Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೌಡ ಸಮಾಜಗಳಿಂದ ಸನ್ಮಾನ : ಜನರ ಭಾವನೆಗಳೊಂದಿಗೆ ನಾವು ಚೆಲ್ಲಾಟವಾಡುವುದಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ಗೌಡ ಸಮಾಜಗಳಿಂದ ಸನ್ಮಾನ : ಜನರ ಭಾವನೆಗಳೊಂದಿಗೆ ನಾವು ಚೆಲ್ಲಾಟವಾಡುವುದಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ*

July 28, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.28 : ಜನ ಸಾಮಾನ್ಯರ ಮೂಲಭೂತ ಸಮಸ್ಯೆಗಳಿಗೆ ಸಂವಿಧಾನಾತ್ಮಕವಾಗಿ ಮತ್ತು ಕಾನೂನಿಗೆ ಅನುಗುಣವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದಕ್ಕೆ ನಾವೆಂದಿಗೂ ಹೋಗುವುದಿಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಕೊಡಗು ಗೌಡ ಸಮಾಜಗಳ ಒಕ್ಕೂಟ, ಮಡಿಕೇರಿ ಕೊಡಗು ಗೌಡ ಸಮಾಜ ಸೇರಿದಂತೆ ಜಿಲ್ಲೆಯ ಎಲ್ಲಾ ಗೌಡ ಸಮಾಜ ಮತ್ತು ಗೌಡ ಸಂಘಟನೆಗಳ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಇಬ್ಬರು ಶಾಸಕರುಗಳಾದ ಎ.ಎಸ್. ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪೊನ್ನಣ್ಣ ಸಮಸ್ಯೆಗಳನ್ನು ಚರ್ಚೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ಮುಂದಿನ ಐದು ವರ್ಷಗಳ ಆಡಳಿತದ ಅವಧಿಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ನಾವಿಬ್ಬರು ಶಾಸಕರು, ಜಾತಿ ಮತ ಭೇದಗಳನ್ನು ಮರೆತು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಾಮರಸ್ಯದ ಸುಭದ್ರ ನಾಡನ್ನು ಕಟ್ಟುವ ಪ್ರಯತ್ನ ಮಾಡಬೇಕಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲಾ ವರ್ಗದ ಮಂದಿ ಮಾರ್ಗದರ್ಶಕರಾಗಿರಲಿ ಎಂದು ಹಾರೈಸಿದರು.
ಚುನಾವಣೆಯವರೆಗೆ ಮಾತ್ರ ರಾಜಕೀಯ, ಚುನಾವಣೆಯ ಬಳಿಕ ಯಾವುದೇ ರಾಜಕೀಯಕ್ಕೆ ಆಸ್ಪದವಿಲ್ಲ. ಎಲ್ಲಾ ವರ್ಗದ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಚಿಂತನೆ ತನ್ನದು. ಅದೇ ರೀತಿ ಚುನಾವಣೆಯ ಸಂದರ್ಭ ಯಾವುದೇ ಪಕ್ಷಕ್ಕೆ ಮತ ನೀಡಿರಲಿ, ಆದರೆ, ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರನ್ನು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ತಾನು ಸಂವಿಧಾನ ಮತ್ತು ಕಾನೂನಾತ್ಮಕವಾಗಿ ಚಿಂತಿಸುವ ಮತ್ತು ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿರುವಂತಹವನು. ಈ ಹಿನ್ನೆಲೆ ಜನರ ಯಾವುದೇ ಬೇಡಿಕೆ, ಸಮಸ್ಯೆಗಳಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಗುಣವಾಗಿ ಭೇದ ಭಾವಗಳಿಗೆ ಅವಕಾಶವಿಲ್ಲದೆ ಪರಿಹಾರವನ್ನು ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಯಾವುದೇ ಸಂಘ ಸಂಸ್ಥೆಗಳು ಆ ಸಮುದಾಯದ ಬಡವರು, ಆರ್ಥಿಕವಾಗಿ ಹಿಂದುಳಿದವರು, ಸಂಕಷ್ಟದಲ್ಲಿರುವವರಿಗೆ ನೆರವಾಗಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ಪ್ರಯತ್ನಗಳನ್ನು ಮಾಡಬೇಕೆಂದು ಆಶಿಸಿದರು.
ಜಿಲ್ಲೆಯನ್ನು ಪ್ರತಿನಿಧಿಸುವ ನಾವಿಬ್ಬರು ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸದಾ ಅವರೊಂದಿಗೆ ಇರುತ್ತೇವೆ ಎಂದರು.
::: ಒಕ್ಕೂಟದಿಂದ ಅಭಿನಂದನೆ :::
ಜಿಲ್ಲೆಯ ನೂತನ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ ಅವರನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ, ಕೊಡಗು ಗೌಡ ಸಮಾಜದ ವತಿಯಿಂದ ಸನ್ಮಾನಿಸುವುದರ ಮೂಲಕ ಅಭಿನಂದಿಸಲಾಯಿತು. ಇದೇ ಸಂದರ್ಭ ಜಿಲ್ಲೆಯ ವಿವಿಧ ಗೌಡ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರುಗಳನ್ನು ಸನ್ಮಾನಿಸಿ ಗೌರವಿಸಿದರು.
::: ಬೇಡಿಕೆಗಳ ಮನವಿ :::
ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಇದೇ ಸಂದರ್ಭ ಬೇಡಿಕೆಗಳ ಮನವಿ ಪತ್ರವನ್ನು ಶಾಸಕರುಗಳಿಗೆ ಸಲ್ಲಿಸಲಾಯಿತು. ಒಕ್ಕೂಟದ ಆನಂದ ಕರಂದ್ಲಾಜೆ ಬೇಡಿಕೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿ, ಜಿಲ್ಲೆಯ ಜಮ್ಮಾ ಕೋವಿಯ ವಿನಾಯಿತಿ ಹಕ್ಕು ಇಲ್ಲಿನ ಎಲ್ಲಾ ಮೂಲ ನಿವಾಸಿಗಳಿಗೆ ಒದಗಿಸಬೇಕು, ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದ ವ್ಯವಸ್ಥೆಗಳ ಕುರಿತು ಸಾರ್ವಜನಿಕವಾಗಿ ಬರುತ್ತಿರುವ ವ್ಯತಿರಿಕ್ತ ಹೇಳಿಕೆಗಳನ್ನು ಪರಿಶೀಲಿಸುವ ಮೂಲಕ, ಕ್ಷೇತ್ರದ ತಕ್ಕ ಮುಖ್ಯಸ್ಥರು ಹಾಗೂ ಪೂಜಾ ಕಾರ್ಯಗಳ ವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಭಾಗಮಂಡಲ ವ್ಯಾಪ್ತಿಯ ಸ್ಥಳೀಯರಿಗೆ ಒದಗಿಸಬೇಕು ಮತ್ತು ಒಕ್ಕೂಟದ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನವನ್ನು ನೀಡಬೇಕೆಂದು ಮನವಿ ಮಾಡಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಉಪಸ್ಥಿತರಿದ್ದರು. ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ ಸ್ವಾಗತಿಸಿ, ಕೋಳಿಬೈಲು ಹರಿಣಿ ಪ್ರಾರ್ಥಿಸಿದರು. ದಂಬೆಕೋಡಿ ಸುಭಾಷಿಣಿ ಹಾಗೂ ಕೊಲ್ಯದ ಗಿರೀಶ್ ಶಾಸಕರ ಪರಿಚಯ ಮಾಡಿಕೊಟ್ಟರು. ಮೂಡಗದ್ದೆ ವಿನೋದ್ ಕಾರ್ಯಕ್ರಮ ನಿರೂಪಿಸಿ, ಕೊಡಗು ಗೌಡ ಸಮಾಜದ ನಿರ್ದೇಶಕ ಅಮೆ ಸೀತಾರಾಮ ವಂದಿಸಿದರು.  

Share. Facebook Twitter Pinterest LinkedIn Tumblr Email WhatsApp
Previous Article*”ಕುಶಾಲನಗರದಲ್ಲಿ ಆರೋಗ್ಯ ಶಿಕ್ಷಣ ಕುರಿತು ತರಬೇತಿ ಕಾರ್ಯಾಗಾರ” : ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತೆ ಅಗತ್ಯ : ಡಾ ಶ್ರೀನಿವಾಸ್ *
Next Article *ಮಡಿಕೇರಿ : ಜು.31 ರಂದು “ಒಂದು ಪ್ರೇಮ ಕಥೆ” ನಾಟಕ ಪ್ರದರ್ಶನ*

Website design development company services in Mangalore

Forex Trading Teacher in India

Related Posts

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

ಕುಶಾಲನಗರ NEWS DESK ಫೆ.13 : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ…

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.