ಮಡಿಕೇರಿ ಅ.24 : ನಗರದ ನಾಲ್ಕು ಶಕ್ತಿ ದೇವತೆಗಳ ಹಿರಿಯ ಅಕ್ಕಳೆಂದೆ ಖ್ಯಾತಿ ಪಡೆದಿರುವ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6 ರಿಂದ 10ರವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಆರ್.ರವಿ ತಿಳಿಸಿದ್ದಾರೆ.
ಎರಡು ಟ್ರಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್ನ ಮಾತಾ ಎಲೆಕ್ಟಿçಕಲ್ಸ್ನವರು ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಕೊಲ್ಲಂನ ಶಿವು ಪ್ರೊ ಲೈಟ್ಸ್ನವರು ಧ್ವನಿವರ್ಧಕವನ್ನು ಒದಗಿಸಲಿದ್ದು, ಮಡಿಕೇರಿ ಈವೆಂಟ್ ಟೆಕ್ನ ಅವಿನ್ಕುಮಾರ್ ತಂಡ ಸ್ಟುಡಿಯೋ ಸೆಟ್ಟಿಂಗ್ಸ್ ಹಾಗೂ ಫೈರ್ ಎಫೆಕ್ಟ್ ವ್ಯವಸ್ಥೆ ಮಾಡಲಿದೆ. ಒಟ್ಟು 18 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಐಂಡ್ ಸನ್ಸ್ ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ಕಲಾಕೃತಿಗಳಿಗೆ ಚಲನವಲನವನ್ನು ಸಮಿತಿ ಸದಸ್ಯರೆ ನೀಡಲಿದ್ದಾರೆ.
ಟ್ರಾ÷್ಯಕ್ಟರ್ ಸೆಟ್ಟಿಂಗ್ಸ್ ಅನ್ನು ಮಂಜು ಮತ್ತು ತಂಡ ಮಾಡಲಿದ್ದು, ಮಯೂರಿ ಆರ್ಟ್ಸ್ ತಂಡ ಕಲಾಕೃತಿ ಅಲಂಕಾರ ಮಾಡಲಿದೆ. ಒಟ್ಟು 26 ಲಕ್ಷ ರೂ. ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗಿದ್ದು, ಜನಾಕರ್ಷಣೆಯೊಂದಿಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗುವುದು ಎಂದು ರವಿ ತಿಳಿಸಿದ್ದಾರೆ.










