ಮಡಿಕೇರಿ ಸೆ.12 : “ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಸೆಪ್ಟೆಂಬರ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11ಕೆವಿ ಆಲೂರು ಸಿದ್ದಾಪುರ, 66/11ಕೆವಿ ಸುಂಟಿಕೊಪ್ಪ, 66/11ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ, ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಾಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









