ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಒಕ್ಕಲಿಗ ಸಮುದಾಯಭವನದಲ್ಲಿ ಭಾನುವಾರ ನಡೆದ, ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ ಸಿ.ಕೆ.ಕಾಳಪ್ಪ ಅವರ ಪುತ್ಥಳ್ಳಿ ಅನಾವರಣ ಕಾರ್ಯಕ್ರಮದಲ್ಲಿ, ಸೋಮವಾರಪೇಟೆ ಒಕ್ಕಲಿಗರ ಸಂಘದ ಅಭಿವೃದ್ಧಿ ಕಾಮಗಾರಿಗಳಿಗೆ ಅತೀ ಹೆಚ್ಚು ಅನುದಾನ ಕಲ್ಪಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ಸಿಂಹ ಅವರನ್ನು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗು ಮಡಿಕೇರಿ ಶಾಸಕ ಡಾ.ಮಂತರ್ಗೌಡ ಅವರುಗಳು ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷ ಸಿ.ಕೆ.ರಾಘವ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಇದ್ದರು.










