Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗರಗಂದೂರು : ಸದ್ಗುಣಗಳನ್ನು ಭಿತ್ತಿ ಬೆಳೆವ ಭೂಮಿಕೆಯೇ ವಚನ ಸಾಹಿತ್ಯ : ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗರಗಂದೂರು : ಸದ್ಗುಣಗಳನ್ನು ಭಿತ್ತಿ ಬೆಳೆವ ಭೂಮಿಕೆಯೇ ವಚನ ಸಾಹಿತ್ಯ : ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್*

ಸೆಪ್ಟೆಂಬರ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಸೆ.14 : ಹನ್ನೆರಡನೇ ಶತಮಾನದಲ್ಲಿ ಜನರು ಅನುಭವಿಸುತ್ತಿದ್ದ ಸಾಮಾಜಿಕ ಅಸಮಾನತೆಗಳನ್ನು ನೀಗಿಸಲು ಎಲ್ಲಾ ಜಾತಿ ವರ್ಗಗಳ ವಚನಕಾರರು ವಚನಗಳನ್ನು ರಚಿಸಿ ಜನರಲ್ಲಿ ಸಾಮಾಜಿಕ ಪ್ರಜ್ಞೆಯ ಜೊತೆಗೆ ಅವರ ಜೀವನ ಸುಧಾರಣೆಗೆ ರೂಪಿಸಿದ ಜನರಾಡುವ ಸರಳ ಭಾಷೆಯ ವಚನಗಳು ಸದ್ಗುಣಗಳನ್ನು ಭಿತ್ತಿ ಬೆಳೆವ ಭೂಮಿಕೆ ಎಂದು ಕುಶಾಲನಗರ ಸರ್ಕಲ್ ಇನ್ಸ್ ಪೆಕ್ಟರ್ ರಾಜೇಶ್ ಕೋಟ್ಯಾನ್ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,
ನಾಡಿನ ಸರ್ವ ಶ್ರೇಷ್ಠ ಸಾಹಿತ್ಯ ಹಾಗೂ ಸಂಸ್ಕ್ರತಿ ಉಳಿಸಬೇಕಾದುದು ಹಾಗೂ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಾದುದು ಇಂದಿನ ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಚನ ಸಾಹಿತ್ಯ,ದಾಸ ಸಾಹಿತ್ಯ, ಕೀರ್ತನೆ ಮೊದಲಾದ ಭಾರತೀಯ ಸಂಸ್ಕ್ರತಿಯ ಪರ್ವಗಳನ್ನು ಅರಿತು ಸಮಾಜಕ್ಕೆ ಉಣಬಡಿಸುವ ಮೂಲಕ ಸುಗಮ ಸಮಾಜ ಕಟ್ಟಬೇಕಿದೆ. ನಾಲ್ಕು ದಿನಗಳ ಮಾನವ ಬದುಕನ್ನು ಸುಂದರವಾಗಿ ಕಳೆಯಬೇಕಿದ್ದಲ್ಲಿ ಪರಸ್ಪರ ವೈರತ್ವ, ಅಸೂಯೆ, ಕೋಪ ತಾಪಗಳನ್ನು ಬಿಟ್ಟು ಎಲ್ಲರೊಂದಿಗೂ ಎಲ್ಲರ ಜೀವನ ಸ್ನೇಹ ಹಾಗೂ ವಿಶ್ವಾಸಗಳಿಂದ ಕೂಡಿರಬೇಕು ಎಂದು ರಾಜೇಶ್ ಕೋಟ್ಯಾನ್ ಇಂಗಿತ ವ್ಯಕ್ತಪಡಿಸಿದರು‌.
ವಚನ ಸಾಹಿತ್ಯದ ಕುರಿತು ಉಪನ್ಯಾಸ ನೀಡಿದ ಹೆಬ್ವಾಲೆ ಪ್ರೌಢಶಾಲೆಯ ಉಪನ್ಯಾಸಕ ಮೆ.ನಾ.ವೆಂಕಟನಾಯಕ್, 800 ವರ್ಷಗಳ ಹಿಂದೆ ವಚನಕಾರರು ತಮ್ಮ ಆಧ್ಯಾತ್ಮದ ನೆಲೆಯೊಳಗೆ ಬದುಕಿನ ಸಾರ ಹಾಗೂ ಸತ್ವಗಳನ್ನು ಸಾರಿ ಜಟಿಲವಾದ ಮನುಷ್ಯನ ಬದುಕನ್ನು ಸರಳಗೊಳಿಸಿ ನೈಜ ಬದುಕಿನ ಗಂಧ ಲೇಪಿಸಿ ತಮ್ಮ ಅನುಭವದ ನುಡಿಗಳ ತಿಂಗಳ ಬೆಳಕನ್ನು ಜನರ ಅಂಗಳಕ್ಕೆ ತಂದ ಶರಣ ಶ್ರೇಷ್ಠರು.
ಹನ್ನೆರಡನೇ ಶತಮಾನದ ಬಸವಯುಗದ ವಚನ ಸಾಹಿತ್ಯ ಅಂದಿನ ಜನರ ಆಚಾರ – ವಿಚಾರ, ಭಾಷೆ – ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ತನ್ನ ಚಾಪನ್ನು ಮೂಡಿಸಿದ ಮೇರು ಸಾಹಿತ್ಯವಾಗಿದೆ. ಬಸವಣ್ಣ, ದಾಸಿಮಯ್ಯ, ಚನ್ನಬಸವಣ್ಣ, ಪ್ರಭುದೇವರು, ಅಕ್ಕಮಹಾದೇವಿ, ಸಿದ್ಧರಾಮ, ಮಡಿವಾಳ ಮಾಚಿದೇವ ಮೊದಲಾದವರು ಸಮಾಜ ಸುಧಾರಣೆಯಲ್ಲಿ ಮುಖ್ಯ ಪಾತ್ರವಹಿಸಿದ್ದವರು.
ವೇದವೆಂಬುದು ಓದಿನ ಮಾತು, ರಾಷ್ಟ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ಎಂಬ ಉದ್ವೇಷಣೆಯ ಮೂಲಕ ವೇದ, ಪುರಾಣ ಶಾಸ್ತ್ರಗಳನ್ನು ತಿರಸ್ಕರಿಸಿ ಅನುಭವಕ್ಕೆ ಹೆಚ್ವಿನ ಮಹತ್ವ ಕೊಟ್ಟರು. ಕಾಯಕವೇ ಕೈಲಾಸ ಎಂಬ ಸತ್ಯದ ಮೂಲಕ ವಚನಕಾರರು ದುಡಿಯುವ ಎಲ್ಲಾ ವರ್ಗದವರಿಗೆ, ಕುಶಲ ಕಾರ್ಮಿಕರಿಗೆ ವಿಶೇಷವಾದ ಸ್ಥಾನಮಾನ ಕಲ್ಪಿಸಿದ್ದರು ಎಂದು ವಚನಗಳ ಮೂಲಕ ಅದರ ಸಾರ ಹಾಗೂ ಸತ್ವಗಳನ್ನು ವೆಂಕಟನಾಯಕ್ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಂಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಎನ್.ಮಹೇಂದ್ರ ಮಾತನಾಡಿ, ವಚನಕಾರರು ದೇಹವನ್ನೇ ದೇವಾಲಯ ಮಾಡಿಕೊಂಡು ಢಾಂಭಿಕ ಭಕ್ತಿಯನ್ನು ವಿರೋಧಿಸಿದರು.
ಹೊಸಸಮಾಜ ರಚನೆಯ ಮುಕ್ತ ಚರ್ಚೆಗೆ ಅನುಭವ ಮಂಟಪವನ್ನು ಭೂಮಿಕೆ ಮಾಡಿಕೊಂಡ ವಚನಕಾರರು ಪುರೋಹಿತ ಶಾಹಿ, ರಾಜಪ್ರಭುತ್ವ ಮೊದಲಾದ ಪ್ರತಿಗಾಮಿಗಳ ವಿರುದ್ಧ ಚಳುವಳಿ ನಡೆಸಿ ನಾಡು ಕಟ್ಟಿದ ಮಹನೀಯರ ಆದರ್ಶ ಇಂದು ವಿದ್ಯಾರ್ಥಿಗಳಿಗೆ ಅತ್ಯಗತ್ಯ ಎಂದರು.
ಮುಖ್ಯ ಅತಿಥಿಯಾಗಿ ಮಾದಾಪುರ ಚೆನ್ನಮ್ಮ ಕಾಲೇಜಿನ ನಿವೃತ್ತ ಉಪನ್ಯಾಸಕ ಜಿ.ಇ.ಸೋಮಶೇಖರ್, ಸುಂಟಿಕೊಪ್ಪದ ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ಮಾತನಾಡಿದರು.
ವಚನ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು.
ಉಪನ್ಯಾಸಕರಾದ ದೇವರಾಜನಾಯಕ್, ಗೀತಾಂಜಲಿ, ಮಹದೇವಸ್ವಾಮಿ, ಕೆ.ಪಿ.ಪಾಪಣ್ಣ ಇದ್ದರು.
ಇದೇ ಸಂದರ್ಭ ಸುಚಿತಾ, ಧನ್ಯಶ್ರೀ, ಹಂಸವಿಗೌಡ, ಶಿವರಾಜ್, ಯಶಸ್ವಿನಿ, ತ್ರವೇಣಿ, ಮೇಘನಾ ಹಾಗೂ ಹೆಚ್.ಟಿ.ಲಕ್ಷ್ಮಿ ಮೊದಲಾದ ವಿದ್ಯಾರ್ಥಿಗಳಿಂದ ವಚನ ಸಾಹಿತ್ಯದ ಕುರಿತು ಭಾಷಣ ಹಾಗೂ ಗಾಯನ ಏರ್ಪಟ್ಟಿತು.
ಕಾಲೇಜಿನ ಕನ್ನಡ ಉಪನ್ಯಾಸಕ ಪಾಪಣ್ಣ ನಿರೂಪಿಸಿದರು. ವಿದ್ಯಾರ್ಥಿನಿ ಜೆ.ಎಸ್. ಬಿಂದು ಸ್ವಾಗತಿಸಿದರು. ಮೇಘನಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾಚ್೯ 05 – ನಗರದ ಶ್ರೀ ಕೋದಂಡ ರಾಮದೇವಾಲಯ ಸಮಿತಿ ವತಿಯಿಂದ ಮಾಚ್೯ 28 ರಂದು ಶನಿವಾರ ಆಯೋಜಿತ…

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.