ಮಡಿಕೇರಿ ಸೆ.19 : ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀರ್ಥೋದ್ಭವ ಪ್ರಸಕ್ತ ಸಾಲಿನ ಅ.18 ರ ಬೆಳಗ್ಗಿನ ಜಾವ 1.27 ಗಂಟೆಗೆ (ಅ.17ರ ಮಧ್ಯರಾತ್ರಿ ಕಳೆದು) ಸಲ್ಲುವ ಕರ್ಕಾಟಕ ಲಗ್ನದಲ್ಲಿ ಘಟಿಸಲಿದೆ.
ಕಾವೇರಿಯ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಪೂರ್ವಭಾವಿಯಾಗಿ ಸೆ.27 ರಂದು ಬೆಳಿಗ್ಗೆ 9.29 ಗಂಟೆಗೆ ತುಲಾ ಲಗ್ನದಲ್ಲಿ ಭಾಗಮಂಡಲದಲ್ಲಿ
“ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು” ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಲಿದೆ.
ಅ.5 ರಂದು ಬೆಳಿಗ್ಗೆ 8.31 ನಿಮಿಷಕ್ಕೆ ತುಲಾ ಲಗ್ನದಲ್ಲಿ “ಆಜ್ಞಾ ಮೂಹೂರ್ತ”, ಅ.15 ರಂದು ಬೆಳಿಗ್ಗೆ 11.45 ನಿಮಿಷಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.5ಕ್ಕೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು ಕಾರ್ಯಕ್ರಮಗಳು ನಡೆಯಲಿದೆ.










