ಮಡಿಕೇರಿ ಅ.3 : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಓಂಕಾರೇಶ್ವರ ಫೀಡರ್ನಲ್ಲಿ ದಸರಾ ಹಬ್ಬದ ಪ್ರಯುಕ್ತ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಅ.4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಗೌಡ ಸಮಾಜ, ಕನ್ನಂಬಾಣೆ, ವೈವಸ್, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ ಸುತ್ತಮುತ್ತ, ಬ್ರಾಹ್ಮಣಬೀದಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗೆಯೇ ಗದ್ದಿಗೆ ಫೀಡರ್ನಲ್ಲಿ ದಸರಾ ಹಬ್ಬದ ಪ್ರಯುಕ್ತ ವಿದ್ಯುತ್ ಮಾರ್ಗದಲ್ಲಿ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಅಕ್ಟೋಬರ್, 5 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಎ.ವಿ.ಶಾಲೆ, ಆಜಾದ್ನಗರ, ಸಂಪಿಗೆಕಟ್ಟೆ, ತ್ಯಾಗರಾಜ ಕಾಲೋನಿ, ಮಾರುಕಟ್ಟೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಕಾವೇರಿ ಬಡಾವಣೆ, ಭಗವತಿನಗರ, ಮಲ್ಲಿಕಾರ್ಜುನ ನಗರ, ಮುತ್ತಪ್ಪ ದೇವಸ್ಥಾನ, ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









