Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೈವ ಆರಾಧಕರ ಹಾಗೂ ದೈವ ನರ್ತಕರ ಸಭೆ : ದೈವಾರಾಧನೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ : ಜಯರಾಮ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೈವ ಆರಾಧಕರ ಹಾಗೂ ದೈವ ನರ್ತಕರ ಸಭೆ : ದೈವಾರಾಧನೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ : ಜಯರಾಮ್ ಸಲಹೆ*

ಆಗಷ್ಟ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.27 : ದೈವಾರಾಧನೆಯಲ್ಲಿ ಲೋಪವಾಗದಂತೆ ಎಲ್ಲರೂ ಎಚ್ಚರ ವಹಿಸಬೇಕು ಮತ್ತು ದೈವಗಳ ಭಾವಚಿತ್ರಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಅಭಿಪ್ರಾಯಗಳನ್ನು ಹರಿಯ ಬಿಡಬಾರದು ಎಂದು ಪ್ರಸಿದ್ಧ ದೈವ ನರ್ತಕ ಸುಳ್ಯದ ಬೊಳಿಮಜಲಿನ ಜಯರಾಮ್ ತಿಳಿಸಿದ್ದಾರೆ.
ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಮೊಬೈಲ್ ನಲ್ಲಿ ದೈವದ ಫೋಟೋ ತೆಗೆದು ಕಮೆಂಟ್ ಮಾಡುವುದರಿಂದ ದೈವಕ್ಕೆ ಅಪಚಾರ ಮಾಡಿದಂತಾಗುತ್ತದೆ. ಇದರಿಂದ ತಲೆಮಾರಿನವರೆಗೂ ದೋಷ ಕಾಡಬಹುದು ಎಂದು ಎಚ್ಚರಿಕೆ ನೀಡಿದರು.
ದೈವಾರಾಧನೆಯು ಆಯಾ ಪ್ರದೇಶಕ್ಕೆ ತಕ್ಕಂತೆ ವಿಭಿನ್ನ ರೀತಿಯಲ್ಲಿ ನಡೆಯುತ್ತದೆ. ತುಳುನಾಡಿನಲ್ಲಿ ದೈವ ನರ್ತನ ಎರಡೂವರೆ ಗಂಟೆ ನಡೆದರೆ ಕೊಡಗಿನಲ್ಲಿ ಪ್ರಶ್ನೆ ಚಿಂತನೆಯ ಕ್ರಮ ಸೇರಿ ರಾತ್ರಿ ಪೂರ್ತಿ ನಡೆಯುತ್ತದೆ. ಸಂಪ್ರದಾಯಕ್ಕೆ ಲೋಪವಾಗದಂತೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ದೈವದ ಆರಾಧನೆ ನಿರ್ಧರಿಸುವ ಬಡ ವರ್ಗದವರಿಗೆ ಆರ್ಥಿಕ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಸಂಘಟನೆ ಮೂಲಕ ದರ ನಿಗದಿ ಮಾಡುವ ಕಾರ್ಯ ಆಗಬೇಕು. ಹಿರಿಯರು ಹೇಳಿಕೊಟ್ಟ ನಿಯಮಗಳನ್ನೇ ಆದಷ್ಟು ಅನುಸರಿಸಬೇಕು ಎಂದು ಸಲಹೆ ನೀಡಿದರು.
ಸಂಘದ ಹಿರಿಯ ಸಲಹೆಗಾರ ಕೆ.ಕೆ.ದೇವಪ್ಪ ಮಾತನಾಡಿ ತುಳುನಾಡು, ಕೊಡಗು ಸೇರಿದಂತೆ ಅನೇಕ ಭಾಗದಲ್ಲಿ ದೈವರಾಧನೆ ನಡೆಯುತ್ತಿದ್ದು, ಧಾರ್ಮಿಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಪ್ರತಿವರ್ಷ ನಡೆಯುವ ದೈವಾರಾಧನೆ ಯಾವುದೇ ಕಾರಣಕ್ಕು ನಿಲ್ಲಬಾರದು. ನೇಮೋತ್ಸವ ನಡೆಯದೇ ಇರುವ ಕಡೆ ಮತ್ತೆ ಮುಂದುವರಿಸುವ ಕುರಿತು ಅರಿವು ಮೂಡಿಸಬೇಕು ಮತ್ತು ಸಂಘದಿoದ ಸಹಕಾರ ನೀಡಬೇಕು ಎಂದು ತಿಳಿಸಿದರು.
ದೈವ ಆರಾಧಕರ ಹಾಗೂ ದೈವ ನರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಪಿ.ಎಂ.ರವಿ ಮಾತನಾಡಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ದೈವಸ್ಥಾನಗಳಿದ್ದು, ಕೊಡಗು ಜಿಲ್ಲೆಗೂ ತುಳುನಾಡಿಗೂ ಅವಿನಾಭಾವ ಸಂಬoಧವಿದೆ. ದೈವದ ಬಗ್ಗೆ ಅಪಪ್ರಚಾರ, ಅಪಹಾಸ್ಯ ಮಾಡುವುದನ್ನು ಸಂಘಟನೆ ಸಹಿಸುವುದಿಲ್ಲ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕ ಸಮಾರಂಭಗಳಲ್ಲಿ ದೈವದ ವೇಷಭೂಷಣ ತೊಟ್ಟು ಕಾರ್ಯಕ್ರಮ ನೀಡಿದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಸದಾಶಿವ ರೈ ಸಂಘವು ನೋಂದಾವಣೆಗೊoಡಿದ್ದು, ಜಿಲ್ಲೆಯ ಎಲ್ಲಾ ದೈವ ಆರಾಧಕರು ಹಾಗೂ ದೈವ ದೈವ ನರ್ತಕರು ಸದಸ್ಯತ್ವ ಪಡೆದುಕೊಳ್ಳಬೇಕು. ಸಂಘದ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಸಂಘಟನಾ ಕಾರ್ಯದರ್ಶಿ ರಮೇಶ್, ಜಿಲ್ಲಾ ಖಜಾಂಚಿ ಜನಾರ್ಧನ್, ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಭಾಗದ ಸದಸ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮಾ.7 : ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು…

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.