ಸೋಮವಾರಪೇಟೆ ಆ.19 : ಮಡಿಕೇರಿ ವನ್ಯಜೀವಿ ವಿಭಾಗ ಕೊಡಗು ವೃತ್ತದ ವತಿಯಿಂದ ವಿಶ್ವ ಆನೆ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಫಾರೆಸ್ಟ್ರಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸೋಮವಾರಪೇಟೆ ವಿಶ್ವಮಾನವ ಕುವೆಂಪು ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಎಸ್.ವಿ.ತ್ರಿಶಾಲಗೌಡ ಪ್ರಥಮ ಸ್ಥಾನ ಗಳಿಸಿದ್ದಾರೆ.
ತ್ರಿಶಾಲಗೌಡ ಶುಂಠಿ ಗ್ರಾಮದ ಎಸ್.ಆರ್.ವರುಣ್, ಎಸ್.ವಿ.ಕೃತಿ ದಂಪತಿಗಳ ಪುತ್ರಿ.







