Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಾಬಲೇಶ್ವರ್ ಭಟ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ : ನಿತ್ಯ ಜೀವನದಲ್ಲಿ ಕನ್ನಡ ಭಾಷೆ ಬಳಕೆ ಅಗತ್ಯ : ಆರ್.ಕೆ.ಬಾಲಚಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಾಬಲೇಶ್ವರ್ ಭಟ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ : ನಿತ್ಯ ಜೀವನದಲ್ಲಿ ಕನ್ನಡ ಭಾಷೆ ಬಳಕೆ ಅಗತ್ಯ : ಆರ್.ಕೆ.ಬಾಲಚಂದ್ರ*

ಅಕ್ಟೋಬರ್ 19, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.19 : ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿ ಎನ್ನುವುದು ಅರ್ಥಹೀನವಾದದ್ದು, ಇದರ ಬದಲಾಗಿ ಕನ್ನಡ ಭಾಷೆ, ಸಂಸ್ಕೃತಿಯನ್ನು ನಮ್ಮ ನಿತ್ಯ ಜೀವನ
ಹಾಗೂ ನಮ್ಮ ವ್ಯವಹಾರಗಳಲ್ಲಿ ಬಳಸುವುದು ಆದ್ಯ ಕರ್ತವ್ಯವಾಗಬೇಕೆಂದು ಜಿಲ್ಲಾ ಲೀಡ್‍ಬ್ಯಾಂಕಿನ (ಅಗ್ರಣಿ ಬ್ಯಾಂಕ್) ಮಾಜಿ ಮುಖ್ಯ ವ್ಯವಸ್ಥಾಪಕ ಹಾಗೂ ವೃತ್ತಿ ಮಾರ್ಗದರ್ಶಕ ಆರ್.ಕೆ.ಬಾಲಚಂದ್ರ ಕರೆ ನೀಡಿದರು.
ಜಿಲ್ಲಾ ಕ.ಸಾ.ಪ.ಸಹಯೋಗದಲ್ಲಿ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು( ಕ.ಸಾ.ಪ.) ವತಿಯಿಂದ ಕುಶಾಲನಗರದ ಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಸಾಹಿತಿ ದಿವಂಗತ ಎನ್.ಮಹಾಬಲ್ಲೇಶ್ವರ ಭಟ್ ಅವರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಕನ್ನಡದ ಏಳು ಬೀಳುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕನ್ನಡ ಉಳಿಯಲು ಅಥವಾ ಅಳಿಯಲು ನಾವೇ ಕಾರಣರಾಗುತ್ತೇವೆ, ಭಾಷೆ ಜೀವಂತವಾಗಿರಬೇಕಾದರೆ ಮಾತು ಮತ್ತು ಬರಹ ಎರಡು ಕೂಡ ಪ್ರಮುಖವಾಗಿರಬೇಕು ಎಂದು ಹೇಳಿದ ಅವರು, ಕನ್ನಡದ ಕುರಿತಾದ ಒಲವು ಮತ್ತು ಅರಿವನ್ನು ವಿದ್ಯಾರ್ಥಿ ಸಮುದಾಯದಲ್ಲಿ ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು.
ಒಂದು ಭಾಷೆ ನಾಶವಾದರೆ ಅದನ್ನು ಮಾತನಾಡುವ ಸಮುದಾಯ ಕೂಡ ಕ್ರಮೇಣ ನಾಶವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ ಅವರು, ಜಗತ್ತಿನಲ್ಲಿ ಪ್ರತಿದಿನವೂ ಕನಿಷ್ಠ 2 ಭಾಷೆಗಳು ನಾಶ ಹೊಂದುತ್ತಿದ್ದು, ಇದಕ್ಕೆ ಕಾರಣ ಆ ಭಾಷೆಯನ್ನು ಬಳಸಲು ಸಾಧ್ಯವಾಗದೇ ಇರುವುದು ಪ್ರಮುಖ ಕಾರಣವಾಗಿದೆ ಎಂದು ವಿಶ್ಲೇಷಿದ ಅವರು, ಕನ್ನಡದ ಮನಸ್ಸುಗಳು ಜಾಗೃತಗೊಂಡು ಬದಲಾಗುತ್ತಿರುವ ಕಾಲಘಟ್ಟದಲ್ಲಿ ನಾವು ಕೂಡ ಬದಲಾಗುತ್ತ ಕನ್ನಡ ಭಾಷೆ ಮತ್ತು ನಾವು ತಾಯಿ – ಮಗುವಿನ ರೀತಿಯ ಸಂಬಂಧವನ್ನು ಹೊಂದಿ ಭಾಷೆಯಲ್ಲಿ ಹೊಸತನವನ್ನು ಹೊಂದುವ ಸೃಷ್ಠಿ ಶೀಲಾತೆಯನ್ನು ಹೊಂದುವ ಅನಿವಾರ್ಯತೆಯನ್ನು ಇದೆಯೆಂದು ಹೇಳಿದರು.
ಜನಪದ ಸಾಹಿತ್ಯದಲ್ಲಿ ಮತ್ತು ಬರಹ ರೂಪದಲ್ಲಿ ಕನ್ನಡ ಸಾಹಿತ್ಯದ ಅನಂತ ಸಾಧ್ಯತೆಗಳು ಮತ್ತು ವಿರಾಟ್ ಸ್ವರೂಪವನ್ನು ಅದ್ಬುತವಾಗಿ ಸೋದಹರಣವಾಗಿ ವಿವರಿಸಿದ ಅವರು, ತಮ್ಮ ಮಾತುಗಾರಿಕೆಯಿಂದ ಕನ್ನಡದ ನುಡಿ ಸೊಬಗನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಕನ್ನಡ ನಿರಂತರತೆಯನ್ನು ಕಾಪಾಡಿಕೊಳ್ಳಲು ಕನ್ನಡ ಬಳಕೆಗೆ ಮನೆಯೇ ಮೊದಲ ಪಾಠ ಶಾಲೆಯಾಗುವುದು ಅಚ್ಚಕನ್ನಡದ ಹೆಸರುಗಳನ್ನು ಮಕ್ಕಳಿಗೆ ಇಡಬೇಕು ಕನ್ನಡದಲ್ಲಿ ಬರೆಯಲು ಮತ್ತು ಓದಲು ಬಾಲ್ಯದಿಂದಲೇ ಕಲಿಸುವುದಲ್ಲದೆ ಪ್ರತಿದಿನವೂ ಕನ್ನಡ ಪತ್ರಿಕೆಗಳು ಹಾಗೂ ಕನ್ನಡ ಪುಸ್ತಕಗಳನ್ನು ಓದುವ ಅಭ್ಯಾಸ, ಕನ್ನಡ ಚಲಚಿತ್ರ ಹಾಗೂ ಕನ್ನಡ ಟಿ.ವಿ. ಚಾನೆಲ್‍ಗಳನ್ನು ನೋಡುವ ಮೂಲಕ ಕನ್ನಡ ಬಳಕೆ ಕನ್ನಡದ ಬೆಳವಣಿಗೆಯನ್ನು ನಾವು ಮಾಡಬೇಕಾಗಿದೆ ಎಂದು ಕರೆ ನೀಡಿದರು.
ನಾವು ನವೆಂಬರ್ ಮಾಸದಲ್ಲಿ ಮಾತ್ರ ಕನ್ನಡಿಗರಾಗದೇ ವರ್ಷವಿಡೀ ಕನ್ನಡದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕನ್ನಡದ ಕುರಿತಾದ ಮಿಡಿತಗಳನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
ಜಿ.ಪಂ ಶಿಕ್ಷಣ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕನ್ನಡ ಭಾಷೆ ಮತ್ತು ಸಾಹಿತ್ಯವು ಭವ್ಯವಾದ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದ್ದು, ಅಪ್ಪಟ ಜೀವನ ಪ್ರೀತಿ ಮಾನವೀಯತೆ, ಸಹಬಾಳ್ವೆ ಕನ್ನಡದ ಜೀವವಾಗಿದ್ದು, ಸಕಾಲ ಜೀವಾತ್ಮರಿಗೆ ಒಳಿತನ್ನು ಬಯಸುವುದೇ ಕನ್ನಡ ಭಾಷೆ ಸಾಹಿತ್ಯದ ಅಂತರಂಗದ ಧ್ವನಿಯಾಗಿದೆ ಎಂದರು.
ಸಾಹಿತಿ ದಿವಂಗತ ಎನ್.ಮಹಾಬಲೇಶ್ವರ ಭಟ್ ಅವರ ಪುತ್ರ ಬಿಳಿಗೇರಿಯ ಕಾಫಿ ಬೆಳೆಗಾರ ಎನ್.ಎಂ.ಕುಮಾರ್ ಮಾತನಾಡಿ, ತನ್ನ ತಂದೆ 1960 ರಷ್ಟು ಹಿಂದೆಯೇ ಕನ್ನಡ ಪಂಡಿತರಾಗಿ ಶಿಕ್ಷಕರಾಗಿ ಪ್ರಾಂಶುಪಾಲರಾಗಿ ಕನ್ನಡ ಭಾಷೆ ಮತ್ತು ಸಾಹಿತ್ಯ ಕೃಷಿ ಮಾಡಿದ್ದಾರೆಂದು ಸ್ಮರಿಸಿದರು.
ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಬಾಬು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ವಿದ್ಯಾತಪ್ಪಸ್ವಿಗಳಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಎನ್.ಎಸ್.ಸತೀಶ್, ಕಳೆದ ವರ್ಷದಿಂದ ಇಂಜಿನೀಯರಿಂಗ್ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಲಿಯುವುದು ಕಡ್ಡಾಯವಾಗಿದೆ. ಹಾಗೆಯೇ 15 ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪದವಿ ವ್ಯಾಸಂಗವನ್ನು ಕಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ಅ ನಿವೃತ್ತ ಕನ್ನಡಪರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮ್‍ಕುಮಾರ್ ದತ್ತಿನಿಧಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ಎಸ್.ನಾಗರಾಜ್, ಟಿ.ವಿ.ಶೈಲಾ, ಕೋಶಾಧಿಕಾರಿ ಕೆ.ವಿ.ಉಮೇಶ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್, ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥ ಡಾ ಎಸ್.ರಂಗನಾಥ್, ಹೇಮಲತಾ, ಸಹನಾ ಇದ್ದರು.
ತಾಲ್ಲೂಕು ಕಸಾಪದ ಗೌರವ ಕಾರ್ಯದರ್ಶಿ ಎಸ್.ನಾಗರಾಜು ಸ್ವಾಗತಿಸಿದರು. ಕಸಾಪ ಪದಾಧಿಕಾರಿ ಲೀಲಾ ತೊಡಿಕಾನ ಕಾರ್ಯಕ್ರಮ ನಿರೂಪಿಸಿದರು. ಪದಾಧಿಕಾರಿ ಬಿ.ಬಿ.ಸಾವಿತ್ರಿ ವಂದಿಸಿದರು.
ಇದೇ ವೇಳೆ ಆರ್.ಕೆ.ಬಾಲಚಂದ್ರ ಅವರನ್ನು ತಾಲ್ಲೂಕು ಕ.ಸಾ.ಪ.ವತಿಯಿಂದ ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು.
ತಾಲೂಕು ಕಸಾಪ ಪದಾಧಿಕಾರಿಗಳು ಕಾಲೇಜಿನ ವಿದ್ಯಾರ್ಥಿ ಸಮೂಹ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.