Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸದರು ಬಹಿರಂಗ ಚರ್ಚೆಗೆ ಬರಲಿ : ಸಂಕೇತ್ ಸವಾಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸದರು ಬಹಿರಂಗ ಚರ್ಚೆಗೆ ಬರಲಿ : ಸಂಕೇತ್ ಸವಾಲು*

ಸೆಪ್ಟೆಂಬರ್ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.30 : ಕೊಡಗಿನ ಕೊಡವರಿಗೆ ಈ ಹಿಂದಿನಿಂದಲು ಲಭ್ಯವಿದ್ದ ‘ಕೋವಿ ಹಕ್ಕಿನ ವಿನಾಯಿತಿ’ಗೆ 2019ರಲ್ಲಿ ಅಕ್ಟೋಬರ್ 29 ರಂದು ಕೇಂದ್ರದ ಗೃಹ ಸಚಿವಾಲಯ ಷರತ್ತುಗಳನ್ನು ಅಳವಡಿಸುವ ಹಂತದಲ್ಲಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರು ಎಲ್ಲಿದ್ದರು ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಕೊಡವರಿಗೆ ಬ್ರಿಟಿಷರ ಅವಧಿಯಿಂದಲೆ ಲಭ್ಯವಿದ್ದ ಕೋವಿ ವಿನಾಯಿಸಿ ಹಕ್ಕನ್ನು 1965 ರಿಂದ ಸ್ಥಿರೀಕರಿಸಿ ಮುಂದುವರೆಸಲಾಗಿದೆ. ಈ ಹಕ್ಕಿನ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವ್ಯಕ್ತಿಯೊಬ್ಬರು ಪ್ರಶ್ನಿಸಿದ ಹಿನ್ನೆಲೆ, ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಸ್ಪಷ್ಟನೆ ನೀಡಲು ಸೂಚನೆಗಳನ್ನು ನೀಡಿತ್ತು.
ಈ ಹಿನ್ನೆಲೆ ಕೇಂದ್ರದ ಗೃಹ ಸಚಿವಾಲಯ ಕೊಡಗಿನಲ್ಲಿ ವಿಶೇಷ ಕೋವಿ ವಿನಾಯಿತಿ ಹಕ್ಕನ್ನು ಮುಂದುವರಿಸುವ ಹಂತದಲ್ಲಿ, ಈ ಹಕ್ಕನ್ನು ‘2029 ರ ಅಕ್ಟೋಬರ್ 29’ರವರೆಗೆ ಎಂದು ಷರತ್ತನ್ನು ಹಾಕಿ ಮುಂದುವರಿಸಿದೆ. ಈ ಹಂತದಲ್ಲಿ ಕೊಡಗಿನ ಜನರು ಮತ್ತು ಕೋವಿ ನಡುವಿನ ಸಾಂಸ್ಕೃತಿಕ ಸಂಬಂಧ, ಮಹತ್ವಗಳನ್ನು ಸಂಸತ್‍ನಲ್ಲಿ ತಿಳಿಸಬೇಕಿದ್ದ ಪ್ರತಾಪ ಸಿಂಹ ಅವರು ಆ ಸಂದರ್ಭ ಏನು ಮಾಡುತ್ತಿದ್ದರೆಂದು ಪ್ರಶ್ನಿಸಿದರು.
::: ಬಹಿರಂಗ ಚರ್ಚೆಗೆ ಬರಲಿ :::
ಕೊಡಗು-ಮೈಸೂರು ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿರುವ ಪ್ರತಾಪ ಸಿಂಹ ಅವರು ತಮ್ಮ ಅವಧಿಯಲ್ಲಿ ಕೊಡಗಿನ ಮೂಲಭೂತ ವಿಷಯಗಳ ಬಗ್ಗೆ ಕಾಳಜಿ ತೋರಿಲ್ಲ. ಇದನ್ನು ಮರೆ ಮಾಚುವ ಸಲುವಾಗಿ ಇದೀಗ ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಬರುತ್ತಿದ್ದಾರೆ. ಇದನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ. ಅಗತ್ಯ ದಾಖಲೆಗಳೊಂದಿಗೆ ಬಹಿರಂಗ ಚರ್ಚೆಗೆ ಬರುವಂತೆ ಸಂಕೇತ್ ಪೂವಯ್ಯ ಆಹ್ವಾನ ನೀಡಿದರು.
ಕಸ್ತೂರಿ ರಂಗನ್ ವರದಿಯಿಂದ ಕೊಡಗಿಗೆ ಯಾವುದೇ ತೊಂದರೆಯಾಗದಂತೆ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊರುತ್ತೇನೆ, ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಅಗತ್ಯ ಸ್ಪಂದನ ನೀಡುವುದಾಗಿ ಈ ಹಿಂದೆ ಹೇಳಿಕೊಂಡ ಸಂಸದ ಪ್ರತಾಪ ಸಿಂಹ ಏನು ಮಾಡಿದ್ದಾರೆಂದು ಪ್ರಶ್ನಿಸಿದ ಅವರು, 2014 ರಲ್ಲೆ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡುವುದಾಗಿ ಹೇಳಿಕೊಂಡಿದ್ದ ಇವರಿಗೆ ಅದನ್ನು ಮಾಡಲು ಸಾಧ್ಯವಾಗಿದೆಯೆ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಕೋವಿ ಹಕ್ಕು, ಕಾಫಿ ಬೆಳೆಗಾರರ ಸಂಕಷ್ಟಗಳು ಸೇರಿದಂತೆ ಕೊಡಗಿನ ಮೂಲಭೂತ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲೆ ನಿಮ್ಮದೇ ಸರ್ಕಾರ ಇರುವ ಹಂತದಲ್ಲು ಸಂಸದರಿಗೆ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಇದೀಗ ತಮ್ಮ ಲೋಪ ಮುಚ್ಚಿಕೊಳ್ಳಲು, ಶಾಸಕ ಪೊನ್ನಣ್ಣ ಅವರ ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಸಹಿಸದೆ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆಯೆಂದು ಆರೋಪಿಸಿದರು.
::: ನಿಗಮಕ್ಕೆ ಬಿಡಿಗಾಸು ಬಂದಿಲ್ಲ ::: ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರು, ಯಾವು ಯಾವುದೋ ಕೋಟಿಗಟ್ಟಲೆ ಅನುದಾನವನ್ನು ನಿಗಮಕ್ಕೆ ನೀಡಿದ್ದೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೊಡವ ಅಭಿವೃದ್ಧಿ ನಿಗಮಕ್ಕು ಆ ಅನುದಾನಗಳಿಗು ಯಾವುದೇ ಸಂಬಂಧವಿಲ್ಲ. ನಿಗಮಕ್ಕೆ ಬಿಡಿಗಾಸು ಬಂದಿಲ್ಲವೆಂದು ಸಂಕೇತ್ ಪೂವಯ್ಯ ಸ್ಪಷ್ಟಪಡಿಸಿದರು.
ಪ್ರಸ್ತುತ ಉದ್ಭವಿಸಿರುವ ಕಾವೇರಿ ನೀರಿನ ಸಮಸ್ಯೆಯ ಬಗ್ಗೆ ಕೊಡಗು ಮೈಸೂರು ಸಂಸದರು ಸೇರಿದಂತೆ ರಾಜ್ಯದ 25 ಸಂಸದರ ನಿಲುವೇನು ಎಂದು ಸಂಕೇತ್ ಪೂವಯ್ಯ ಪ್ರಶ್ನಿಸಿ, ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವ ವೈಜ್ಞಾನಿಕ ಚಿಂತನೆಗಳು ತಮ್ಮ ಬಳಿ ಏನಿದೆಯೆಂದು ಕಟುವಾಗಿ ಪ್ರಶ್ನಿಸಿದರು.
::: ಕೊಡಗು ಬಿಜೆಪಿ ಮುಕ್ತ :::
ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ಕೊಡಗು ಬಿಜೆಪಿ ಮುಕ್ತವಾಗಿದೆ. ಬಿಜೆಪಿ ಆಡಳಿತಲ್ಲಿನ ವೈಫಲ್ಯಗಳ ಬಗ್ಗೆ ಪ್ರಜ್ಞಾವಂತ ಜನತೆ ಅರಿತಿದ್ದು, ಮುಂದಿನ ಸಂಸತ್ ಚುನಾವಣೆ ಮತ್ತು ಸ್ಥಳೀಯ ಚುನಾವಣೆಗಳಲ್ಲು ಇದೇ ತೀರ್ಪನ್ನು ಜನತೆ ನೀಡುವ ವಿಶ್ವಾಸವಿದೆಯೆಂದು ಸಂಕೇತ್ ಪೂವಯ್ಯ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.