Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಸೆಪ್ಟೆಂಬರ್ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.5 : ಮಕ್ಕಳು ಶಿಸ್ತುಬದ್ದ ಜೀವನ ನಡೆಸಲು ಶಿಕ್ಷಕರೇ ಪ್ರೇರಣೆಯಾಗಲಿದ್ದಾರೆ. ಶಿಕ್ಷಕರನ್ನು ಗುರುತಿಸುವುದು ಸಮಾಜದ ಜವಾಬ್ದಾರಿ ಎಂದು ಮುಖ್ಯಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣಾ ಇಲಾಖೆ, ವಿರಾಜಪೇಟೆ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ, ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ, ಸಂತ ಅನ್ನಮ್ಮ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
ವಿದ್ಯಾರ್ಥಿಗಳ ಓದಿನ ಜೊತೆಗೆ ಭವಿಷ್ಯ ರೂಪಿಸಿಕೊಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡುವ, ಸಮಾಜ ತಿದ್ದುವ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕಾರಣವಾಗಲಿದ್ದಾರೆ. ಶಿಕ್ಷಕರು ತಮ್ಮ ಪಾಲಿನ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಪೋಷಕರು ಶಿಕ್ಷಕರನ್ನೆ ದೇವರು ಎಂದು ಭಾವಿಸಿರುತ್ತಾರೆ ಎಂದು ಕಿವಿಮಾತು ಹೇಳಿದರು.
ಶಿಕ್ಷಕರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು ದೇಶ ಕಂಡಂತಹ ಅಪ್ರತಿಮ ವ್ಯಕ್ತಿ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಶಿಸ್ತುಬದ್ದ ಜೀವನವನ್ನು ಎಲ್ಲರೂ ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಉನ್ನತಿಗೋಸ್ಕರ ಶ್ರಮಿಸುವಂತಾಗಬೇಕು. ಬದಲಾದ ಕಾಲಘಟ್ಟದಲ್ಲಿ ಶಿಕ್ಷಕರು ಹೊಂದಿಕೊಂಡು ಕೆಲಸ ಮಾಡಬೇಕಿದೆ. ಇಂದು ತಂತ್ರಜ್ಞಾನ ಬಹಳ ಮುಂದುವರೆದಿದೆ. ಪುಸ್ತಕಗಳನ್ನು ಹೊರತುಪಡಿಸಿ ಜೀವನದಲ್ಲಿ ಕಲಿಯುವುದು ಕಲಿಸುವುದು ಬಹಳಷ್ಟಿದೆ ಎಂದರು.
ಮೈಸೂರಿನ ಭಾರತೀಯ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಡಾ.ನೀಲಗಿರಿ ತಳವಾರ್ ಅವರು ಪ್ರಧಾನ ಭಾಷಣಕಾರರಾಗಿ ಆಗಮಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಶಿಕ್ಷಕ ವೃತ್ತಿಯಂತಹ ಶ್ರೇಷ್ಠ ವೃತ್ತಿ ಮತ್ತೊಂದಿಲ್ಲ. ಶಿಕ್ಷಕ ವೃತ್ತಿಯಲ್ಲಿ ತ್ಯಾಗ ಮನೋಭಾವನೆ ಬೇಕು, ಉತ್ತಮ ಸಂಸ್ಕಾರಯುತ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ ದೇಶದ ಅಭ್ಯುದಯಕ್ಕೆ ಅಡಿಪಾಯ ಹಾಕುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯೆ, ಬುದ್ಧಿ ಸೇರಿದಂತೆ ಭಾವನಾತ್ಮಕ ಸಂಬಂಧಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಬೇಕಾಗಿದೆ ಎಂದರು.
ಇದೇ ಸಂದರ್ಭ ಸೇವೆಯಿಂದ ನಿವೃತ್ತಿಗೊಂಡ ತಾಲೂಕಿನ ವಿವಿಧ ಶಾಲೆಗಳ ಮುಖ್ಯ ಶಿಕ್ಷಕಕರು, ವಿಷಯ ಬೋಧನಾ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಶಿಕ್ಷಕರಿಗೆ ಸಂತಾಪ ಸೂಚಿಸಲಾಯಿತು.
ವಿವಿಧ ಕಾರ್ಯಕ್ರಮ ಹಾಗೂ ಸ್ಫರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ವೇದಿಕೆಯಲ್ಲಿದ್ದ ಗಣ್ಯರು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ವೇದಿಕೆಯಲ್ಲಿ ವಿರಾಜಪೇಟೆ ತಾಲೂಕು ತಹಸೀಲ್ದಾರ್ ಹೆಚ್.ಎನ್. ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಸಂತ ಅನ್ನಮ್ಮ ಕಾಲೇಜು ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್, ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ, ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ.ಉತ್ತಪ್ಪ ಸೇರಿದಂತೆ ಇತರರು ಇದ್ದರು.
ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಂದ ಆಗಮಿಸಿದ ಶಿಕ್ಷಕ ವೃಂದದವರು, ಎಲ್ಲಾ ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.