Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಶಿಕ್ಷಣ ಕಾರ್ಯಕ್ರಮ : ಸಹಕಾರ ಸಂಘಗಳು ಬಹು ಚಟುವಟಿಕೆಗಳತ್ತ ಚಿತ್ತ ಹರಿಸಬೇಕು : ಎ.ಕೆ.ಮನು ಮುತ್ತಪ್ಪ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಶಿಕ್ಷಣ ಕಾರ್ಯಕ್ರಮ : ಸಹಕಾರ ಸಂಘಗಳು ಬಹು ಚಟುವಟಿಕೆಗಳತ್ತ ಚಿತ್ತ ಹರಿಸಬೇಕು : ಎ.ಕೆ.ಮನು ಮುತ್ತಪ್ಪ ಕರೆ*

ಅಕ್ಟೋಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.28 : ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ನೂತನವಾಗಿ ಸ್ಥಾಪಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟು, ಸಹಕಾರ ಕ್ಷೇತ್ರದ ಮೂಲಕ ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವತ್ತ ಸಾಗುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಹಾಗೂ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಎ.ಪಿ.ಸಿ.ಎಂ.ಎಸ್., ಮತ್ತು ಲ್ಯಾಂಪ್ಸ್ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯ ನೂತನ 13 ಯೋಜನೆಗಳ ಕುರಿತು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ದೇಶದ ಎಲ್ಲಾ ಸಹಕಾರ ಸಂಘಗಳಿಗೆ ಅನ್ವಯಿಸುವಂತೆ ಏಕರೂಪದ ಉಪನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಆ ಮೂಲಕ ಸಂಘವು ಹಲವು ಉದ್ದೇಶಗಳನ್ನು ಹೊಂದಿ ಅವುಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದೆ. ಸಂಘಗಳು ತಮ್ಮ ದೈನಂದಿನ ಕಾರ್ಯಚಟುವಟಿಕೆಯೊಂದಿಗೆ ಬಹು ಆದಾಯಾಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಉತ್ತೇಜಿಸುತ್ತಿದೆ. ಈ ದಿಸೆಯಲ್ಲಿ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಈ ಕುರಿತು ಸಮಗ್ರ ಮಾಹಿತಿಯ ಅವಶ್ಯಕತೆ ಇರುವುದರಿಂದ ನಾವು ಇಂತಹ ಶಿಕ್ಷಣ ಕಾರ್ಯಕ್ರಮವನ್ನು ಉಪನಿಬಂಧಕರ ಆಸಕ್ತಿ ಮೇರೆಗೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಸಂಘಗಳು ಕೇವಲ ಸಾಲ ನೀಡುವಿಕೆ, ವಸೂಲಾತಿಗೆ ಮಾತ್ರ ಸೀಮಿತವಾಗದೆ ಬಹುಚಟುವಟಿಕೆಗಳನ್ನು ಕೈಗೊಂಡಾಗ ಮಾತ್ರ ಸಧೃಡವಾಗಿ ನಿಲ್ಲಲು ಸಾಧ್ಯ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಲ್ಲದೆ ಜಿಲ್ಲೆಯಲ್ಲಿ ಸಹಕಾರ ಸಪ್ತಾಹವನ್ನು ನವೆಂಬರ್ ತಿಂಗಳಿನಲ್ಲಿ ಆಚರಿಸಲಾಗುವುದರಿಂದ ಎಲ್ಲಾ ಸಹಕಾರ ಸಂಘಗಳು ಸಪ್ತಾಹವನ್ನು ಅರ್ಥಪೂರ್ಣವಾಗಿ ಹಾಗೂ ಸುತ್ತೋಲೆ ರೀತ್ಯಾ ಆಚರಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಕನ್ನಂಡ ಸಂಪತ್, ಕಲಿಕೆಯು ಅನಂತವಾಗಿದ್ದು, ಶಿಕ್ಷಣ ಕಾರ್ಯಕ್ರಮದಲ್ಲಿ ತಿಳಿಸುವ ಅಂಶಗಳ ಬಗ್ಗೆ ಸಂಘಗಳು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಹಕಾರ ಸಂಘಗಳ ಉಪನಿಬಂಧಕರಾದ ಎಂ.ಎಸ್.ಕೃಷ್ಣ ಪ್ರಸಾದ್ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯ 13 ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಂ.ಈ. ಮೋಹನ್ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ, ಸಹಕಾರ ಚುನಾವಣೆ ಹಾಗೂ ಆಡಳಿತ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ನಾರಾಯಣಗೌಡರವರು ಕಾಮನ್ ಸರ್ವಿಸ್ ಸೆಂಟರ್ ಸ್ಥಾಪಿಸುವ ಕುರಿತು, ಗೊಬ್ಬರದ ಪರವಾನಗಿ ಪಡೆದುಕೊಳ್ಳಲು ಇರುವ ಮಾನದಂಡಗಳ ಬಗ್ಗೆ, ‘ಫ್ರೂಟ್ಸ್’ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಯೂನಿಯನ್ ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಪಿ.ಸಿ. ಅಚ್ಚಯ್ಯ, ಕೆ.ಎಸ್. ಗಣಪತಿ, ಕೆ.ಎಂ. ತಮ್ಮಯ್ಯ, ವಿ.ಕೆ. ಅಜಯ್ ಕುಮಾರ್, ಪಿ.ಬಿ. ಯತೀಶ್, ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ. ಮೋಹನ್, ಬಿ.ಕೆ. ವಿಜಯೇಂದ್ರ ಅಧೀಕ್ಷಕರಾದ ಶ್ರೀಮತಿ ಆಶಾ, ಮಾರಾಟಾಧಿಕಾರಿ ಸಿದ್ದಲಿಂಗ ಮೂರ್ತಿ ಹಾಗೂ ಸಹಕಾರ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು. ಕಾರ್ಯಕ್ರಮದ ಸ್ವಾಗತ ಮತ್ತು ನಿರೂಪಣೆಯನ್ನು ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.