ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಿಂದ (ತಾವುನಾಡ್) ಪಾದಯಾತ್ರೆ ಆರಂಭವಾಯಿತು.
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಪದಾಧಿಕಾರಿಗಳು ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಬೇಡಿಕೆ ಪರ ಪ್ರಾರ್ಥನೆ ಸಲ್ಲಿಸಿದರು.
ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಮೊದಲ ಹಂತದಲ್ಲಿ ಇಂದು ತಾವುನಾಡ್, ದೇಶ ಮಂದ್ (ತಲಕಾವೇರಿ- ಭಾಗಮಂಡಲ-ಪುಲಿಕೋಟ್) 10.00 ಗಂಟೆಗೆ ಬಲ್ಲತ್ನಾಡ್ (ಬಲ್ಲಮಾವಟಿ) 2.30 ಗಂಟೆಗೆ ಬೆಂಗ್ನಾಡ್ (ಚೇರಂಬಾಣೆ) (ಮಡಿಕೇರಿ ತಾಲೂಕು) ಮೂಲಕ ಹಾದುಹೋಗುತ್ತದೆ.









