Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೃತ್ತ ಅಪಘಾತ : ಬಸ್ ಚಾಲಕರ ಅಜಾಗರೂಕತೆ, ಸಂಚಾರಿ ಪೊಲೀಸರ ಅಲಭ್ಯತೆ ಕಾರಣ : ಕೊರವೇ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೃತ್ತ ಅಪಘಾತ : ಬಸ್ ಚಾಲಕರ ಅಜಾಗರೂಕತೆ, ಸಂಚಾರಿ ಪೊಲೀಸರ ಅಲಭ್ಯತೆ ಕಾರಣ : ಕೊರವೇ ಆರೋಪ*

ಅಕ್ಟೋಬರ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.11 : ಇತ್ತೀಚಿನ ದಿನಗಳಲ್ಲಿ ಮಡಿಕೇರಿ ನಗರದ ವೃತ್ತಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ಅಜಾಗರೂಕತೆ ಮತ್ತು ಸಂಚಾರಿ ಪೊಲೀಸರ ಅಲಭ್ಯತೆ ಕಾರಣವಾಗಿದೆ ಎಂದು ಕೊಡಗು ರಕ್ಷಣಾ ವೇದಿಕೆ ಆರೋಪಿಸಿದೆ.
ಇಂದು ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಕೆಎಸ್‌ಆರ್‌ಟಿಸಿ ಬಸ್ ಮತ್ತೆ ಡಿಕ್ಕಿಯಾಗಿ ಹಾನಿಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಅವರು ಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕೆಎಸ್‌ಆರ್‌ಟಿಸಿ ಯಲ್ಲಿ ನುರಿತ ಖಾಯಂ ಚಾಲಕರ ಕೊರತೆ ಎದುರಾಗಿರುವ ಕಾರಣ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಬಸ್ ಚಲಾಯಿಸಿ ಅನುಭವವಿಲ್ಲದ ಹೊರ ಜಿಲ್ಲೆಯ ಚಾಲಕರು ಬೆಟ್ಟ ಗುಡ್ಡ, ತಿರುವು ಪ್ರದೇಶದ ಕೊಡಗಿನಲ್ಲಿ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಇತ್ತೀಚೆಗೆ ಸೂರ್ಲಬ್ಬಿಯಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಸಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತ ಮತ್ತು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬಸ್ ಡಿಕ್ಕಿಯಾಗಿ ಹಾನಿಗೀಡಾಗಿದೆ.
ವೃತ್ತಗಳಿಗೆ ಯಾವುದೇ ವಾಹನಗಳಿಂದ ಹಾನಿಯಾಗುತ್ತಿಲ್ಲ, ಕೆಎಸ್‌ಆರ್‌ಟಿಸಿ ಬಸ್ ಗಳಿಂದ ಮಾತ್ರ ಈ ರೀತಿಯ ಘಟನೆ ನಡೆಯುತ್ತಿದೆ. ಇಂದು ಮತ್ತೆ ದೇವಯ್ಯ ವೃತ್ತಕ್ಕೆ ಬಸ್ ಡಿಕ್ಕಿಯಾಗಿ ಹಾನಿಯಾಗಿದೆ. ಕೆಎಸ್‌ಆರ್‌ಟಿಸಿ ತನ್ನ ನಿರ್ಲಕ್ಷ್ಯ ಮನೋಭಾವದಿಂದ ಹೊರ ಬಂದು ಅನುಭವೀ ಚಾಲಕರನ್ನು ನೇಮಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಗಳಿದೆ ಎಂದು ಪವನ್ ಪೆಮ್ಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಕೆಎಸ್‌ಆರ್‌ಟಿಸಿಯ ನ್ಯೂನತೆಗಳ ಬಗ್ಗೆ ಪ್ರಾದೇಶಿಕ ಸಾರಿಗೆ ಇಲಾಖೆ ಕೂಡ ಗಮನ ಹರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
::: ಪೊಲೀಸರ ಅಲಭ್ಯತೆ :::
ಮಡಿಕೇರಿ ನಗರದಲ್ಲಿ ದಿನದಿಂದ ದಿನಕ್ಕೆ ವಾಹನದಟ್ಟಣೆ ಹೆಚ್ಚಾಗುತ್ತಿದೆ, ಪ್ರವಾಸಿಗರ ವಾಹನಗಳಿಂದ ನಿತ್ಯ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ವಯೋವೃದ್ಧರು ನಗರದ ರಸ್ತೆಗಳಲ್ಲಿ ಆತಂಕದಿಂದಲೇ ಸಂಚರಿಸಬೇಕಾದ ಪರಿಸ್ಥಿತಿ ಇದೆ. ಆದರೆ ವಾಹನದಟ್ಟಣೆಯನ್ನು ನಿಯಂತ್ರಿಸಬೇಕಾದ ನಗರ ಸಂಚಾರಿ ಪೊಲೀಸರು ಅನೇಕ ಸಂದರ್ಭಗಳಲ್ಲಿ ಪ್ರಮುಖ ವೃತ್ತಗಳಲ್ಲಿ ಲಭ್ಯವಿರುವುದಿಲ್ಲ. ನಗರದಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮತ್ತು ಇಂದಿರಾ ಗಾಂಧಿ ವೃತ್ತಗಳಿಗೆ. ಇಲ್ಲಿ ವಾಹನಗಳನ್ನು ನಿಯಂತ್ರಿಸುವುದು ಅಗತ್ಯವಾಗಿದೆ.
ಒಂದು ವೃತ್ತಕ್ಕೆ ಇಬ್ಬರು ಪೊಲೀಸರು ಎಂದರೂ ಒಟ್ಟು ಹತ್ತು ಪೊಲೀಸರು ಕರ್ತವ್ಯ ನಿಭಾಯಿಸಬೇಕಾಗುತ್ತದೆ. ಆದರೆ ಇಷ್ಟು ಸಣ್ಣ ಸಂಖ್ಯೆಯ ಪೊಲೀಸರು ಕೂಡ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಭ್ಯವಿಲ್ಲವೇ ಎನ್ನುವ ಸಂಶಯ ವ್ಯಕ್ತವಾಗುತ್ತದೆ. ಸಚಿವರು, ಶಾಸಕರು ನಗರಕ್ಕೆ ಭೇಟಿ ನೀಡುವಾಗ ವಾಹನದಟ್ಟಣೆಯನ್ನು ಯಶಸ್ವಿಯಾಗಿ ನಿಭಾಯಿಸಿ ಸುಗಮ ಸಂಚಾರ ಏರ್ಪಡಿಸುವ ಪೊಲೀಸರು ಇತರ ದಿನಗಳಲ್ಲಿ ಯಾಕೆ ಲಭ್ಯವಿಲ್ಲ ಎಂದು ಪವನ್ ಪೆಮ್ಮಯ್ಯ ಪ್ರಶ್ನಿಸಿದ್ದಾರೆ.
ಈ ಹಿಂದಿನ ವರ್ಷಗಳಲ್ಲಿ ಸಂಚಾರಿ ಪೊಲೀಸರು ವೃತ್ತಗಳ ಬಳಿಯೇ ಬೆಳಗ್ಗೆಯಿಂದ ಸಂಜೆಯವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು ಮತ್ತು ವಾಹನಗಳನ್ನು ನಿಯಂತ್ರಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇದು ಕಂಡು ಬರುತ್ತಿಲ್ಲ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಬಳಿ ಸಂಚಾರಿ ಪೊಲೀಸರು ಕರ್ತವ್ಯದಲ್ಲಿದಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೊಲೀಸ್ ಇಲಾಖೆ ಕೂಡ ಎಚ್ಚೆತ್ತುಕೊಂಡು ನಗರದ ಪ್ರತಿ ವೃತ್ತಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕನಿಷ್ಠ ತಲಾ ಇಬ್ಬರು ಸಂಚಾರಿ ಪೊಲೀಸರನ್ನಾದರು ನಿಯೋಜಿಸಬೇಕೆಂದು ಪವನ್ ಪೆಮ್ಮಯ್ಯ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.