Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೆದಮುಳ್ಳೂರು : ಆದಿವಾಸಿ ಕುಟುಂಬಗಳ ಮನೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ಕೆದಮುಳ್ಳೂರು : ಆದಿವಾಸಿ ಕುಟುಂಬಗಳ ಮನೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*

October 31, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.31 : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯ ಕೆದಮುಳ್ಳೂರು ಗ್ರಾಮದ ಸರ್ವೇ ನಂಬರ್ 370/1 ರ 7.50 ಎಕರೆ ಜಾಗದಲ್ಲಿ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಪ್ರಥಮ ಹಂತದಲ್ಲಿ 60 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ವಿದ್ಯುತ್ ಮತ್ತು ಕುಡಿಯುವ ನೀರು ಸಂಪರ್ಕ ಕಲ್ಪಿಸದೆ ಅರ್ಧಕ್ಕೆ ನಿಂತಿರುವ ಹಿನ್ನೆಲೆ ಈ ಕಾಮಗಾರಿಗಳ ಸಂಬಂಧ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಈಗಾಗಲೇ 60 ಮನೆಗಳ ನಿರ್ಮಾಣ ಕಾಮಗಾರಿ ನಡೆದಿದ್ದು, ಅರ್ಧಕ್ಕೆ ನಿಂತು ಹೋಗಿದೆ. ಈ ಸಂಬಂಧ ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಈಗಾಗಲೇ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗಿದೆ. ಆಹಾರ ಕಿಟ್, ಟಾರ್ಚ್ ವಿತರಿಸಲಾಗಿದೆ. ಸರ್ಕಾರ ಆದಿವಾಸಿಗಳು, ಬಡವರ ಒಳಿತಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ 75 ಕುಟುಂಬಗಳು ಹಾಗೂ ಸುತ್ತಮುತ್ತಲಿನ ಗ್ರಾ.ಪಂ.ವ್ಯಾಪ್ತಿಯ 54 ಒಟ್ಟು 129 ನಿರಾಶ್ರಿತ ಆದಿವಾಸಿ ಗಿರಿಜನ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸುವ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು.
ಜಿಲ್ಲಾಧಿಕಾರಿ ಡಾ.ವೆಂಕಟ್ ರಾಜಾ ಅವರು ಮಾತನಾಡಿ ಮನೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಸಂಬಂಧ ಪತ್ರ ವ್ಯವಹಾರ ಆಗಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಈ ಸಂಬಂಧ ಇಲಾಖೆಯ ನಿರ್ದೇಶಕರ ಜೊತೆ ಚರ್ಚಿಸಲಾಗುವುದು ಎಂದರು.
ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ವಿದ್ಯುತ್ ಹಾಗೂ ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. ಈ ಸಂಬಂಧ ಪ್ರಯತ್ನಿಸಲಾಗುವುದು ಎಂದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಮಾಹಿತಿ ನೀಡಿ ಸರ್ಕಾರದ ಆದೇಶದಲ್ಲಿ 5 ಲಕ್ಷ ರೂ. ತಲಾ ಘಟಕ ವೆಚ್ಚದಲ್ಲಿ 129 ಮನೆಗಳನ್ನು ನಿರ್ಮಾಣ ಮಾಡಲು 645 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲು ಆದೇಶಿಸಲಾಗಿತ್ತು. ಅದರಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಿಂದ ಶೇ.50 ರಷ್ಟು 322.50 ಲಕ್ಷ ರೂ. ಅನುದಾನ ಬಿಡುಗಡೆ ಆಗಿ, ಕೆಆರ್‍ಐಡಿಎಲ್ ಮೂಲಕ 5 ಲಕ್ಷ ರೂ. ಘಟಕ ವೆಚ್ಚಕ್ಕೆ ಸಿದ್ಧಪಡಿಸಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರತಿದೆ ಎಂದು ಹೇಳಿದರು.
ಕೆಆರ್‍ಐಡಿಎಲ್ ಸಂಸ್ಥೆಗೆ ಗರಿಷ್ಠ 2 ಕೋಟಿ ಮೊತ್ತಕ್ಕೆ ಕಾಮಗಾರಿ ಕೈಗೊಳ್ಳಲು ವಿನಾಯಿತಿ ನೀಡಲಾಗಿತ್ತು. ತಿದ್ದುಪಡಿ ಅಧಿನಿಯಮ 2021 ರ 4ನೇ ಪ್ರಕರಣದ 4 ಇರಡಿ ವಿನಾಯಿತಿ ನೀಡಿದ್ದು, ಕೆದಮುಳ್ಳೂರು ಗ್ರಾಮದಲ್ಲಿ 129 ಮನೆಗಳನ್ನು ನಾಲ್ಕು ಹಂತದಲ್ಲಿ (1ನೇ ಹಂತದಲ್ಲಿ 40, 2ನೇ ಹಂತದಲ್ಲಿ 40, 3ನೇ ಹಂತದಲ್ಲಿ 40, ನಾಲ್ಕನೇ ಹಂತದಲ್ಲಿ 9 ಮನೆಗಳನ್ನು ನಿರ್ಮಿಸಲು) ಸರ್ಕಾರದಿಂದ ನಿರ್ದೇಶನ ನೀಡಲಾಗಿತ್ತು ಎಂದು ಅವರು ವಿವರಿಸಿದರು.
ಅದರಂತೆ ಮೊದಲ ಹಂತದಲ್ಲಿ 40 ಮನೆಗಳನ್ನು ನಿರ್ಮಾಣ ಮಾಡಲು ಕಾರ್ಯಾದೇಶ ನೀಡಿ ಕಾಮಗಾರಿ ನಿರ್ವಹಿಸಲು ಶೇ.25 ರಷ್ಟು 150 ಲಕ್ಷ ರೂ. ಅನುದಾನವನ್ನು ಕಾರ್ಯಪಾಲಕ ಅಭಿಯಂತರರು ಕೆಆರ್‍ಐಡಿಎಲ್ ಹುಣಸೂರು ಅವರಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಸದ್ಯ ಪರಿಸ್ಕೃತ ಜಿಎಸ್‍ಟಿ ದರ ಸೇರಿದಂತೆ 2021-22 ನೇ ಸಾಲಿನ ಎಸ್.ಆರ್ ದರದಂತೆ ಪ್ರತಿ ಮನೆಗೆ 2.64 ಲಕ್ಷ ಗಳಂತೆ ಹೆಚ್ಚುವರಿಯಾಗಿ ಒಂದು ಮನೆ ಘಟಕ ವೆಚ್ಚ 7.64 ಲಕ್ಷ ರೂ. ಆಗುತ್ತದೆ. ಮನೆ ಕಾಮಗಾರಿ ಪ್ರಾರಂಭಿಸಲು ಬಾಕಿ ಇರುವ 89 ಮನೆಗಳ ಒಟ್ಟು 679.96 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲು ಪರಿಸ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲು ಕಾರ್ಯಪಾಲಕ ಅಭಿಯಂತರರು ಕೆಆರ್‍ಐಡಿಎಸ್ ಹುಣಸೂರು ಅವರು ಪತ್ರದಲ್ಲಿ ಕೋರಿದ್ದಾರೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ವಿವರಿಸಿದರು.
ಆಡಳಿತಾತ್ಮಕ ಮಂಜೂರಾತಿ ದೊರೆತಿರುವ 5 ಲಕ್ಷ ರೂ. ಘಟಕ ವೆಚ್ಚದ ಅಂದಾಜು ಪಟ್ಟಿಯಲ್ಲಿ ವಿದ್ಯುತ್ ಮತ್ತು ಕುಡಿಯುವ ನೀರು ಪೂರೈಕೆ ಒಳಗೊಂಡಿಲ್ಲದೆ ಇರುವುದರಿಂದ ಪ್ರಸ್ತುತ ಸಾಮಾಗ್ರಿಗಳ ದರ ಮತ್ತು ಎಸ್.ಆರ್ ದರ ಹೆಚ್ಚಾಗಿರುವುದರಿಂದ ಅಂದಾಜು ಪಟ್ಟಿಯಂತೆ ಅವಶ್ಯಕ ಕಾಮಗಾರಿ ಕೈಗೊಳ್ಳಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿದೆ ಎಂದು ಎಸ್.ಹೊನ್ನೇಗೌಡ ಅವರು ತಿಳಿಸಿದರು.
ಸದ್ಯ ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾ.ಪಂ.ಪ್ರಮುಖರು ಮಾಹಿತಿ ನೀಡಿದರು.
ಕೆಆರ್‍ಐಡಿಎಲ್ ಕಾರ್ಯಪಾಲಕ ಎಂಜಿನಿಯರ್ ಸುರೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಎಸ್.ಪ್ರಮೋದ್, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕರಾದ ಸಚಿನ್, ಗ್ರಾ.ಪಂ.ಅಧಿಕಾರಿಗಳು ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಯವ ಸಮಾಜದ ವಾರ್ಷಿಕ ಮಹಾಸಭೆ ಮತ್ತು ಸಂತೋಷ ಕೂಟ*
Next Article *‘ಜಾಗೃತಿ ಅರಿವು ಸಪ್ತಾಹ’ : ಮಡಿಕೇರಿಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.