Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.26 ರಿಂದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ : ಜಾನುವಾರು/ರಾಸುಗಳಿಗೆ ಕಡ್ಡಾಯವಾಗಿ ಲಸಿಕೆ ನೀಡಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.26 ರಿಂದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ : ಜಾನುವಾರು/ರಾಸುಗಳಿಗೆ ಕಡ್ಡಾಯವಾಗಿ ಲಸಿಕೆ ನೀಡಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಸೆಪ್ಟೆಂಬರ್ 21, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.21 : ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಇದೇ ಸೆ.26 ರಿಂದ ಅಕ್ಟೋಬರ್, 25 ರವರೆಗೆ ನಾಲ್ಕನೇ ಸುತ್ತಿನಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ 2030 ರೊಳಗೆ ಜಾನುವಾರುಗಳ ಕಾಲುಬಾಯಿ ಜ್ವರವನ್ನು ನಿಯಂತ್ರಿಸುವಲ್ಲಿ ಹಲವು ಸುತ್ತಿನ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ  ಕೋರಿದರು.
ಕೃಷಿಗೆ ಪೂರಕವಾಗಿ ಜಾನುವಾರು ಸಾಕಾಣಿಕೆ ರೈತರ ಅವಿಭಾಜ್ಯ ಅಂಗವಾಗಿದೆ. ಆರ್ಥಿಕ ಚಟುವಟಿಕೆಗೆ ಪಶುಪಾಲನೆ ಸಹಕಾರಿಯಾಗಿದೆ. ಆ ದಿಸೆಯಲ್ಲಿ ಜಾನುವಾರು/ ರಾಸುಗಳಿಗೆ ಯಾವುದೇ ರೀತಿಯ ರೋಗ ಬರದಂತೆ ನಿಯಂತ್ರಿಸುವುದು ಅತ್ಯಗತ್ಯವಾಗಿದ್ದು, ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಜಾನುವಾರುಗಳು ಲಸಿಕಾ ಕಾರ್ಯಕ್ರಮದಿಂದ ಬಿಟ್ಟು ಹೋಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ  ಸ್ಪಷ್ಟ ನಿರ್ದೇಶನ ನೀಡಿದರು.
ಯಾವ ಯಾವ ದಿನದಂದು ಯಾವ ಯಾವ ಗ್ರಾಮದಲ್ಲಿ ಲಸಿಕೆ ನೀಡಲಾಗುತ್ತದೆ ಎಂ ಬಗ್ಗೆ ಮುಂಚಿತವಾಗಿ ಪ್ರಚುರಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಸಲಹೆ ಮಾಡಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ 76,920 ಜಾನುವಾರು ಸಂಖ್ಯೆ ಗುರಿಯಲ್ಲಿ 66,710 ಜಾನುವಾರುಗಳಿಗೆ ಲಸಿಕೆಯನ್ನು ನೀಡಿ ಶೇ.84 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಸಂಬಂಧಿಸಿದಂತೆ ಲಸಿಕೆ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2 ಎಂ.ಎಲ್.ಒಳಗೊಂಡ 75,325 ಸಿರೀಂಜ್‍ಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಪಶುಪಾಲನಾ ಇಲಾಖೆಯ ಮೂರು ಸಂಚಾರಿ ಪಶು ಚಿಕಿತ್ಸಾ ವಾಹನಗಳು ಹಾಗೂ 8 ಹಾಲು ಉತ್ಪಾದಕರ ಮಹಾ ಮಂಡಳದ ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ಪಶುಪಾಲನಾ ಇಲಾಖೆಯ ಆಯುಕ್ತಾಲಯದಿಂದ 77 ಸಾವಿರ ಡೋಸ್ ಲಸಿಕೆ ಸರಬರಾಜು ಆಗಿದೆ. ಒಂದು ವಾಕ್ ಇನ್ ಕೂಲರ್, 7 ಐಸ್ ಲೈನ್ ರೆಫ್ರಿಜರೇಟರ್, 5 ಐಎಲ್ ಆರ್‍ಎಫ್, 47 ಶೀತಲೀಕರಣಯಂತ್ರ ಹಾಗೂ 182 ವ್ಯಾಕ್ಸಿನ್ ಕ್ಯಾರಿಯರ್ ಗಳನ್ನು ಸುಸ್ಥಿತಿಯಲ್ಲಿ ಇಡಲಾಗಿದೆ ಎಂದು ಡಾ.ಲಿಂಗರಾಜು ದೊಡ್ಡಮನಿ  ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಲಸಿಕೆ ಅನುಷ್ಠಾನ ಸಂಬಂಧಿಸಿದಂತೆ 14 ತಾಂತ್ರಿಕ ಸಿಬ್ಬಂದಿ, 33 ಅರೆ ತಾಂತ್ರಿಕ ಸಿಬ್ಬಂದಿ, 09 ಇಲಾಖಾ ಡಿ ದರ್ಜೆ ಸಿಬ್ಬಂದಿ, 12 ಬಾಹ್ಯ ಮೂಲದ ಡಿ ದರ್ಜೆ ಸಿಬ್ಬಂದಿ, 4 ಹೆಚ್ಚುವರಿ ಸಿಬ್ಬಂದಿ ಒಟ್ಟು 72 ಲಸಿಕಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಪಾಲಿಕ್ಲೀನಿಕ್ ಉಪ ನಿರ್ದೇಶಕರಾದ ಡಾ.ತಿಮ್ಮಯ್ಯ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ(ಮಡಿಕೇರಿ), ಡಾ.ಶಾಂತೇಶ್(ಪೊನ್ನಂಪೇಟೆ), ಡಾ.ನವೀನ್ (ವಿರಾಜಪೇಟೆ), ಡಾ.ಬಾದಾಮಿ(ಸೋಮವಾರಪೇಟೆ), ಡಾ.ಶ್ರೀದೇವು (ಕುಶಾಲನಗರ), ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ.ಬಿ.ಎಲ್.ಪ್ರಸನ್ನ ಇತರರು ಹಲವು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ 9448647276, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಸೋಮವಾರಪೇಟೆ 9448655660, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ವಿರಾಜಪೇಟೆ 9141093996, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಕುಶಾಲನಗರ 8951404025, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಪೊನ್ನಂಪೇಟೆ 9449081343 ನ್ನು ಸಂಪರ್ಕಿಸಬಹುದು.
ಮತ್ತಷ್ಟು ಮಾಹಿತಿ: ಕೊಡಗು ಜಿಲ್ಲೆಯಲ್ಲಿ ಸೆ.26 ರಿಂದ ಅ.25 ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದನ, ಎಮ್ಮೆ, ಆಡು/ ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಅರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು.

ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ಧಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ವಿವರಿಸಿದರು.
ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿದೆ. 20 ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವಸಿದ್ದತೆಯನ್ನು ಮಾಡಿಕೊಳಲಾಗಿದ್ದು 67 ಲಸಿಕಾದಾರರನ್ನೊಳಗೊಂಡ ಒಟ್ಟು 11 ತಂಡಗಳನ್ನು ರಚಿಸಲಾಗಿದೆ. ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಲಿದ್ದಾರೆ.
ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದೆ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 4 ತಿಂಗಳ ಮೇಲ್ಪಟ್ಟ ಎಲ್ಲಾ ದನ/ಎಮ್ಮೆ ಲಸಿಕೆ ಹಾಕಿಸುವಂತೆ ಉಪ ನಿರ್ದೇಶಕರು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಟಿಬೆಟಿಯನ್ ನೂತನ ವರ್ಷದ ಆಚರಣೆ ಅಂಗವಾಗಿ ಸಮೀಪದ ಬೈಲುಕೊಪ್ಪೆ ನಿರಾಶ್ರಿತ ಶಿಬಿರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ವಿಶ್ವದ ಅತಿ…

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.