ಮಡಿಕೇರಿ ಅ.27 : ಕುಶಾಲನಗರ ವ್ಯಾಪ್ತಿಯ ಹಾರಂಗಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸುಂದರನಗರದಿಂದ ಚಿಕ್ಕತ್ತೂರು ಗ್ರಾಮದವರೆಗೆ ನಿರ್ವಹಿಸಬೇಕಿರುವುದರಿಂದ 220/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಸ್ಎಲ್ಎನ್ ಫೀಡರ್ನಲ್ಲಿ ಅ.30 ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









