Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೋಮವಾರಪೇಟೆ : ಅಕ್ರಮ ಸಾಗುವಳಿ ಭೂಮಿ ಮರಳಿಸದಿದ್ದಲ್ಲಿ ಕಠಿಣ ಕ್ರಮ : ಬೃಹನ್ಮಠದ ಆಡಳಿತಾಧಿಕಾರಿ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ಸೋಮವಾರಪೇಟೆ : ಅಕ್ರಮ ಸಾಗುವಳಿ ಭೂಮಿ ಮರಳಿಸದಿದ್ದಲ್ಲಿ ಕಠಿಣ ಕ್ರಮ : ಬೃಹನ್ಮಠದ ಆಡಳಿತಾಧಿಕಾರಿ ಎಚ್ಚರಿಕೆ*

October 30, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.30 : ಬೇಳೂರು ಮಠದ ಆಸ್ತಿಯಲ್ಲಿ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವವರು ಭೂಮಿಯನ್ನು ಮಠಕ್ಕೆ ಹಿಂದಿರುಗಿಸಬೇಕು, ತಪ್ಪಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಚಿತ್ರದುರ್ಗ ಬೃಹನ್ಮಠದ ಆಡಳಿತಾಧಿಕಾರಿ ರೇಖಾ ಅವರು ಎಚ್ಚರಿಕೆ ನೀಡಿದ್ದಾರೆ.
ಸೋಮವಾರಪೇಟೆ ಸಮೀಪದ ಬೇಳೂರು ಗ್ರಾಮದಲ್ಲಿ ಚಿತ್ರದುರ್ಗ ಬೃಹನ್ಮಠಕ್ಕೆ ಸೇರಿದ ಮಠದ ಆವರಣದಲ್ಲಿ ಮಠ ಹಾಗೂ ಮಠದ ಆಸ್ತಿಯ ಕುಂದುಕೊರತೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿಂತೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.
ಬೃಹನ್ಮಠದ ಆಸ್ತಿಯನ್ನು ಸಂರಕ್ಷಿಸಲು ಮತ್ತು ಕಾನೂನು ಹೋರಾಟ ನಡೆಸಲು ಹಿರಿಯ ಹಾಗೂ ಅನುಭವಿ ವಕೀಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಮಠದ ಆಸ್ತಿಯನ್ನು ಪ್ರಸ್ತುತ ಕೆಂಪು, ಹಳದಿ ಹಾಗೂ ಹಸಿರು ವಲಯಗಳನ್ನಾಗಿ ವಿಭಜಿಸಿ ಕಾನುನು ಘಟಕ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ. ಆದ್ದರಿಂದ ಅಕ್ರಮವಾಗಿ ಮಠದ ಆಸ್ತಿಯನ್ನು ಬಳಸಿಕೊಳ್ಳುತಿರುವವರು ನೀವಾಗಿಯೇ ಹಿಂತಿರುಗಿಸಿದರೆ ಒಳ್ಳೆಯದು ಎಂದು ತಿಳಿಸಿದರು.
ಮಠದ ಆಸ್ತಿ, ಮರಗಳ ಹನನ ಸೇರಿದಂತೆ ಇನ್ನಿತರ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅವರು ಮಠಗಳು ದಾಸೋಹಕ್ಕೆ ಮೊದಲ ಆದ್ಯತೆ ನೀಡುತ್ತವೆ. ಆದರೆ ಇಲ್ಲಿ ಅದ್ಯಾವುದೂ ನಡೆಯುತ್ತಿಲ್ಲ, ಆದ್ದರಿಂದ ನಾಳೆಯಿಂದಲೇ ಬೇಳೂರು ಮಠದಲ್ಲಿ ದಾಸೋಹ ಆರಂಭಿಸಬೇಕು ಎಂದು ವ್ಯವಸ್ಥಾಪಕ ಶಶಿಧರ್ ಅವರಿಗೆ ಆದೇಶಿಸಿದರು.
ಬೇಳೂರು ಮಠ, ಅಭಿಮಠ, ಗುತ್ತಿ ಮಠ, ಸೋಮವಾರಪೇಟೆ ವಿರಕ್ತ ಮಠ, ಗುತ್ತಿ ಮಠ ಹಾಗೂ ಚಂಗದ ಹಳ್ಳಿ ಮಠಗಳ ಅಭಿವೃದ್ಧಿಯೊಂದಿಗೆ ಎಲ್ಲಾ ಮಠಗಳಿಗೂ ಸ್ವಾಮೀಜಿಗಳನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಸಾಂಬಾಶಿವಾಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಸತೀಶ್, ತಾಲೂಕು ಅಧ್ಯಕ್ಷ ಹಾಲಪ್ಪ, ಮಾಜಿ ಜಿಲ್ಲಾಧ್ಯಕ್ಷ ಡಿ.ಬಿ.ಧರ್ಮಪ್ಪ, ಗ್ರಾಮಸ್ಥ ಪ್ರಜ್ವಲ್, ವೀರಶೈವ ಮುಖಂಡರುಗಳಾದ ಸಂತ್ವೇರಿ ವಸಂತ್, ಚಂಗಡಹಳ್ಳಿಯ ಹಾಲಪ್ಪ, ಸಂತೋಷ್ ಕೊಡ್ಲಿಪೇಟೆ ಹಾಗೂ ನಿರ್ಮಲ ನಾಗರಾಜ್ ಅವರುಗಳು ಮಾತನಾಡಿದರು.
ಕೊಡಗಿನ ಅರಸರು ಸುಮಾರು 3 ಸಾವಿರ ಏಕರೆಗಳಿಗಿಂತ ಹೆಚ್ಚಿನ ಭೂಮಿಯನ್ನು ಮುರುಘಾ ಮಠಕ್ಕೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಪ್ರಸ್ತುತ 550 ಏಕರೆ ಮಾತ್ರ ಇದೆ, ಹಾಗಾದರೆ ಉಳಿದ ಭೂಮಿ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.
ಇಂದು ಬಹುತೇಕ ಭೂಮಿ ಅಕ್ರಮವಾಗಿ ಬಳಕೆಯಾಗುತ್ತಿದೆ, ಅವುಗಳನ್ನು ಮರಳಿ ಪಡೆಯಬೇಕು. ಅದು ಸಮಾಜದ ಆಸ್ತಿಯಾಗಿ ಉಳಿಯಬೇಕೆಂದು ಹೇಳಿದರು. ತೋಟದ ಒಳಗೆ ಇದ್ದ ಮರಗಳನ್ನು ಕಡಿದು ಮಾರಲಾಗಿದೆ, ಇದರ ಹಣ ಮಠಕ್ಕೆ ಸೇರಿದೆಯೇ ಎಂದು ಪ್ರಶ್ನಿಸಿದರು. 200 ಏಕರೆ ತೋಟವನ್ನು ಹೊರರಾಜ್ಯದ ವ್ಯಕ್ತಿಗಳಿಗೆ ಅತ್ಯಂತ ಕಡಿಮೆ ಹಣಕ್ಕೆ ಗುತ್ತಿಗೆ ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದರು.
ಇದು ಹೆಸರಿಗಷ್ಟೇ ಮಠ, ಇಲ್ಲಿ ಹಸಿದು ಬರುವವರಿಗೆ ಅನ್ನ ಹಾಕಲಾರದಷ್ಟು ಹಾಳು ಬಿದ್ದಿದೆ. ಇಲ್ಲಿನ ಮಠಗಳಿಗೆ ಸ್ವಾಮೀಜಿಗಳು ಇಲ್ಲದೆ, ಧಾರ್ಮಿಕ ಚಟುವಟಿಕೆಗಳು ನಡೆಯದೆ ಪಾಳು ಬಿದ್ದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲಾ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ ಆಡಳಿತಾಧಿಕಾರಿಗಳು ನಿಮ್ಮೆಲ್ಲಾ ದೂರುಗಳ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬೃಹನ್ಮಠದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಕುಮಾರ್, ಮಾನವ ಸಂಪನ್ಮೂಲ ಅಧಿಕಾರಿ ವಿಜಯ, ಕಾನೂನು ಸಲಹೆಗಾರ ಹಿರಿಯ ವಕೀಲ ವಿಶ್ವನಾಥ, ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.
ಬೇಳೂರು, ಶನಿವಾರಸಂತೆ, ಕೊಡ್ಲಿಪೇಟೆ, ಚಂಗಡ ಹಳ್ಳಿ ಸುತ್ತಮುತ್ತಲ ಗ್ರಾಮಗಳಿಂದಲೂ ಗ್ರಾಮಸ್ಥರು ಹಾಗೂ ವೀರಶೈವ ಮುಖಂಡರು ಆಗಮಿಸಿದ್ದರು. ಮಠದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಜೀವನಮೌಲ್ಯವನ್ನು ಬದುಕಿನ ಭಾಗವಾಗಿಸಿಕೊಳ್ಳಿ : ಪ್ರತಿಮಾರೈ* 
Next Article *ನ.4 ರಂದು ಕೈಮುಡಿಕೆ ಪುತ್ತರಿ ಕೋಲ್ ಮಂದ್ ಪೂರ್ವಭಾವಿ ಸಭೆ* 

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.