Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಪೋಷಣ್ ಮಾಸಾಚರಣೆ : ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ : ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಪೋಷಣ್ ಮಾಸಾಚರಣೆ : ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ : ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ*

September 9, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.9 :  ಮಕ್ಕಳ ಪೋಷಣೆಯಲ್ಲಿ ತಾಯಂದಿರ ಜವಾಬ್ದಾರಿ ಹೆಚ್ಚಾಗಿದ್ದು, ಭವ್ಯ ಭಾರತದ ಭವಿಷ್ಯ ಹಾಗೂ ಉತ್ತಮ ಸಮಾಜದ ನಿರ್ಮಾಣ ಜವಾಬ್ದಾರಿ ಪೋಷಕರ ಕೈಯಲ್ಲಿದೆ. ಮಕ್ಕಳಿಗೆ ಆಸ್ತಿ  ಮಾಡುವ ಬದಲು ಮಕ್ಕಳನ್ನೇ ಈ ದೇಶದ ಆಸ್ತಿಯನ್ನಾಗಿ ಮಾಡುವಂತಾಗಬೇಕು ಎಂದು ಕೊಡಗು ಪತ್ರಕರ್ತ ಸಂಘದ ಸಂಘಟನಾ ಕಾರ್ಯದರ್ಶಿ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ  ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ ನೀಡಿದರು.

ಮಡಿಕೇರಿಯ ಹೊಸ ಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ ಮಾಸಾಚರಣೆಯ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ಉತ್ತಮ ನಡೆ ನುಡಿ ಸಂಸ್ಕಾರವನ್ನು ಕಲಿಸಬೇಕಿದೆ. ಇದರಲ್ಲಿ ಪೋಷಕರ ಜವಾಬ್ದಾರಿ ಅಧಿಕ, ಅದರಲ್ಲೂ ತಾಯಂದಿರು ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ನಿಗಾ ಇಡಬೇಕೆಂದು ಕರೆ ನೀಡಿದರು.

ಸಣ್ಣ ವಯಸ್ಸಿನಿಂದಲೇ ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು, ಪೋಷಕರು  ತಾವು ಕಲಿತಿರುವ ದುಶ್ಚಟಗಳನ್ನು ಮಕ್ಕಳ ಮುಂದೆ ಪ್ರದರ್ಶನ ಮಾಡಬೇಡಿ ಇದನ್ನು ಅವರು ಹಿಂಬಾಲಿಸುತ್ತಾರೆ ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ಪೌಷ್ಟಿಕ ಆಹಾರ ದೊರೆಯುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ತಾವುಗಳು ಸಾಧ್ಯವಾದಷ್ಟು ಔಷಧಿ ರಹಿತ ಆಹಾರವನ್ನು ಸೇವಿಸಬೇಕಿದೆ. ಹಿಂದಿನ ಕಾಲದವರ ಆಹಾರ ಕ್ರಮದಿಂದ ಅವರು ಸುದೀರ್ಘ ಅವಧಿ ಆರೋಗ್ಯವಂತರಾಗಿ ಬದುಕುತ್ತಿದ್ದರೂ, ಆದರೆ  ಇಂದಿನ ಆಹಾರದಿಂದ  ಆರೋಗ್ಯದಲ್ಲಿ ಏರುಪೇರಾಗುತ್ತಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಡಿಕೇರಿ ತಾಲೂಕಿನ ಮೇಲ್ವಿಚಾರಕಿ ಸಿ.ಪಿ ಸವಿತಾ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿವಿಧ ರೋಗರುಜಿನಗಳು ಬರುತ್ತಿದ್ದು, ನಮ್ಮ ಆಹಾರ ಕ್ರಮದಲ್ಲಿ ಒಂದಷ್ಟು ಬದಲಾವಣೆಯನ್ನು ಮಾಡಿಕೊಳ್ಳದೆ ಇದ್ದರೆ ನಾವು ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತೇವೆ ಎಂದ ಅವರು ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶದ ಆಹಾರಗಳನ್ನು ನೀಡುವುದರ ಜೊತೆಗೆ ಕೈತೋಟದಲ್ಲಿ ಬೆಳೆದ ತರಕಾರಿಗಳನ್ನು, ಮೊಳಕೆ ಕಾಳುಗಳನ್ನು ಮಕ್ಕಳಿಗೆ ಮಕ್ಕಳಿಗೆ ಆಹಾರವಾಗಿ ನೀಡಬೇಕಿದೆ ಎಂದರು.

ಮಕ್ಕಳಿಗೆ ಆದಷ್ಟು ಹೊರಗಿನ ತಿಂಡಿ ತಿನಿಸುಗಳನ್ನು ಕಡಿಮೆ ಮಾಡಿ ಮನೆಯಲ್ಲಿಯೇ ಉತ್ತಮ ಪೋಷಕಾಂಶದ ಶುಚಿರುಚಿಯಾದ ಆಹಾರಗಳನ್ನು ತಾಯಂದಿರೇ ಮಾಡಿಕೊಡುವುದರಿಂದ ಆರೋಗ್ಯವಂತ ಮಗುವಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದ ಅವರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆನೀಡಿದರು.

ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಕ ಶ್ರೀನಾಥ್ ಮಾತನಾಡಿ,  ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಾ ಪೋಷಕರು ತಮ್ಮ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ಕರೆನೀಡಿದರು.

ಕಾಲ ಕಾಲಕ್ಕೆ ಸರಿಯಾಗಿ ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳುವುದರ ಜೊತೆಗೆ ತಮ್ಮ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.

ನಿವೃತ್ತ ಎಲ್.ಹೆಚ್.ಓ ಲೀಲಾವತಿ ಸೋಮಯ್ಯ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಲು ತಿಳಿಸಿ ಗರ್ಭಿಣಿಯರು ಕಾಲಕಾಲಕ್ಕೆ ಸರಿಯಾಗಿ ಇಲಾಖೆ ತಿಳಿಸಿರುವಂತಹ ಔಷಧಿ ಹಾಗೂ ಚುಚ್ಚುಮದ್ದು ಪಡೆಯುವುದರ ಜೊತೆಗೆ ಉತ್ತಮ ಆಹಾರ ಸೇವನೆಯಿಂದ ಆರೋಗ್ಯವಂತ ಮಗುವಿನ ಜನನವಾಗುತ್ತದೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ಹಾಗೂ ಸಾಲುಗಟ್ಟಿ ನಿಲ್ಲುವ ಬದಲು ಸ್ಥಳೀಯ ಆರೋಗ್ಯ ಕ್ರೇಂದ್ರಗಳಲ್ಲಿ ಸಿಗುವ ಸವಲತ್ತುಗಳನ್ನು ಮೊದಲು ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಕೆ.ಎಸ್.ಕೌಶಿಕ್ ಮುತ್ತಮ್ಮ, ಆಶಾ ಕಾರ್ಯಕರ್ತೆ ಜೂರಾ ಸೇರಿದಂತೆ ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೋಷಕರು ಮನೆಯಲ್ಲಿಯೇ ತಯಾರಿಸಿ ತರಲಾಗಿದ್ದ ಖಾದ್ಯಗಳನ್ನು ಮಕ್ಕಳಿಗೆ ತಿಳಿಸುವುದರ ಜೊತೆಗೆ ಪರಸ್ಪರ ಹಂಚಿಕೊಂಡರು.

Share. Facebook Twitter Pinterest LinkedIn Tumblr Email WhatsApp
Previous Article*ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ : ಜಿಲ್ಲೆಯಾದ್ಯಂತ ವಾಹನ ಸಂದೇಶ ಜಾಥಾ*
Next Article *ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೀಕರ ಭೂಕಂಪನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.