ಮಡಿಕೇರಿ ಜು.24 : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈ ದೃಶ್ಯ ನೋಡಲು ನಯನ ಮನೋಹರವಾಗಿದೆ. ಆದರೆ ಕ್ಷಣದಿಂದ ಕ್ಷಣಕ್ಕೆ ನೀರು ಏರಿಕೆಯಾಗುತ್ತಲೇ ಇರುವುದರಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.










