ಕಡಂಗ ಸೆ.6 : ಎಸ್ವೈಎಸ್ ಮತ್ತು ಎಸ್ಕೆಎಸ್ಎಸ್ಎಫ್ ಶಾಖಾ ವತಿಯಿಂದ ಹತ್ತನೇ ವಾರ್ಷಿಕ ಮಜ್ಲಿಸುನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮ ನಡೆಯಿತು.
ಕಡಂಗ ಶಾದಿ ಮಹಲ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ನಾಯಿಬ್ ಕಾಜಿ ಅಬ್ದುಲ್ಲಾ ಮುಸ್ಲಿಯರ್ ಎಡಪಾಲ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾತ್ ಅಧ್ಯಕ್ಷ ಅಬ್ದುಲ್ಲ ನಿರ್ವಹಿಸಿದರು.
ಕೇರಳದ ಪ್ರಖ್ಯಾತ ಝುಬಿರ್ ಮಾಸ್ಟರ್ ಮತ್ತು ಸಂಗಡಿಗರು ಕಥಾಪ್ರಸಂಗವನ್ನು ವಿವರಿಸಿದರು. ಖತೀಬ್ ಉಸ್ತಾದರಾದ ಲತೀಫ್, ಲತೀಫಿ ಪ್ರಾರ್ಥನೆ ನೆರವೇರಿಸಿದರು.
ಕಾರ್ಯಕ್ರಮ ದಲ್ಲಿ ಕೊಡಗು ಜಿಲ್ಲಾ ಅಮಿಲಾ ಅಧ್ಯಕ್ಷ ಹ್ಯಾರಿಸ್ ಅವರನ್ನು ಸನ್ಮಾನಿಸಲಾಯಿತು.
ಎಸ್ ಕೆ ಎಸ್ ಎಸ್ ಎಫ್ ಸಮಿತಿ ಸದಸ್ಯರಾದ ಇಸಾಕ್, ಇಕ್ಬಾಲ್, ಸಮದ್, ಅಬೂಬಕರ್, ಹನೀಫ್ ಫೈಜಿ, ಯುಸಫ್ ಮುಸ್ಲಿಯಾರ್, ಹನೀಫ್ ಉಸ್ತಾದ್, ಮಾಹಿನ್ ದಾರಿಮಿ, ಅಬ್ದುಲ್ ರೆಹಮಾನ್, ಇಬ್ರಾಹಿಂ, ಜುನೈದ್, ಮಮ್ಮು ,ಉಸ್ಮಾನ್ ಹಾಜರಿದ್ದರು. ಮದರಸ ಮುಖ್ಯೋಪಾಧ್ಯಾಯರಾದ ಶುಹೈಬ್ ಫೈಜಿ ಸ್ವಾಗತಿಸಿದರು.
ವರದಿ : ನೌಫಲ್ ಕಡಂಗ









