ಮಡಿಕೇರಿ ಸೆ.25 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಸೆ.24 ರಂದು ಸಂಜೆಯಿಂದಲೇ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು.
ಇಂದು ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ನಡೆಯಿತು. ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ.
ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.









