Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತಾಪ್ ಸಿಂಹ ನಿಷ್ಕ್ರೀಯ ಸಂಸದ : ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರತಾಪ್ ಸಿಂಹ ನಿಷ್ಕ್ರೀಯ ಸಂಸದ : ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಟೀಕೆ*

ಸೆಪ್ಟೆಂಬರ್ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.26 : ಕೊಡಗಿನ ಮೂಲಭೂತ ಸಮಸ್ಯೆಗಳ ಕುರಿತು ತಮ್ಮ ಎರಡು ಅವಧಿಯಲ್ಲಿ ಕನಿಷ್ಠ ಕಾಳಜಿ ತೋರದ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರು, ಅತ್ಯಂತ ನಿಷ್ಕ್ರೀಯ ಸಂಸದರು ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭಗಳಲ್ಲಷ್ಟೆ ಪ್ರತ್ಯಕ್ಷರಾಗುವ ಪ್ರತಾಪ ಸಿಂಹ, ಭಾವನಾತ್ಮಕ ಮತ್ತು ಧರ್ಮಾಧಾರಿತ ವಿಚಾರಗಳೊಂದಿಗೆ ಮೋದಿ ಹೆಸರನ್ನು ಹೇಳಿ ಮತಯಾಚಿಸುತ್ತಾರೆಯೇ ಹೊರತು ಅಭಿವೃದ್ಧಿಪರ ಚಿಂತನೆ ಹೊಂದಿಲ್ಲ ಎಂದು ಆರೋಪಿಸಿದರು.
ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಅವರು ಸೋಲುವುದು ಖಚಿತವೆಂದು ಭವಿಷ್ಯ ನುಡಿದರು.
ಕಳೆದ ಒಂಭತ್ತೂವರೆ ವರ್ಷಗಳಲ್ಲಿ ಬೆಳೆಗಾರರ ಹಾಗೂ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ಸಂಸತ್‍ನಲ್ಲಿ ಪ್ರಬಲವಾಗಿ ಮಂಡಿಸಿ, ಕೇಂದ್ರದ ಗಮನ ಸೆಳೆಯುವಲ್ಲಿ ಪ್ರತಾಪ್ ಸಿಂಹ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಸಂಸದರಾಗಿ ಆಯ್ಕೆಯಾದ ಎರಡು ಬಾರಿಯೂ ಕೇಂದ್ರದಲ್ಲಿ ಅವರದ್ದೇ ಪಕ್ಷ ಅಧಿಕಾರದಲ್ಲಿದ್ದರೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ಅವರು ಸೋತಿದ್ದಾರೆ. ಇವರ ಈ ಎಲ್ಲಾ ವೈಫಲ್ಯಗಳ ಬಗ್ಗೆ ಜನರಿಗೆ ಅರಿವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗಿನ ಆರ್ಥಿಕತೆಯ ಬೆನ್ನೆಲುಬಾಗಿರುವ ಕಾಫಿ ಕೃಷಿಯ ಸಮಸ್ಯೆಗಳಿಗೆ ಸಂಸದರು ಸ್ಪಂದಿಸುವ ಅಗತ್ಯವಿತ್ತು. ಕಾಫಿ ಕೃಷಿ ಸಂಕಷ್ಟಕ್ಕೆ ಸಿಲುಕಿದಾಗ ಅದು ಕೇವಲ ಬೆಳೆಗಾರನ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ. ಬದಲಾಗಿ, ಅದನ್ನು ಅವಲಂಬಿಸಿದ ಕಾರ್ಮಿಕರು, ವರ್ತಕರು ಸೇರಿದಂತೆ ಎಲ್ಲರು ಸಂಕಷ್ಟಕ್ಕೆ ಸಿಲುಕುತ್ತಾರೆ. 2014 ರ ಲೋಕಸಭಾ ಚುನಾವಣೆ ಹಂತದಲ್ಲಿ ಪ್ರತಾಪ ಸಿಂಹ ಅವರು ತಮ್ಮ ಪ್ರಣಾಳಿಕೆಯಲ್ಲಿ ಕಾಫಿ ಬೆಳೆಗಾರರ ಸಾಲಮನ್ನಾ ಮಾಡುವುದಾಗಿ, ಕೇಂದ್ರ ವಾಣಿಜ್ಯ ಮಂತ್ರಾಲಯದೊಂದಿಗೆ ಚರ್ಚಿಸಿ, ಕಾಫಿ ಬೆಳೆಗಾರರ ಸಂಕಷ್ಟಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಅವುಗಳನ್ನು ಕಾರ್ಯಗತಗೊಳಿಸಿಲ್ಲ ಎಂದು ಸಂಕೇತ್ ಪೂವಯ್ಯ ಟೀಕಿಸಿದರು.
ಬೆಳೆಗಾರರು ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಲ್ಲಿ ಪ್ರತಾಪ್ ಸಿಂಹ ಸೋತಿದ್ದಾರೆ. ಕೇವಲ ನಾಲ್ಕೈದು ಲಕ್ಷ ಸಾಲಕ್ಕಾಗಿ ಬೆಳೆಗಾರರು ಆತ್ಮಹತ್ಯೆಗೆ ಶರಣಾಗುತ್ತಿರುವ ಸಂದರ್ಭ, ಕನಿಷ್ಟ ಒಂದು ಸಭೆ ಕರೆದು, ಬೆಳೆಗಾರರ ನಿಯೋಗವನ್ನು ಕೇಂದ್ರಕ್ಕೆ ಕೊಂಡೊಯ್ಯುವ ಕನಿಷ್ಠ ಪ್ರಯತ್ನ ಸಂಸದರಿಂದ ನಡೆದಿಲ್ಲ. ಮಾನವ-ಪ್ರಾಣಿ ಸಂಘರ್ಷ ವಿಕೋಪಕ್ಕೆ ತೆರಳುತ್ತಿದ್ದು, ಹಲವು ಜೀವಹಾನಿಗಳು ಸಂಭವಿಸಿದ್ದರು, ಸಂತ್ರಸ್ತರನ್ನು ಭೇಟಿಯಾಗುವ ಪ್ರಯತ್ನ ಸಂಸದರಿಂದ ನಡೆದಿಲ್ಲ. ಈ ಎಲ್ಲಾ ವೈಫಲ್ಯಗಳ ನಡುವೆ ಪ್ರತಾಪ ಸಿಂಹ ಅವರು ಗಾಯದ ಮೇಲೆ ಬರೆ ಎಳೆಯುವಂತೆ ಸುಳ್ಳುಗಳನ್ನಷ್ಟೆ ಹೇಳಿಕೊಂಡು ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಜಿಲ್ಲೆಗೆ ರೈಲ್ವೆ ಸಂಪರ್ಕ, ದಶಪಥ ರಸ್ತೆ ಒದಗಿಸುವ ಮತ್ತು ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವ ಸಂಸದ ಪ್ರತಾಪ ಸಿಂಹ ಅವರ ಭರವಸೆಗಳು ಹುಸಿಯಾಗಿದೆ. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರು ಕೊಡಗಿನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಜೆಪಿ ರಾಜ್ಯ ಸರ್ಕಾರವಿದ್ದಾಗ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿ 10 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಸುಳ್ಳು ಹೇಳಿದ್ದಾರೆ. ಕನಿಷ್ಟ ಅವರ ಸರ್ಕಾರ ಅಧಿಕಾರದಲ್ಲಿದ್ದ ಹಂತದಲ್ಲಿ ಎರಡು ವರ್ಷಗಳ ಹಿಂದೆಯೇ ನಿಗಮ ಸ್ಥಾಪಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಬಹುದಿತ್ತು. ಬದಲಾಗಿ ಚುನಾವಣಾ ಹಂತದಲ್ಲಿ ನಿಗಮವನ್ನು ಘೋಷಿಸಿದರು. ಆದರೆ ಅದಕ್ಕೆ ಚೈತನ್ಯ ನೀಡುವ ಕೆಲಸ ಆಗಿಲ್ಲ ಎಂದು ಸಂಕೇತ್ ಪೂವಯ್ಯ ಆರೋಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.