Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಗರಸಭೆಯನ್ನು ಕಾಡುತ್ತಿರುವ ಖಾಲಿ ಹುದ್ದೆಗಳು : ಸರ್ಕಾರದ ಬಳಿಗೆ ನಿಯೋಗ ತೆರಳಲು ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಗರಸಭೆಯನ್ನು ಕಾಡುತ್ತಿರುವ ಖಾಲಿ ಹುದ್ದೆಗಳು : ಸರ್ಕಾರದ ಬಳಿಗೆ ನಿಯೋಗ ತೆರಳಲು ನಿರ್ಧಾರ*

ಆಗಷ್ಟ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.31 : ದಿನದಿಂದ ದಿನಕ್ಕೆ ಮಡಿಕೇರಿ ನಗರ ಬೆಳೆಯುತ್ತಿದೆ, ಆದರೆ ನಗರಸಭೆಯಲ್ಲಿ 165 ಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದರಿಂದ ನಗರದ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹುದ್ದೆಗಳ ಭರ್ತಿಗೆ ಸರ್ಕಾರದ ಮೊರೆ ಹೋಗಲು ನಗರಸಭೆಯ ಸಾಮಾನ್ಯ ಸಭೆ ನಿರ್ಧರಿಸಿದೆ.
ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಖಾಲಿ ಹುದ್ದೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆಯಾಗುತ್ತಿರುವ ಕುರಿತು ವಿಷಯ ಪ್ರಸ್ತಾಪವಾಯಿತು. ತ್ವರಿತವಾಗಿ ಹುದ್ದೆಗಳು ಭರ್ತಿಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು ಎಂದು ಸದಸ್ಯರು ಗಮನ ಸೆಳೆದಾಗ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ಕಾರದ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ಕಳೆದ ಸಭೆಯ ನಡಾವಳಿಗಳನ್ನು ಓದಿ ಅನುಮೋದಿಸುವ ಹಂತದಲ್ಲಿ, ನಗರ ವ್ಯಾಪ್ತಿಯ ಪ್ರತಿ ಮನೆಯ ಆಸ್ತಿಯ ವಿವರಗಳನ್ನು ದಾಖಲು ಮಾಡುವ ಸರ್ವೆ ಕಾರ್ಯಕ್ಕೆ ತಲಾ 50 ರೂ. ನಿಗಧಿಪಡಿಸಿರುವ ವಿಚಾರವನ್ನು ಸದಸ್ಯ ಮನ್ಸೂರ್ ಪ್ರಸ್ತಾಪಿಸಿದರು.
ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಸರ್ಕಾರದ ಮಾನದಂಡದಂತೆ ಪ್ರತಿ ಮನೆಯಿಂದ 30 ರೂ. ಸಂಗ್ರಹಿಸಬೇಕಾಗಿದೆ. ಆದರೆ, ಸರ್ವೆ ಕಾರ್ಯ ನಡೆಸಲು ಆಗಮಿಸಿದ್ದ ಹೆಚ್.ಡಿ ಕೋಟೆ ಸಂಸ್ಥೆ ಈ ಮೊತ್ತಕ್ಕೆ ಒಪ್ಪದೆ ಹಿಂತೆರಳಿದೆ. ಈ ಕಾರಣಕ್ಕಾಗಿ ಇದೀಗ 50 ರೂ. ನಿಗಧಿ ಪಡಿಸಲಾಗಿದೆ. ಆದರೆ ಸರ್ವೆ ಕಾರ್ಯಕ್ಕೆ ಯಾರೂ ಮುಂದೆ ಬಂದಿಲ್ಲವೆಂದು ಹೇಳಿದರು.
ನಗರಸಭೆಯ ಸಿಬ್ಬಂದಿಗಳಿಂದ ಈ ಕಾರ್ಯ ಸಾಧ್ಯವಾಗಲಾರದೆ ಎನ್ನುವ ಸದಸ್ಯರ ಪ್ರಶ್ನೆಯ ಸಂದರ್ಭ ಅಧ್ಯಕ್ಷರು ಉತ್ತರಿಸಿ ನಗರಸಭೆಯಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗದೆ ಸಮಸ್ಯೆಯಾಗಿದೆ. ಇರುವ ಕೆಲವೇ ಸಿಬ್ಬಂದಿಗಳು ಎಲ್ಲಾ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾದ ಒತ್ತಡವಿದೆ ಎಂದರು.
ನಗರಸಭಾ ಕಾರ್ಯದರ್ಶಿ ತಾಹಿರ್ ಮಾತನಾಡಿ ಇರುವ ಸಿಬ್ಬಂದಿಗಳು ಹೆಚ್ಚಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುವುದರಿಂದ ಒತ್ತಡ ನಿರ್ಮಾಣವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಎಸ್‍ಡಿಪಿಐ ಸದಸ್ಯ ಅಮಿನ್ ಮೊಹಿಸಿನ್ ಮಾತನಾಡಿ ಈ ಬಗ್ಗೆ ಶಾಸಕರು, ಸರ್ಕಾರಕ್ಕೆ ಮಾಹಿತಿ ನೀಡಿ, ಖಾಲಿ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈಗಾಗಲೆ ಶಾಸಕರಿಗೆ ಹಾಗೂ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಮಾತನಾಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿರೋಧ ಪಕ್ಷಗಳ ಜವಾಬ್ದಾರಿಯೂ ಇದೆ. ಶಾಸಕರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟು, ಸರ್ಕಾರದ ಮೂಲಕ ಖಾಲಿ ಹುದ್ದೆ ಭರ್ತಿಗೆ ಮುಂದಾಗುವಂತೆ ಹೇಳಿದರು.
ಈ ಹೇಳಿಕೆ ಕಾವೇರಿದ ಚರ್ಚೆಗೆ ಅವಕಾಶ ಕಲ್ಪಿಸಿತು. ಎಸ್‍ಡಿಪಿಐ ಸದಸ್ಯ ಮನ್ಸೂರ್ ಮಾತನಾಡಿ ಈ ಹಿಂದೆ ನಿಮ್ಮದೇ ಶಾಸಕರು, ಸರ್ಕಾರ ಇದ್ದಾಗ ಈ ಕೆಲಸ ಮಾಡಲಿಲ್ಲವಲ್ಲ ಎಂದು ತಿರುಗೇಟು ನೀಡಿದರು.
ನಗರಸಭೆಯಲ್ಲಿ ಆರೋಗ್ಯ ಪರಿವೀಕ್ಷಕರು, ಸರ್ವೆಯರ್‍ಗಳು ಹೀಗೆ ಪ್ರಮುಖ ಹುದ್ದೆಗಳಲ್ಲಿ ಇರುವವರು ವರ್ಗಾವಣೆಯಾಗಿ ಹೋಗುತ್ತಾರೆ, ಇಲ್ಲವೆ ಆರೋಗ್ಯ ಸಮಸ್ಯೆಯಿಂದ ರಜೆಯಲ್ಲಿರುತ್ತಾರೆ. ಅಗತ್ಯ ಕೆಲಸ ಕಾರ್ಯಗಳು ಸಿಬ್ಬಂದಿಗಳ ಕೊರತೆಯಿಂದ ನಡೆಯುತ್ತಿಲ್ಲ ಎಂದಾದರೆ ನಗರಸಭೆಗೆ ಒಂದು ‘ತಾಯಿತ ಕಟ್ಟಬೇಕು’ ಎಂದು ಹೇಳಿದರು.
ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಲು, ಸರ್ವ ಪಕ್ಷಗಳ ಸದಸ್ಯರ ನಿಯೋಗ ತೆರಳುವ ಸಲಹೆ ನೀಡಿದರು. ಇದಕ್ಕೆ ಸಭೆ ಅನುಮೋದನೆ ನೀಡಿತು.
::: ಬೀದಿ ನಾಯಿಗಳ ಕಾಟ :::
ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿರುವ ಬಗ್ಗೆ ಸದಸ್ಯ ಅಮಿನ್ ಮೊಹಿಸಿನ್ ಪ್ರಸ್ತಾಪಿಸಿದರು.
ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿದರು ಮತ್ತೆ ಅವುಗಳ ಸಂಖ್ಯೆ ಹೆಚ್ಚಾಗಿದೆ ಎಂದರು. ನಾಯಿಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಗಮನ ಸೆಳೆದರು.
ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಮಾತನಾಡಿ ನಗರದ ಮಾರುಕಟ್ಟೆ ಆವರಣದಲ್ಲಿ ಟೆಂಡರ್ ನಿಂದ ಪಡೆದ ಮೀನು, ಕೋಳಿ, ಕುರಿ ಮಾಂಸದ ಮಳಿಗೆಗಳಿವೆ. ಆದರೆ ಬೀದಿ ಬೀದಿಗಳಲ್ಲಿ ಮೀನು, ಕೋಳಿ ಮಳಿಗೆಗಳಿದ್ದು, ಇವುಗಳಿಂದಲೇ ನಾಯಿಗಳ ಉಪಟಳ ಹೆಚ್ಚಾಗಿದೆ. ಇಂತಹ ಮಳಿಗೆ ಮುಚ್ಚಿಸಲು ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರನ್ನು ಒತ್ತಾಯಿಸಿದರು.
ಇದಕ್ಕೆ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.21 NEWS DESK : ಆದಿ ಶಂಕರಾಚಾರ್ಯರು 8 ನೇ ಶತಮಾನದಲ್ಲಿ ಜನಿಸಿ ರಾಷ್ಟ್ರದಲ್ಲಿ ಅದ್ವೈತ ವೇದಾಂತ ಸಿದ್ಧಾಂತದ…

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.