ಬೆಂಗಳೂರು ಆ.28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇಂದು ಸಂಜೆ ಮಾನಸ ಗಂಗೋತ್ರಿಯ ಆಯ್ದ ವಿದ್ಯಾರ್ಥಿ ಸಮೂಹದ ಜತೆ ಸಂವಾದ ನಡೆಸಿದರು. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ಉಪಸ್ಥಿತರಿದ್ದರು.








