ಮಡಿಕೇರಿ ಜೂ.26 : ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ವಿರಾಜಪೇಟೆಯಲ್ಲಿ ಹುತಾತ್ಮರಾದ ಮಾಜಿ ಸೈನಿಕರಿಗೆ ಮತ್ತ ದೇಶ ಸೇವೆ ಸಂದರ್ಭ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿರಾಜಪೇಟೆಯ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ, ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ಮಾಜಿ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಲ್ ಮಂಡೆಟಿರ ಅವಿನ್ ಉತ್ತಯ್ಯ (ಸೇನಾ ಮೆಡಲ್), ಕರ್ನಲ್ ಮಾಚಿಮಂಡ ಡಿ.ಮುತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ತಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಹೆಚ್.ಎನ್.ರಾಮಚಂದ್ರ, ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ಪ.ಪಂ ಮುಖ್ಯಾಧಿಕಾರಿ ಚಂದ್ರಕುಮಾರ್, ಕೊಂಗಂಡ ಬೋಜಣ್ಣ ಹಾಗೂ ಸಂಘದ ಉಪಾಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಕಾರ್ಯದರ್ಶಿ ಪುಗ್ಗೇರ ಎಸ್.ನಂದ, ಖಜಾಂಚಿ ತೋರೆರ ಪೂವಯ್ಯ, ಕಾನೂನು ಸಲಹೆಗಾರ ಚೇಂದ್ರಿಮಾಡ ಕೆ.ನಂಜಪ್ಪ ಹಾಗೂ ನಿರ್ದೇಶಕರು ಹಾಜರಿದ್ದರು.








