Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಳುವಂಗಡ ಕಾವೇರಿಗೆ ಗೌರವ ಡಾಕ್ಟರೇಟ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಳುವಂಗಡ ಕಾವೇರಿಗೆ ಗೌರವ ಡಾಕ್ಟರೇಟ್*

ಅಕ್ಟೋಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಚೆಟ್ಟಳ್ಳಿ ಅ.29 : ಕೊಡಗಿನ ಬಹುಭಾಷಾ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರಿಗೆ ಏಷ್ಯ ಇಂಟರ್ ನ್ಯಾಷನಲ್ ಕಲ್ಚರ್ ಅಕಾಡೆಮಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ತಮಿಳುನಾಡಿನ ಹೊಸೂರಿನಲ್ಲಿ ನಡೆದ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು. ಕಾವೇರಿ ಅವರು ರಚಿಸಿರುವ 25 ಪುಸ್ತಕಗಳು ಪ್ರಕಟಗೊಂಡಿದ್ದು, ಕಾದಂಬರಿ, ಕಥಾಸಂಕಲನ, ಕವನಮಾಲೆ, ಅದ್ಯಯನ ಗ್ರಂಥ, ನಾಟಕ, ಭಕ್ತಿ ಪ್ರಧಾನ ಕೃತಿ, ಪ್ರಬಂಧಗಳನ್ನು ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಮತ್ತು ಮಲಯಾಳಂ ನಲ್ಲಿ ಬರೆದಿದ್ದಾರೆ.
ರಂಗ ಕಲಾವಿದೆ, ಸಮಾಜ ಸೇವಕಿ, ಚಿತ್ರಕಲಾವಿದೆಯಾಗಿರುವ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಉಳುವಂಗಡ ಕಾವೇರಿ ಉದಯ್ ಸಂಭ್ರಮ ಮಹಿಳಾ ಸಂಸ್ಥೆಯ ಸ್ಥಾಪಕ ಸದಸ್ಯೆ ಮತ್ತು ಕಾರ್ಯದರ್ಶಿಯಾಗಿ ಹತ್ತು ವರ್ಷ ಕಾರ್ಯನಿರ್ವಹಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲ್ಲೂಕಿನ ಮಹಿಳಾ ಸಾಹಿತ್ಯ ಪ್ರತಿನಿಧಿ, ಗುರುಕುಲ ಕಲಾ ಪ್ರತಿಷ್ಠಾನದ ಕೊಡಗು ಜಿಲ್ಲಾ ಘಟಕದ ಗೌರವಾಧ್ಯಕ್ಷೆ, ಕೊಡಗು ಲೇಖಕಿಯರ ಸಂಘದ ಸಹ ಕಾರ್ಯದರ್ಶಿ, ಕೊಡಗು ಸಿರಿಗನ್ನಡ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವರು.
ಇವರ ಹಲವು ಬರಹಗಳಿಗೆ ಪ್ರಶಸ್ತಿ ದೊರೆತ್ತಿದೆ, ಸಣ್ಣ ಕಥೆ ಕಿರು ಸಿನಿಮಾ, ಕಾದಂಬರಿ ಸಿನಿಮಾ ಆಗಿದೆ. ಸಿನಿಮಾಗಳಿಗಾಗಿ ಹಾಡು ಬರೆದಿದ್ದಾರೆ. ಕೊಡವರ ಆಚಾರ ವಿಚಾರಗಳ ಬಗ್ಗೆ ವಿಚಾರ ಮಂಡನೆ, ಪೌರಾಣಿಕ, ಸಾಮಾಜಿಕ ನಾಟಕಗಳನ್ನು ಬರೆದು ಮಹಿಳೆಯರ ತಂಡ ರಚಿಸಿ ನಾಟಕ ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇವರ ಸಮಾಜ ಹಾಗೂ ಸಾಹಿತ್ಯ ಸೇವೆಗೆ 2022 ನೇ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಕ್ಕಳ ಪುಸ್ತಕ ಚಂದಿರ ರಾಜ್ಯ ಪ್ರಶಸ್ತಿ, ಸಾಹಿತ್ಯ ತಪಸ್ವಿ ರಾಜ್ಯ ಪ್ರಶಸ್ತಿ, ಸಣ್ಣ ಕಥೆಗೆ ಕುಶ ದತ್ತಿ ನಿಧಿ ಪ್ರಶಸ್ತಿ, ಗುರುಕುಲ ಕಲಾಪ್ರತಿಪ್ಠಾನದಿಂದ ಗುರುಕುಲ ಶಿರೋಮಣಿ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿ ಹಾಗೂ ಸಾಹಿತ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ ದೊರೆತ್ತಿದೆ.
ಮಗ್ಗುಲ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ದೇವರ ಚರಿತ್ರೆ ಕುರಿತ ಬರಹಕ್ಕಾಗಿ ಸನ್ಮಾನ. 2019 ಮೈಸೂರು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಟಿಯಲ್ಲಿ ಸನ್ಮಾನ. ಹುದಿಕೇರಿ ಕೊಡವ ಸಮಾಜದಲ್ಲಿ ಚೆಕ್ಕೆರ ಕುಟುಂಬ ಮತ್ತು ಕೊಡವ ಮಕ್ಕಡ ಕೂಟದಿಂದ ಸನ್ಮಾನ. ಮೈಸೂರು ಕೊಡವ ಸಮಾಜದಲ್ಲಿ ಕೊಡಗ್’ರ ಸಿಪಾಯಿ ಚಿತ್ರ ತಂಡದಿಂದ ಚಿತ್ರ ಕತೆ ಬರಹಕ್ಕಾಗಿ ಸನ್ಮಾನ. ಪೆರುಮಾಳ್ ಪಟ್ಟಿ ಕೋಲ್ ಮಂದಿನಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನ. ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಯಿಂದ ಸಾಹಿತ್ಯ ಕ್ಷೇತ್ರದ ಸಾಧನೆಗೆ ಸನ್ಮಾನ. 2022 ರ ರಾಜ್ಯ ಮಟ್ಟದ ಮಹಿಳಾ ದಿನಾಚರಣೆಯಂದು ಬೆಂಗಳೂರಿನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಮಾಜಿ ಸೈನಿಕರ ಸಂಘ ಮತ್ತು ಸ್ಟೇಟ್ ಬ್ಯಾಂಕ್ ಇಂಡಿಯಾ ದಿಂದ ಸನ್ಮಾನ ದೊರೆತಿದೆ. ಸಾಹಿತ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕೊಡವ ಸಮಾಜದಲ್ಲಿ ಸನ್ಮಾನ ಮಾಡಲಾಗಿದೆ. ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘ ಮತ್ತು ದಿನಪತ್ರಿಕೆಯವರಿಂದ ಬೆಂಗಳೂರಿನಲ್ಲಿ ಸಾಹಿತ್ಯ ತಪಸ್ವಿ ರಾಜ್ಯ ಪ್ರಶಸ್ತಿಯೊಂದಿಗೆ ಸನ್ಮಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡದಲ್ಲಿ ಮಂತ್ರಿಗಳಾದ ಹಾಲಪ್ಪ ಆಚಾರ್ ಅವರಿಂದ ರಾಜ್ಯ ಪ್ರಶಸ್ತಿಯೊಂದಿಗೆ ಸನ್ಮಾನ ಪಡೆದು ಕೊಂಡಿದ್ದಾರೆ.
ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ ನಿವಾಸಿ ಚಂಗುಲಂಡ ಸಿ.ಮಾದಪ್ಪ ಸರಸ್ವತಿ ದಂಪತಿಗಳ ಪುತ್ರಿಯಾಗಿರುವ ಉಳುವಂಗಡ ಕಾವೇರಿ ಉದಯ್ ಅವರು 1969 ಮೇ 18 ರಲ್ಲಿ ಜನಿಸಿದರು. ಪುತ್ತೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಉಳುವಂಗಡ ಯು.ಉದಯ ಅವರನ್ನು ವಿವಾಹವಾದ ಇವರಿಗೆ ಲಿಖಿತ್, ಅಮಿತ್ ಇಬ್ಬರು ಪುತ್ರರು ಹಾಗೂ ಪೂಜಿತ, ಗಾಯನ ಇಬ್ಬರು ಸೊಸೆಯರು ಇರುವರು. (ವರದಿ : ಪುತ್ತರಿರ ಕರುಣ್ ಕಾಳಯ್ಯ)

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕೊಡಗಿನ 10 ಮಂದಿಗೆ ಸಮರ್ಥ ಕನ್ನಡಿಗ ಪ್ರಶಸ್ತಿ*
Next Article *ಸುಂಟಿಕೊಪ್ಪದಲ್ಲಿ “ಬೆಳೆ ಹಬ್ಬ”ದ ಸಂಭ್ರಮ*

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.