Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*
  • *ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*
  • *ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*
  • *ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*
  • *ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*
  • *ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ : ಕೊಡಗು ಆಮ್ ಆದ್ಮಿ ಪಾರ್ಟಿ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ : ಕೊಡಗು ಆಮ್ ಆದ್ಮಿ ಪಾರ್ಟಿ ಆರೋಪ*

ಅಕ್ಟೋಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.29 : ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದಂತೆ ಆಗಿದೆ. ಗ್ರೀನ್ ಎನರ್ಜಿ ಬಗ್ಗೆ ಹೇಳುವ ಕೇಂದ್ರ ಸರ್ಕಾರ ರೈತರ ಪಂಪ್ ಸೆಟ್ ಗೆ ಸಬ್ಸಿಡಿ ನೀಡದೆ ಅನ್ಯಾಯ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸೋಲಾರ್ ಪಂಪ್ ಸೆಟ್ ಗೆ ಶೇ.50 ಸಬ್ಸಿಡಿ ನೀಡಲು ಎಎಪಿ ಪಕ್ಷ ಒತ್ತಾಯಿಸಿದೆ. ಈ ವರ್ಷ ಮಳೆ ಕಡಿಮೆ ಇರುವುದರಿಂದ ಕಾಫಿ ಬೆಳೆಗಾರರು ಬಹಳ ಸಂಕಟದಲ್ಲಿ ಇದ್ದಾರೆ. ತಮ್ಮ ಫಸಲು ಉಳಿಸಿಕೊಳ್ಳಲು ನೀರು ಪಂಪ್ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ.
ಕೇಂದ್ರ ಸರ್ಕಾರದಿಂದ ಯಾವುದೇ ಸಹಾಯಧನ ನೀಡಿಲ್ಲ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು ಯಾವುದೇ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.
ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಪ್ರತಿವರ್ಷ 6,900 ಕೋಟಿ ರೂ. ಖರ್ಚು ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು 34 ಲಕ್ಷ ಪಂಪ್‌ಸೆಟ್‌ಗಳಿದ್ದು, ಇವುಗಳ ಅಳವಡಿಕೆಗೆ ಒಟ್ಟು 13,800 ಕೋಟಿ ರೂ. ಖರ್ಚಾಗುತ್ತದೆ ಎಂಬ ಅಂದಾಜಿದೆ. ಇನ್ನುಳಿದ 6900 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರವು ಭರಿಸುವ ಮೂಲಕ ಉಚಿತವಾಗಿ ಸರ್ಕಾರವೇ ಪ್ರತಿಯೊಬ್ಬ ರೈತರಿಗೂ ಸೋಲಾರ್ ಪಂಪ್ ವಿತರಿಸಿದರೆ ರೈತರಿಗೂ ಅನುಕೂಲವಾಗಲಿದೆ. ರಾಜ್ಯ ಸರ್ಕಾರಕ್ಕೂ ಪ್ರತಿ ವರ್ಷದ ಸಬ್ಸಿಡಿ ಖರ್ಚು ಉಳಿಯಲಿದೆ ಎಂದು ಭೋಜಣ್ಣ ಸೋಮಯ್ಯ ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸಮ ಪ್ರಮಾಣದಲ್ಲಿ ಜಿಎಸ್‌ಟಿ ಪಡೆಯುತ್ತಿದೆ. ಆದರೆ, ರಾಜ್ಯದ ಅಭಿವೃದ್ಧಿಗೆ ಕೂಡ ಸಮನಾಗಿ ಬಂಡವಾಳ ಹಾಕಬೇಕು. ಸೋಲಾರ್ ಪಂಪ್‌ಸೆಟ್‌ಗೆ ಶೇ 30ರಷ್ಟು ಸಹಾಯಧನ ನಾವು ಕೊಡುತ್ತೇವೆ. ಶೇ 50ರಷ್ಟು ಸಹಾಯ ಧನವನ್ನು ರಾಜ್ಯ ಸರ್ಕಾರ ಕೊಡಲಿ ಎನ್ನುವುದು ನ್ಯಾಯವಲ್ಲ. ಟ್ಯಾಕ್ಸ್ ಮಾತ್ರ ಸಮನಾಗಿ ತೆಗೆದುಕೊಳ್ಳುವವರು, ರಾಜ್ಯಕ್ಕೆ ಕೊಡುವಾಗಲೂ ಸಮವಾಗಿ ಕೊಟ್ಟರೆ ಒಕ್ಕೂಟ ವ್ಯವಸ್ಥೆ ಉಳಿಯುತ್ತದೆ ಎಂದು ಕೇಂದ್ರ ಸರ್ಕಾರದ ನೀತಿಯನ್ನು ಟೀಕಿಸಿದರು.
ದೇಶದಲ್ಲಿ 70 ರಷ್ಟು ರೈತರಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಉಚಿತವಾಗಿ ಸೋಲಾರ್ ಪಂಪ್ ಸೆಟ್ ವಿತರಣೆ ಮಾಡಿದರೆ, ದೀರ್ಘಾವಧಿಯಲ್ಲಿ ಸರ್ಕಾರಗಳಿಗೂ ಲಾಭವಾಗಲಿದೆ. ಸರ್ಕಾರವು ಸೋಲಾರ್ ಪ್ಲಾಂಟ್ ಗಳನ್ನು ಅಳವಡಿಸಲು ನೀಡುತ್ತಿರುವ ನೂರಾರು ಕೋಟಿ ಹಣ ಉಳಿಯುತ್ತದೆ. ಇದಲ್ಲದೆ ಹೆಚ್ಚಿನ ವಿದ್ಯುತ್ತನ್ನು ಉತ್ಪಾದಿಸಿ ಪವರ್ ಗ್ರೀಡಿಗೆ ನೀಡಿದಲ್ಲಿ ರೈತರಿಗೆ ಸಹ ಸಾಕಷ್ಟು ಆರ್ಥಿಕ ಸಹಾಯವು ಆಗುತ್ತದೆ. ಇದುವರೆಗೂ ನಿರಂತರ ವಿದ್ಯುತ್ ಇಲ್ಲದೆ ಬೆಳೆ ನಾಶ ಆಗುತ್ತಿದ್ದು, ಸೋಲಾರ್ ಪಂಪ್‌ನಿಂದ ರೈತರಿಗೆ ಬೆಳೆ ಉತ್ಪಾದನೆ ಹೆಚ್ಚಾಗಲಿದೆ. ಇದು ಜಿಡಿಪಿ ಬೆಳವಣಿಗೆಗೆ ಕೂಡ ಸಹಕಾರಿಯಾಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ 2017ರಲ್ಲಿ ಕುಸುಮ್ ಯೋಜನೆ ಜಾರಿ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ 10,314 ಪಂಪ್‌ಸೆಟ್ ನೀಡಿದೆ. ಶೇ 30ರಷ್ಟು ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಇದರಲ್ಲಿ ಕೇವಲ 314 ಪಂಪ್‌ಸೆಟ್ ಮಾತ್ರ ರಾಜ್ಯದಲ್ಲಿ ವಿತರಣೆಯಾಗಿದೆ. ಜನರ ಕಣ್ಣೊರೆಸಲು ಮಾತ್ರ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಮಾಲಿನ್ಯ ಕಡಿಮೆ ಮಾಡಬೇಕು, ನೈಸರ್ಗಿಕ ಇಂಧನ ಉತ್ಪಾದಿಸಬೇಕು ಎನ್ನುವ ಯೋಜನೆ ಕೇವಲ ಭಾಷಣಕ್ಕೆ ಸೀಮಿತವಾಗಿದೆ.. ಆದರೆ, ದೇಶದಲ್ಲಿ ಪರಿಸರ ಸ್ನೇಹಿ ಯೋಜನೆಗಳು ನಡೆಯುತ್ತಿಲ್ಲ ಎಂದು ಹೇಳಿದರು.

ಅದಾನಿ ಗ್ರೂಪ್ ಆಸ್ಟ್ರೇಲಿಯಾದಿಂದ ಕಲ್ಲಿದ್ದಲನ್ನು ಆಮದು ಮಾಡಿಕೊಂಡು ದೇಶದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಪೂರೈಕೆ ಮಾಡುತ್ತಿದ್ದು, ಇದರಲ್ಲಿ 50 ಪ್ರತಿಶತ ಆದಾಯ ಗಳಿಸಿದೆ ಎಂದು ವರದಿಯಾಗಿದೆ. ಇಂತಹವರಿಗೆ ಅನುಕೂಲ ಮಾಡಿಕೊಡಲು ಗ್ರೀನ್ ಎನರ್ಜಿ ಬಗ್ಗೆ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಕೆ.ಅಪಯ್ಯ ಹಾಗೂ ಕಾರ್ಯದರ್ಶಿ ಪೃಥ್ವಿ ಮಡಿಕೇರಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.03:-ಬಲಿಜ ಸಮಾಜದ ವಿದ್ಯಾರ್ಥಿಗಳ ಉದ್ಯೋಗದ ಅನುಕೂಲಕ್ಕಾಗಿ 2ಎ ಹಿಂದುಳಿದ ವರ್ಗದ ಮೀಸಲಾತಿ ನೀಡುವಂತಾಗಬೇಕು ಎಂದು ಯೋಗಿ…

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*

ಮಾರ್ಚ್ 3, 2026

*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*

ಮಾರ್ಚ್ 3, 2026

*ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*

ಮಾರ್ಚ್ 3, 2026

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.