟ ಅಭ್ಯಾಸಗಳಿಗೆ ತಿಲಾಂಜಲಿ ಹಾಕಿ ಶಿಸ್ತಿನ ಸಿಪಾಯಿಗಳಾಗಿ ಜೀವನ ಉದ್ದಕ್ಕೂ ಬಾಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಭಾರ ಪ್ರಾಂಶುಪಾಲೆ ವಿಜಿತ, ಉಪ ಪ್ರಾಂಶುಪಾಲ ಶಿವಣ್ಣ, ಎಸ್‌ ಡಿಎಂಸಿ ಸದಸ್ಯರಾದ ಬೊಳ್ಳೆಪಂಡ ಹರೀಶ್, ಶಶಿ ಮಂದಣ್ಣ, ಅಬ್ದುಲ್ ಖಾದರ್, ಮುಜೀಬ್, ಅಶ್ರಫ್, ಉಪನ್ಯಾಸಕರು, ಶಿಕ್ಷಕರು,ವಿದ್ಯಾರ್ಥಿಗಳು, ಶಾಲೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಕೆ.ಬಿ. ಉಷಾರಾಣಿ ನಿರೂಪಿಸಿದರು. ಪ್ರಭಾರ ಪ್ರಾಂಶುಪಾಲೆ ವಿಜಿತ ಸ್ವಾಗತಿಸಿ, ಪ್ರಭಾರ ಉಪಪ್ರಾಂಶುಪಾಲ ಶಿವಣ್ಣ ವಂದಿಸಿದರು. (ವರದಿ : ಝಕರಿಯ ನಾಪೋಕ್ಲು) 
Share. Facebook Twitter Pinterest LinkedIn Tumblr Email WhatsApp
Previous Article*7ನೇ ಮೈಲು : ಮರ ಬಿದ್ದು ಹಾನಿ*
Next Article *ನಾಪೋಕ್ಲು ಭಾಗದಲ್ಲಿ ಮಳೆಯ ಆರ್ಭಟ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.