ಮಡಿಕೇರಿ ಜು.25 : ಬೆಟ್ಟಗೇರಿಯ ಓಂ ಯುವಕ ಸಂಘದ ಕ್ರೀಡಾ ಸಮಿತಿ ವತಿಯಿಂದ ಜು.29 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ “ಹಿಂದು ಕಪ್” ನಡೆಯಲಿದೆ.
ಅಂದು ಬೆಳಿಗ್ಗೆ 8.30ಕ್ಕೆ ಅರ್ವತ್ತೋಕ್ಲುವಿನ (ಅಪ್ಪಂಗಳ) ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಹಗ್ಗಜಗ್ಗಾಟ, ಕ್ರಿಕೆಟ್, ರಿಲೆ, ವಯೋಮಿತಿಯ ಓಟಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ತಿಳಿಸಿದ್ದಾರೆ.









