Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಿಲನಾ ಭರತ್ ಬರೆದ ‘ಧ್ಯಾನಕ್ಕೆ ಬಿದ್ದ ಅಕ್ಷರಗಳು’ ಕೃತಿ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಿಲನಾ ಭರತ್ ಬರೆದ ‘ಧ್ಯಾನಕ್ಕೆ ಬಿದ್ದ ಅಕ್ಷರಗಳು’ ಕೃತಿ ಬಿಡುಗಡೆ*

ಆಗಷ್ಟ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.6 : ಸಾಹಿತಿ ಹಾಗೂ ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಕೆ. ಭರತ್ ಅವರು ಬರೆದ ಹನಿಗವನಗಳ ಸಂಕಲನ ‘ಧ್ಯಾನಕ್ಕೆ ಬಿದ್ದ ಅಕ್ಷರಗಳು’ ಕೃತಿ ಬಿಡುಗಡೆಗೊಂಡಿತು. ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಅಭಿನಯ ಕಲಾ ಮಿಲನ ಚಾರಿಟೇಬಲ್ ಟ್ರಸ್ಟ್ ಕೊಡಗು ಸಹಯೋಗದಲ್ಲಿ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಕೃತಿ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅನಂತಶಯನ, ಗಂಧವನ್ನು ತಿಕ್ಕಿದಷ್ಟು ಸುಗಂಧ ಹರಡುತ್ತದೆ. ಅದೇ ರೀತಿ ಜೀವನದಲ್ಲಿ ಹೆಚ್ಚು ನೋವು ಅನುಭವಿಸಿದವರು ಕವಿಯಾದರೆ ಸುಂದರವಾದ ಕವನ ಹುಟ್ಟುತ್ತೆ. ಕೆಲವರು ಬರೆದಾಗ ಅದರಲ್ಲಿ ಸಂದೇಶ ಇರಲ್ಲ. ಚಂದಕಾಣುತ್ತದೆ ಅಷ್ಟೆ. ಅಂತಹ ಬರಗಾರರು ಹೆಚ್ಚಿದ್ದಾರೆ. ಆದರೆ ಅನುಭವವನ್ನು ಬರಹಕ್ಕೆ ಇಳಿಸುವವರ ಸಂಖ್ಯೆ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.
ಬರವಣಿಗೆಯಲ್ಲಿ ಆಸಕ್ತಿ ಉಳ್ಳವರು ನಿರಂತರವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಳ್ತಾರೆ. ಏಕಾಂಗಿಯಾಗಿದ್ದಾಗ ನಮ್ಮ ಪ್ರತಿಭೆ ತೆರೆದುಕೊಳ್ಳುತ್ತದೆ, ಬೇರೆಯವರೊಂದಿಗೆ ಬೆರೆತಾಗ ಮನಸ್ಸು ಚಂಚಲವಾಗುತ್ತದೆ. ನಮ್ಮೊಳಗಿನ ಚಿಂತನೆ ಅಕ್ಷರರೂಪ ಪಡೆದುಕೊಳ್ಳುತ್ತದೆ, ಮಿಲನಾ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಮಾರುತಿ ದಾಸಣ್ಣವರ್ ಕವಿ ಕಾಣದನ್ನು ಕಲಾವಿದ ಕಾಣಬಲ್ಲ. ಕವಿಗೆ ವರ್ಣಿಸಲು ಅಕ್ಷರಗಳಿವೆ. ಆದ್ರೆಕಲಾವಿದ ಆಂಗಿಕ ಕಲೆಯ ಮುಖಾಂತರವೇತನ್ನ ಭಾವನೆಗಳನ್ನು ಹೇಳಬೇಕಾಗುತ್ತದೆ. ಸಂವೇದನಾ ಶೀಲ ಕವಯತ್ರಿ, ಕಲಾವಿದೆಯಾಗಿ ದಿಟ್ಟತನದಿಂದ ವಿಚಾರಗಳನ್ನು ಪ್ರಸ್ತುತಪಡಿಸುವ ವ್ಯಕ್ತಿ ಮಿಲನಾ ಭರತ್. ಸಾಹಿತ್ಯಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು, ಮತ್ತಷ್ಟು ಕೃತಿಗಳನ್ನು ಹೊರತರಲು ಮುಂದಾಗಬೇಕೆAದು ಹೇಳಿದರು.
ಪುಸ್ತಕದ ಕುರಿತು ಮಾತನಾಡಿದ ಸಾಹಿತಿ ಕಾಜೂರು ಸತೀಶ್, ನೃತ್ಯ ಮತ್ತು ಕಾವ್ಯ ಒಂದಾಗುವುದು ಧ್ಯಾನದಿಂದ. ಇವೆರಡೂ ಈ ಕೃತಿಯಲ್ಲಿದೆ. ಹೆಣ್ಣೆಂದರೇನು, ಪೌರಾಣಿಕ ಮತ್ತು ಚಾರಿತ್ರಿಕವಾಗಿ ನೊಂದಿರುವ ಪಾತ್ರಗಳು, ರಾಮ, ಸೀತಾ, ಹೆಣ್ಣು ಗಂಡಿನ ನಡುವಿನ ಸಾಮರಸ್ಯ, ಪರಮಪ್ರೇಮ, ನಿಷ್ಕಾಮ, ಹಲವು ಮಾದರಿಯ ಕವಿತೆಗಳು ಪುಸ್ತಕದಲ್ಲಿದೆ ಎಂದು ವಿವರಿಸಿದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಮೈಸೂರಿನ ಅಮೃತ ವಿವಿ ದೃಶ್ಯ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆಡಾ. ಬಾಲಾಡಿ ಮೌಲ್ಯ ಮಾತನಾಡಿ, ಹೆಣ್ಣಿಗೆ ನೋವು, ಸವಾಲುಗಳು ಇಲ್ಲದೇ ಇದ್ದಿದ್ದರೆ ಇಷ್ಟೊಂದು ಸಾಹಿತ್ಯ ಕ್ಷೇತ್ರದಲ್ಲಿ ಕಥೆ, ಕವನಗಳು ಮೂಡಿ ಬರಲು ಸಾಧ್ಯವಾಗುತ್ತಿರಲಿಲ್ಲ. 2022ರ ಸಮೀಕ್ಷೆಯಂತೆ ದೇಶದಲ್ಲಿ ಶೇ.48.5 ಮಹಿಳೆಯರಿದ್ದಾರೆ. ದೇಶದಲ್ಲಿ ಪರಿಸ್ಥಿತಿ ಬದಲಾಗಿದೆ. ಭ್ರೂಣ ಹತ್ಯೆ ನಿಂತಿದೆ. 2021 ರಲ್ಲಿ ಮಹಿಳಾ ಜನಸಂಖ್ಯೆ ಹೆಚ್ಚಾಗಲು ಶುರುವಾಯ್ತು. 2021ರಲ್ಲಿ ಶೇ.90.95 ಜನ ಅಕ್ಷರಸ್ಥರಾಗ್ತಿದ್ದಾರೆ ಎಂದರು.
ಆದರೂ ಮಹಿಳೆಯರ ಮೇಲೆ ಮಾನಸಿಕ, ದೈಹಿಕ, ಕೌಟುಂಬಿಕ ದೌರ್ಜನ್ಯ ಹೆಚ್ಚುತ್ತಿದೆ. 2011ರ ಅಪರಾಧ ಸಮೀಕ್ಷೆಯಂತೆ 2,28,600, 2021ರಲ್ಲಿ 4,48,278 ಮಹಿಳೆಯರ ಮೇಲೆ ದೌರ್ಜನ್ಯ ಕೇಸ್ ದಾಖಲಾಗಿದೆ. ದೆಹಲಿಯಲ್ಲಿ ನಡೆದ ಹೇಯ ಕೃತ್ಯ ಮಾಧ್ಯಮಗಳಲ್ಲಿ ಪ್ರಕಟಗೊಂಡ ಬಳಿಕ ನಿರಂತರವಾಗಿ ಅಂತಹ ಪ್ರಕರಣಗಳು ಹೆಚ್ಚತೊಡಗಿತು.
ಬ್ರೇಕಿಂಗ್ ನ್ಯೂಸ್ ಮೂಲಕ ಸಂಭ್ರಮಿಸುವ ಕೆಲಸ ಮಾಡಬಾರದು. ಮಾಧ್ಯಮಗಳು ಅತ್ಯಂತ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕಾಗುತ್ತದೆ. ಮಕ್ಕಳಿಗೆ ಮನೆಯಲ್ಲೇ ಉತ್ತಮ ಸಂಸ್ಕೃತಿಯನ್ನು ಕಲಿಸಿಕೊಟ್ಟರೆ ಪ್ರಪಂಚದಲ್ಲಿ ಅಸಹಜ, ಪೈಶಾಚಿಕ ಘಟನೆಗಳನ್ನು ನಿಯಂತ್ರಿಸಲು ಸಾಧ್ಯ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳಿಗೆ ಆರೋಗ್ಯಕರ ಮಾಹಿತಿಗಳು ಮಾತ್ರ ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಮಾತನಾಡಿ, ಕೊಡಗಿನಲ್ಲಿ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಆಸಕ್ತರಾದವರ ಸಂಖ್ಯೆ ಕಡಿಮೆ ಇದೆ. ಕ್ಲಬ್‌ನ ಬೆಳ್ಳಿ ಮಹೋತ್ಸವ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸಾಹಿತ್ಯ ಕಾರ್ಯಕ್ರಮಗಳಿಗೂ ಅವಕಾಶ ನೀಡಿದ್ದೇವೆ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾರೈ, ಅಭಿನಯ ಕಲಾ ಮಿಲನ ಕೊಡಗು ಸಂಸ್ಥೆಯ ಟ್ರಸ್ಟಿ ಕುದುಕುಳಿ ಜೆ.ಭರತ್ ಮಾತನಾಡಿದರು. ಯುವ ಕಲಾವಿದೆ ಭಾಗಮಂಡಲದ ಸ್ಫೂರ್ತಿ ಉಷಾ ನೃತ್ಯ ಪ್ರದರ್ಶನ ನೀಡಿ ರಂಜಿಸಿದರು. ಕಲಾವಿದ ಲೋಕೇಶ್ ಊರುಬೈಲು ಮಿಲನಾ ಭರತ್‌ಅವರ ಕವನ ವಾಚನ ಮಾಡಿದರು.
ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಾಸ್ತಾವಿಕ ಮಾತನಾಡಿದರು. ಕಿಶೋರ್ ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿದರು, ವಿದ್ಯಾರ್ಥಿನಿ ಸ್ನೇಹ ಪ್ರಾರ್ಥಿಸಿದರು. ರೆಜಿತ್ ಕುಮಾರ್ ಗುಹ್ಯ ಸ್ವಾಗತಿಸಿದರು. ಕೆದಂಬಾಡಿ ಕಾಂಚನಾ ವಿಶೇಷ ಆಹ್ವಾನಿತರ ಪರಿಚಯ ಮಾಡಿದರು, ಲೇಖಕಿ ಮಿಲನಾ ಭರತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.