ವಿರಾಜಪೇಟೆ ಆ.17 : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಿರಾಜಪೇಟೆ ತಾಲೂಕು ಸಮಿತಿಯ ಮಹಾಸಭೆ ಹಾಗೂ ಸನ್ಮಾನ ಸಮಾರಂಭ ವಿರಾಜಪೇಟೆ ನಗರದ ಎ-ಜೆಡ್ ಸಭಾಂಗಣದಲ್ಲಿ ನಡೆಯಿತು.
ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಂ.ಗಣೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಸಮಿತಿ ಅಧ್ಯಕ್ಷ ಭರತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭ ವಿರಾಜಪೇಟೆಯ ಹಿರಿಯ ವಿದ್ಯುತ್ ಗುತ್ತಿಗೆದಾರರಾದ ಸಿ.ಎಲೆಕ್ಸ್, ರಫೀಕ್ ಹಾಗೂ ಯೂಸಫ್ ಅವರನ್ನು ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಗುತ್ತಿಗೆದಾರರ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ಜೆ.ಚಂದ್ರಶೇಖರ್ ಸಮಿತಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ, ವರದಿ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಈ ಸಂದರ್ಭ ಗುತ್ತಿಗೆದಾರರ ಸಮಿತಿ ಉಪಾಧ್ಯಕ್ಷ ಹಂಸ, ಖಜಾಂಚಿ ಸರ್ಪುದ್ದೀನ್, ಸಲಹಾ ಸಮಿತಿ ಸದಸ್ಯರಾದ ಬಿ.ಸಿ. ಕಿರಣ್, ಬಿ.ಎನ್. ರಮೇಶ್, ಹರೀಶ್, ರಾಜ, ರಾಜೇಶ್, ಪ್ರಸನ್ನ, ಮಣಿ ಸೇರಿದಂತೆ ಸಂಘದ ಎಲ್ಲಾ ಸದಸ್ಯರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.








