ಮಡಿಕೇರಿ ಸೆ.27 : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸೆ.28 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ “ಮುಡಿ ಕಟ್ಟಡ”ದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಆದ್ದರಿಂದ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.










