Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.20 ರಿಂದ ಸಿಎನ್‍ಸಿ 4ನೇ ಹಂತದ ಪಾದಯಾತ್ರೆ ಆರಂಭ*
ಇತ್ತೀಚಿನ ಸುದ್ದಿಗಳು

*ಅ.20 ರಿಂದ ಸಿಎನ್‍ಸಿ 4ನೇ ಹಂತದ ಪಾದಯಾತ್ರೆ ಆರಂಭ*

ಅಕ್ಟೋಬರ್ 18, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಅ.18 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಐದು ಹಂತಗಳಲ್ಲಿ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಅ.20 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕುಂದದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಬೊಟ್ಟಿಯತ್‍ನಾಡ್ (ಕುಂದ), ಕುತ್‍ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡವ ಜನಜಾಗೃತಿ ಸಭೆ ನಡೆಯಲಿದೆ.
ಅ.21 ರಂದು ಬೆಳಗ್ಗೆ 10 ಗಂಟೆಗೆ ಬಿಟ್ಟಂಗಾಲ ಜಂಕ್ಷನ್ ಬಳಿಯಿಂದ ಪಾದಯಾತ್ರೆ ಆರಂಭಗೊಳಲಿದೆ. ನಂತರ ಪಟ್ಟಿಬಾಣೆ ಮಂದ್ ಪೆರವನಾಡ್ (ಬುಟ್ಟಂಗಾಲ) ನಲ್ಲಿ ಮತ್ತು ಮಧ್ಯಾಹ್ನ 2.30 ಗಂಟೆಗೆ ಬೋಟೋಳಿನಾಡ್ (ವಿರಾಜಪೇಟೆ ತಾಲ್ಲೂಕಿನ ಆರ್ಜಿ ಬೊಟೋಳಿ,)ನಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ.
ಕೊಡವ, ಕೊಡವತಿಯರು ಕೋವಿಯೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಪಾಲ್ಗೊಳ್ಳಲಿದ್ದು, 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸಂವಿಧಾನದ ವಿಧಿಗಳಡಿಯಲ್ಲಿ ಕೊಡವ ಸಮುದಾಯಕ್ಕೆ ರಕ್ಷಣೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಅತ್ಯಂತ ಶ್ರೇಷ್ಠ ಮತ್ತು ಶಾಶ್ವತವೂ ಆಗಿರುವುದರಿಂದ ಸಂವಿಧಾನದಡಿಯಲ್ಲಿ ಕೊಡವರಂತಹ ಸೂಕ್ಷ್ಮ ಬುಡಕಟ್ಟು ಜನಾಂಗವನ್ನು ವಿಶೇಷವಾಗಿ ರಕ್ಷಿಸುವುದು ರಾಜ್ಯಾಂಗದತ್ತ ಋಣಭಾರವಾಗಿದೆ.
ಕೊಡವರು ಕೊಡವ ನೆಲದ ಪ್ರಾಚೀನ ಬುಡಕಟ್ಟು ಜನರಾಗಿದ್ದು, ಕೊಡವ ಮಂದ್ ಗಳು, ಜಲದೇವತೆ ಕಾವೇರಿ, ಸೂರ್ಯ, ಚಂದ್ರ, ಭೂಮಿತಾಯಿಯಷ್ಟೇ ಪವಿತ್ರವೂ ಆಗಿದ್ದಾರೆ. ಪ್ರಾಚೀನ ಬುಡಕಟ್ಟು ಕೊಡವ ಜನಾಂಗವನ್ನು ಈ ದೇಶದ ಜನ ಹಾಗೂ ಸರ್ಕಾರ ಸಂವಿಧಾನದ 51 ಎ.ಎಫ್ ವಿಧಿ ಮತ್ತು ವಿಶ್ವ ರಾಷ್ಟ್ರ ಸಂಸ್ಥೆಯ ಸನದ್ ನ ಪ್ರಕಾರ ರಕ್ಷಿಸಿ ಪೋಷಿಸಿ ಕಾಪಾಡಬೇಕಾಗಿದೆ.
ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮಾತ್ರ ಸೀಮಿತರಾಗಿ ಕಾಶ್ಮೀರದಲ್ಲಿ ತಾಯಿ ಬೇರನ್ನು ಹೊಂದಿದ್ದಾರೆ. ಕೊಡವರು ಕೂಡ ಕೊಡಗಿನ ಆದಿಮಸಂಜಾತರಾಗಿದ್ದು, ಕೊಡಗು ಹೊರತು ಪಡಿಸಿ ಕೊಡಗಿನ ಹೊರಗೆ ಕೊಡವರಿಗೆ ಎಲ್ಲೂ ತಾಯಿ ಬೇರಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಡವ ಬಾಹುಳ್ಯ ಜನ್ಮ ಭೂಮಿಯನ್ನು ಸಂವಿಧಾನದ 244 ವಿಧಿ ಹಾಗೂ 6 ಮತ್ತು 8 ನೇ ಶೆಡ್ಯೂಲ್ ಪ್ರಕಾರ ಕೊಡವರ ಸ್ವಯಂ ಶಾಸನದ ಜನ್ಮಭೂಮಿ ಎಂದು ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ಬೋಡೋ ಲ್ಯಾಂಡ್, ಕರ್ಬಿ ಹಾಂಗ್ ಲಾಂಗ್ ಲ್ಯಾಂಡ್, ಗಾರೊಲ್ಯಾಂಡ್, ಜಯಂತಿಯ ಲ್ಯಾಂಡ್, ಕಾಸಿ ಹಿಲ್ಸ್ ಲ್ಯಾಂಡ್ ಇತ್ಯಾದಿ ಭಾರತದ ಈಶಾನ್ಯ ರಾಜ್ಯಗಳ ಹತ್ತು ಸ್ವಾಯತ್ತ ಪ್ರದೇಶಗಳು ಮತ್ತು ಪರಿಷತ್ ಗಳು ಹಾಗೂ ಲಡಾಕ್ ನ ಲೇಹ್ ಮತ್ತು ಲಡಾಕ್ ಬುದ್ದಿಷ್ಠ್ ಅಟೋನಮಸ್ ಕೌನ್ಸಿಲ್ ಮಾದರಿಯಲ್ಲಿ ಘೋಷಿಸಿ ಶಾಸನಬದ್ಧಗೊಳಿಸಬೇಕು ಎಂಬುವುದು ನಮ್ಮ ಬೇಡಿಕೆಯಾಗಿದೆ.
ಇದನ್ನು ಈಡೇರಿಸುವಂತೆ ಒತ್ತಾಯಿಸಿ ಸಿಎನ್‍ಸಿ ಸಂಘಟನೆಯಿಂದ ನಿರಂತರವಾಗಿ ಶಾಂತಿಯುತ ಹೋರಾಟಗಳನ್ನು ನಡೆಸುತ್ತಾ ಬರಲಾಗುತ್ತಿದ್ದು, ಮುಂದುವರೆದ ಭಾಗವಾಗಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ನಾಚಪ್ಪ ತಿಳಿಸಿದ್ದಾರೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*
Next Article *ಅ.23ಕ್ಕೆ ಗಾಯಕ ವಿಜಯ ಪ್ರಕಾಶ್ ಸಂಗೀತ ರಸಮಂಜರಿ ನಿಗಧಿ : ಮಡಿಕೇರಿ ದಸರಾಕ್ಕೆ ಸ್ವಾಗತ ಕೋರಿದ ಶಾಸಕ ಡಾ.ಮಂಥರ್ ಗೌಡ*

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

ಹೊಸದಿಲ್ಲಿ, ಮಾರ್ಚ್ 2, 2026: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಜಾಗತಿಕ ಆರ್ಥಿಕತೆಯನ್ನು ಅಸ್ತವ್ಯಸ್ತಗೊಳಿಸಿದ್ದು, ಭಾರತದ ಮೇಲೆ ಇದರ…

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.